ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ.

ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ ಕಬ್ಬಿನ ಜಲ್ಲೆಯನ್ನು ಹಿಂಡಿ ಹಾಲನ್ನು ಮಾರುವ ಅಂಗಡಿ ಸಾಮಾನ್ಯವಾಗಿ ಇದ್ದೇ ಇರುತ್ತದೆ. ಕಬ್ಬಿನಲ್ಲಿ ಉತ್ತಮ ರೀತಿಯ ಕಾರ್ಬೋಹೈಡ್ರೇಟ್ಗಳು, ಪ್ರೋಟಿನ್, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ಇದು ಆರೋಗ್ಯಕ್ಕೆ ಒಳ್ಳೆದು.
ಕಬ್ಬಿನ ಹಾಲಿನ ಉಪಯೋಗಗಳೇನು ತಿಳಿಯಿರಿ?
ಕ್ಯಾನ್ಸರ್ ನಿಂದ ರಕ್ಷಣೆ:
ಕಬ್ಬಿನ ಹಾಲಿನಲ್ಲಿ ಕ್ಯಾಲ್ಸಿಯಂ, ಮೆಗ್ನೇಶಿಯಂ, ಪೊಟ್ಯಾಶಿಯಮ್, ಕಬ್ಬಿಣ ಹಾಗೂ ಮ್ಯಾಂಗನೀಸ್ ಮೊದಲಾದ ಖನಿಜಗಳನ್ನು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ. ಅಲ್ಲದೇ ಇದರಲ್ಲಿರುವ ಫ್ಲೇವನಾಯ್ಡುಗಳು ಕ್ಯಾನ್ಸರ್ ಉಂಟು ಮಾಡುವ ಫ್ರೀ ರ್ಯಾಡಿಕಲ್ ಕಣಗಳ ವಿರುದ್ಧ ಹೋರಾಡುವ ಶಕ್ತಿ ಹೊಂದಿದೆ. ಹೀಗಾಗಿ ಇದನ್ನು ಸೇವಿಸಿದರೆ ನಿಮಗೆ ಸ್ತನ ಹಾಗೂ ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ವಿರುದ್ಧ ರಕ್ಷಣೆ ಒದಗಿಸುತ್ತದೆ.
ಮಧುಮೇಹ ಗುಣಪಡಿಸುತ್ತದೆ:
ಮಧುಮೇಹಿಗಳಿಗೆ ಸಕ್ಕರೆ ವಜ್ರ್ಯವಾದರೂ ಕಬ್ಬಿನ ರಸವನ್ನು ಆರಾಮಾಗಿ ಸೇವಿಸಬಹುದು. ಯಾಕೆಂದರೆ ಇದರ ಗ್ಲೈಸೆಮಿಕ್ ಕೋಷ್ಟಕ ಕಡಿಮೆ ಇರುವುದರಿಂದ ಹಾಗೂ ಇದರ ನೈಸರ್ಗಿಕ ಸಕ್ಕರೆ ಅಂಶ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಏರುವುದನ್ನು ತಡೆಯುತ್ತದೆ. ಹೀಗಾಗಿ ಕಬ್ಬಿನ ಹಾಲ ಸೇವನೆ ಮಧುಮೇಹ ಗುಣಪಡಿಸಲು ಸಹಕಾರಿಯಾಗಿದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ:
ಕಬ್ಬಿನ ಹಾಲಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ದೇಹದ ಹಲವಾರು ಸೋಂಕುಗಳ ವಿರುದ್ಧ ಹೋರಾಡುವ ಗುಣ ಹೊಂದಿದೆ. ಹಾಗೆಯೇ ದೇಹದ ರೋಗ ನಿರೋಧಕ ಶಕ್ತಿಯನ್ನು ಇದು ವೃದ್ಧಿಸುತ್ತದೆ. ಕಬ್ಬಿನ ಹಾಲಿನ ಸೇವನೆಯಿಂದ ದೇಹದ ಪೋಷಕಾಂಶಗಳ ಕೊರತೆ ನೀಗುತ್ತದೆ. ಇದರಲ್ಲಿರುವ ಪ್ರೋಟಿನ್ಗಳು ಘಾಸಿಗೊಂಡಿದ್ದ ಜೀವಕೋಶಗಳನ್ನು ಪುನರ್ಜೀವಗೊಳಿಸಲು ನೆರವಾಗುತ್ತದೆ.
ಮೊಡವೆಗಳನ್ನು ಕಡಿಮೆ ಮಾಡುತ್ತೆ:
ಕಬ್ಬಿನ ರಸದ ಸೇವನೆಯಿಂದ ಮೊಡವೆಗಳು ಮಾಯವಾಗುತ್ತವೆ. ಇದರಲ್ಲಿರುವ ಆಲ್ಫಾ-ಹೈಡ್ರಾಕ್ಸಿ-ಆಮ್ಲಗಳು ದೇಹದಲ್ಲಿ ಬಿಳಿರಕ್ತಕಣಗಳ ಸಂಖ್ಯೆ ಹೆಚ್ಚು ಮಾಡುತ್ತದೆ. ಹೀಗಾಗಿ ಕಬ್ಬಿನ ಹಾಲಿನ್ನು ನಿಯಮಿತವಾಗಿ ಸೇವಿಸಿದರೆ ಬಿಳಿರಕ್ತಕಣಗಳು ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ. ಹಾಗೆಯೇ ಚರ್ಮದಡಿಯಲ್ಲಿ ಸಂಗ್ರಹಗೊಂಡಿದ್ದ ಸೋಂಕುಗಳನ್ನು ನಿವಾರಿಸಿ ಮೊಡವೆಗಳನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆಗೆ ಉತ್ತಮ:
ಒಂದು ವೇಳೆ ಅಜೀರ್ಣತೆ ತೊಂದರೆ ಇದ್ದರೆ ನಿತ್ಯವೂ ಕಬ್ಬಿನ ಹಾಲನ್ನು ಸೇವಿಸುವುದು ಒಳ್ಳೆದು. ಇದರ ವಿರೇಚಕ ಗುಣ ಜೀರ್ಣಾಂಗಗಳಲ್ಲಿ ಉಂಟಾಗಿದ್ದ ಉರಿಯೂತವನ್ನು ನಿವಾರಿಸಿ ಮಲಬದ್ಧತೆಯಾಗದಂತೆ ನೋಡಿಕೊಳ್ಳುತ್ತದೆ. ಹಾಗೆಯೇ ಹೊಟ್ಟೆಯುಬ್ಬರಿಕೆ ಹಾಗೂ ಹೊಟ್ಟೆಯ ಸೆಡೆತಗಳಿಂದಲೂ ರಕ್ಷಣೆ ನೀಡುತ್ತದೆ. ಇದರಲ್ಲಿರುವ ಪೊಟ್ಯಾಶಿಯಂ ಜಠರದಲ್ಲಿ ಪಿಎಚ್ ಮಟ್ಟವನ್ನು ಸರಿಯಾಗಿರಿಸಲು ನೆರವಾಗುತ್ತದೆ.
ಹೃದಯದ ಆರೋಗ್ಯಕ್ಕಾಗಿ:
ಕಬ್ಬಿನ ಹಾಲಿನ ಸೇವನೆಯಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ. ಇದರ ಜೊತೆಗೆ ಹೃದಯದ ಆರೋಗ್ಯವನ್ನು ಕಾಪಾಡುವ ಟ್ರೈಗ್ಲಿಸರೈಡ್ಗಳ ಪ್ರಮಾಣವನ್ನು ಸಂತುಲಿತ ಮಟ್ಟದಲ್ಲಿರಿಸುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಹಾಗೆಯೇ ಹೃದಯಾಘಾತ, ಸ್ಟ್ರೋಕ್ ಆಗದಂತೆ ನೋಡಿಕೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ.
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…