ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ.

ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ ಕಬ್ಬಿನ ಜಲ್ಲೆಯನ್ನು ಹಿಂಡಿ ಹಾಲನ್ನು ಮಾರುವ ಅಂಗಡಿ ಸಾಮಾನ್ಯವಾಗಿ ಇದ್ದೇ ಇರುತ್ತದೆ. ಕಬ್ಬಿನಲ್ಲಿ ಉತ್ತಮ ರೀತಿಯ ಕಾರ್ಬೋಹೈಡ್ರೇಟ್ಗಳು, ಪ್ರೋಟಿನ್, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ಇದು ಆರೋಗ್ಯಕ್ಕೆ ಒಳ್ಳೆದು.
ಕಬ್ಬಿನ ಹಾಲಿನ ಉಪಯೋಗಗಳೇನು ತಿಳಿಯಿರಿ?
ಕ್ಯಾನ್ಸರ್ ನಿಂದ ರಕ್ಷಣೆ:
ಕಬ್ಬಿನ ಹಾಲಿನಲ್ಲಿ ಕ್ಯಾಲ್ಸಿಯಂ, ಮೆಗ್ನೇಶಿಯಂ, ಪೊಟ್ಯಾಶಿಯಮ್, ಕಬ್ಬಿಣ ಹಾಗೂ ಮ್ಯಾಂಗನೀಸ್ ಮೊದಲಾದ ಖನಿಜಗಳನ್ನು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ. ಅಲ್ಲದೇ ಇದರಲ್ಲಿರುವ ಫ್ಲೇವನಾಯ್ಡುಗಳು ಕ್ಯಾನ್ಸರ್ ಉಂಟು ಮಾಡುವ ಫ್ರೀ ರ್ಯಾಡಿಕಲ್ ಕಣಗಳ ವಿರುದ್ಧ ಹೋರಾಡುವ ಶಕ್ತಿ ಹೊಂದಿದೆ. ಹೀಗಾಗಿ ಇದನ್ನು ಸೇವಿಸಿದರೆ ನಿಮಗೆ ಸ್ತನ ಹಾಗೂ ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ವಿರುದ್ಧ ರಕ್ಷಣೆ ಒದಗಿಸುತ್ತದೆ.
ಮಧುಮೇಹ ಗುಣಪಡಿಸುತ್ತದೆ:
ಮಧುಮೇಹಿಗಳಿಗೆ ಸಕ್ಕರೆ ವಜ್ರ್ಯವಾದರೂ ಕಬ್ಬಿನ ರಸವನ್ನು ಆರಾಮಾಗಿ ಸೇವಿಸಬಹುದು. ಯಾಕೆಂದರೆ ಇದರ ಗ್ಲೈಸೆಮಿಕ್ ಕೋಷ್ಟಕ ಕಡಿಮೆ ಇರುವುದರಿಂದ ಹಾಗೂ ಇದರ ನೈಸರ್ಗಿಕ ಸಕ್ಕರೆ ಅಂಶ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಏರುವುದನ್ನು ತಡೆಯುತ್ತದೆ. ಹೀಗಾಗಿ ಕಬ್ಬಿನ ಹಾಲ ಸೇವನೆ ಮಧುಮೇಹ ಗುಣಪಡಿಸಲು ಸಹಕಾರಿಯಾಗಿದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ:
ಕಬ್ಬಿನ ಹಾಲಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ದೇಹದ ಹಲವಾರು ಸೋಂಕುಗಳ ವಿರುದ್ಧ ಹೋರಾಡುವ ಗುಣ ಹೊಂದಿದೆ. ಹಾಗೆಯೇ ದೇಹದ ರೋಗ ನಿರೋಧಕ ಶಕ್ತಿಯನ್ನು ಇದು ವೃದ್ಧಿಸುತ್ತದೆ. ಕಬ್ಬಿನ ಹಾಲಿನ ಸೇವನೆಯಿಂದ ದೇಹದ ಪೋಷಕಾಂಶಗಳ ಕೊರತೆ ನೀಗುತ್ತದೆ. ಇದರಲ್ಲಿರುವ ಪ್ರೋಟಿನ್ಗಳು ಘಾಸಿಗೊಂಡಿದ್ದ ಜೀವಕೋಶಗಳನ್ನು ಪುನರ್ಜೀವಗೊಳಿಸಲು ನೆರವಾಗುತ್ತದೆ.
ಮೊಡವೆಗಳನ್ನು ಕಡಿಮೆ ಮಾಡುತ್ತೆ:
ಕಬ್ಬಿನ ರಸದ ಸೇವನೆಯಿಂದ ಮೊಡವೆಗಳು ಮಾಯವಾಗುತ್ತವೆ. ಇದರಲ್ಲಿರುವ ಆಲ್ಫಾ-ಹೈಡ್ರಾಕ್ಸಿ-ಆಮ್ಲಗಳು ದೇಹದಲ್ಲಿ ಬಿಳಿರಕ್ತಕಣಗಳ ಸಂಖ್ಯೆ ಹೆಚ್ಚು ಮಾಡುತ್ತದೆ. ಹೀಗಾಗಿ ಕಬ್ಬಿನ ಹಾಲಿನ್ನು ನಿಯಮಿತವಾಗಿ ಸೇವಿಸಿದರೆ ಬಿಳಿರಕ್ತಕಣಗಳು ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ. ಹಾಗೆಯೇ ಚರ್ಮದಡಿಯಲ್ಲಿ ಸಂಗ್ರಹಗೊಂಡಿದ್ದ ಸೋಂಕುಗಳನ್ನು ನಿವಾರಿಸಿ ಮೊಡವೆಗಳನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆಗೆ ಉತ್ತಮ:
ಒಂದು ವೇಳೆ ಅಜೀರ್ಣತೆ ತೊಂದರೆ ಇದ್ದರೆ ನಿತ್ಯವೂ ಕಬ್ಬಿನ ಹಾಲನ್ನು ಸೇವಿಸುವುದು ಒಳ್ಳೆದು. ಇದರ ವಿರೇಚಕ ಗುಣ ಜೀರ್ಣಾಂಗಗಳಲ್ಲಿ ಉಂಟಾಗಿದ್ದ ಉರಿಯೂತವನ್ನು ನಿವಾರಿಸಿ ಮಲಬದ್ಧತೆಯಾಗದಂತೆ ನೋಡಿಕೊಳ್ಳುತ್ತದೆ. ಹಾಗೆಯೇ ಹೊಟ್ಟೆಯುಬ್ಬರಿಕೆ ಹಾಗೂ ಹೊಟ್ಟೆಯ ಸೆಡೆತಗಳಿಂದಲೂ ರಕ್ಷಣೆ ನೀಡುತ್ತದೆ. ಇದರಲ್ಲಿರುವ ಪೊಟ್ಯಾಶಿಯಂ ಜಠರದಲ್ಲಿ ಪಿಎಚ್ ಮಟ್ಟವನ್ನು ಸರಿಯಾಗಿರಿಸಲು ನೆರವಾಗುತ್ತದೆ.
ಹೃದಯದ ಆರೋಗ್ಯಕ್ಕಾಗಿ:
ಕಬ್ಬಿನ ಹಾಲಿನ ಸೇವನೆಯಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ. ಇದರ ಜೊತೆಗೆ ಹೃದಯದ ಆರೋಗ್ಯವನ್ನು ಕಾಪಾಡುವ ಟ್ರೈಗ್ಲಿಸರೈಡ್ಗಳ ಪ್ರಮಾಣವನ್ನು ಸಂತುಲಿತ ಮಟ್ಟದಲ್ಲಿರಿಸುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಹಾಗೆಯೇ ಹೃದಯಾಘಾತ, ಸ್ಟ್ರೋಕ್ ಆಗದಂತೆ ನೋಡಿಕೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…
ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…