News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಈತ 100 ಕಿ.ಮೀ. ದೂರದಿಂದ ಎದ್ದು ಬಂದಿದ್ದೇಗೆ ಗೊತ್ತಾ?

262

ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್‌ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ.

ಬಕ್ಸಾ ಜಿಲ್ಲೆಯ ತಾಮುಲ್ಪುರದ ಧುಲಬಾರಿಯ ನಿವಾಸಿಯಾಗಿದ್ದ 27 ವರ್ಷದ ಸ್ವರ್ಗೀಯರಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಗುವಾಹಟಿಯ ಸರೈಘಾಟ್ ಸೇತುವೆಯನ್ನು ತಲುಪಿದ್ದಾನೆ. ಪರ್ಸ್, ಮೊಬೈಲ್ ಫೋನ್, ಗುರುತಿನ ದಾಖಲೆಗಳು, ಚಪ್ಪಲಿ ಸೇರಿದಂತೆ ದ್ವಿಚಕ್ರ ವಾಹನವನ್ನು ಸೇತುವೆ ಮೇಲೆ ಬಿಟ್ಟು ಬ್ರಹ್ಮಪುತ್ರ ನದಿಗೆ ಹಾರಿದ್ದಾನೆ.ಕೂಡಲೇ ಆತ ನದಿಯ ಮೇಲೆ ತೇಲುತ್ತಿದ್ದ ನೀರಿನ ಜೊಂಡು ಮತ್ತು ಬಾಳೆ ಎಲೆಯನ್ನು ಗಮನಿಸಿದ್ದಾನೆ. ಅದನ್ನು ಹಿಡಿದು ಈಜಲು ಶುರುಮಾಡಿದ್ದಾನೆ. ರಾತ್ರಿಯಿಡೀ ಈಜುತ್ತಲೇ ಸಾಗಿದ್ದ ಈತನನ್ನು ಮರುದಿನ ಬೆಳಗ್ಗೆ ಅಸ್ಸಾಂನ ಬರ್ಪೇಟಾ ಜಿಲ್ಲೆಯ ಬೊಹೊರಿಯಲ್ಲಿನ ದೋಣಿಗಾರರು ರಕ್ಷಿಸಿದ್ದಾರೆ.

ಕಲಾಚಂದ್ ಅಲಿ ಎಂಬಾತ ದೋಣಿ ನಡೆಸುತ್ತಿದ್ದಾಗ ಬಟ್ಟೆಗಳಿಲ್ಲದೆ ನೀರಿನಲ್ಲಿ ತೇಲಿ ಬರುತ್ತಿದ್ದ ಸ್ವರ್ಗೀಯರಿಯನ್ನು ರಕ್ಷಿಸಿದ್ದಾನೆ. ನಾನು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೆ. ಆಗ ಯಾರೋ ಸಹಾಯಕ್ಕಾಗಿ ಕೇಳುತ್ತಿದ್ದರು. ಕೊನೆಗೆ ಆತನನ್ನು ಪತ್ತೆ ಮಾಡಿ ದೋಣಿಯನ್ನು ಅವನ ಕಡೆಗೆ ತೆಗೆದುಕೊಂಡು ಅವನನ್ನು ರಕ್ಷಿಸಿದೆ ಎಂದು ಹೇಳಿದ್ದಾರೆ.

ದಡಕ್ಕೆ ಸೇರಿದ ನಂತರ ಆತನನ್ನು ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ಸೇರಸಲಾಗಿದ್ದು, ಆತ್ಮಹತ್ಯೆಗೆ ಮುಂದಾಗಿದ್ದು ಯಾಕೆ ಎನ್ನುವುದಕ್ಕೆ ಯಾವುದೇ ಕಾರಣವನ್ನು ತಿಳಿಸದ ಆತ ನನ್ನ ಜೀವನವನ್ನು ಕೊನೆಗೊಳಿಸಲು ನಾನು ಬಯಸಿದ್ದೆ. ಹಾಗಾಗಿ ನದಿಗೆ ಹಾರಿದೆ. ಆದರೆ ನಾನು ಸಾಯಲು ಆಗಲಿಲ್ಲ. ನೀರಿಗೆ ಬಿದ್ದ ತಕ್ಷಣ ನಾನು ಬದುಕಬೇಕು ಎನಿಸಿತು ಎಂದು ಸುದ್ದಿಗಾರರಿಗೆ ತಿಳಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ, ವಿಸ್ಮಯ ಜಗತ್ತು

    ಇವಳೇ ರೋಬೋಟ್ ತಯಾರಿಸಿ, ಇವಳೇ ರೋಬೋಟ್ ಪ್ರೀತಿಯಲ್ಲಿ ಬಿದ್ದಿದ್ದಾಳೆ..!ಈ ಲೇಖನ ಓದಿ ಶಾಕ್ ಆಗ್ತೀರಾ… ..

    ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

  • ಕ್ರೀಡೆ

    ವೈರಲ್ ಆಯ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ, ತನ್ನ ಮಗುವಿನೊಂದಿಗೆ ಇರುವ ಫೋಟೋ..!ಮಗು ಹೇಗಿದೆ ಗೊತ್ತಾ..?

    ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…

  • ಸಿನಿಮಾ

    ಯಾರಿದು ಧ್ರುವ ಸರ್ಜಾ ಮದುವೆಯಾಗುತ್ತಿರುವ ಪ್ರೇರಣಾ!ಯಾವ ಲವ್ ಸ್ಟೋರಿಗೂ ಕಡಿಮೆ ಇಲ್ಲ ಇವರ 16ವರ್ಷದ ಪ್ರೇಮ್ ಕಹಾನಿ..

    ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…

  • govt, ಉದ್ಯೋಗ

    IFFCO ನೇಮಕಾತಿ 2020

    ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….

  • inspirational

    ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

    – ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…