News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಈತ 100 ಕಿ.ಮೀ. ದೂರದಿಂದ ಎದ್ದು ಬಂದಿದ್ದೇಗೆ ಗೊತ್ತಾ?

264

ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್‌ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ.

ಬಕ್ಸಾ ಜಿಲ್ಲೆಯ ತಾಮುಲ್ಪುರದ ಧುಲಬಾರಿಯ ನಿವಾಸಿಯಾಗಿದ್ದ 27 ವರ್ಷದ ಸ್ವರ್ಗೀಯರಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಗುವಾಹಟಿಯ ಸರೈಘಾಟ್ ಸೇತುವೆಯನ್ನು ತಲುಪಿದ್ದಾನೆ. ಪರ್ಸ್, ಮೊಬೈಲ್ ಫೋನ್, ಗುರುತಿನ ದಾಖಲೆಗಳು, ಚಪ್ಪಲಿ ಸೇರಿದಂತೆ ದ್ವಿಚಕ್ರ ವಾಹನವನ್ನು ಸೇತುವೆ ಮೇಲೆ ಬಿಟ್ಟು ಬ್ರಹ್ಮಪುತ್ರ ನದಿಗೆ ಹಾರಿದ್ದಾನೆ.ಕೂಡಲೇ ಆತ ನದಿಯ ಮೇಲೆ ತೇಲುತ್ತಿದ್ದ ನೀರಿನ ಜೊಂಡು ಮತ್ತು ಬಾಳೆ ಎಲೆಯನ್ನು ಗಮನಿಸಿದ್ದಾನೆ. ಅದನ್ನು ಹಿಡಿದು ಈಜಲು ಶುರುಮಾಡಿದ್ದಾನೆ. ರಾತ್ರಿಯಿಡೀ ಈಜುತ್ತಲೇ ಸಾಗಿದ್ದ ಈತನನ್ನು ಮರುದಿನ ಬೆಳಗ್ಗೆ ಅಸ್ಸಾಂನ ಬರ್ಪೇಟಾ ಜಿಲ್ಲೆಯ ಬೊಹೊರಿಯಲ್ಲಿನ ದೋಣಿಗಾರರು ರಕ್ಷಿಸಿದ್ದಾರೆ.

ಕಲಾಚಂದ್ ಅಲಿ ಎಂಬಾತ ದೋಣಿ ನಡೆಸುತ್ತಿದ್ದಾಗ ಬಟ್ಟೆಗಳಿಲ್ಲದೆ ನೀರಿನಲ್ಲಿ ತೇಲಿ ಬರುತ್ತಿದ್ದ ಸ್ವರ್ಗೀಯರಿಯನ್ನು ರಕ್ಷಿಸಿದ್ದಾನೆ. ನಾನು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೆ. ಆಗ ಯಾರೋ ಸಹಾಯಕ್ಕಾಗಿ ಕೇಳುತ್ತಿದ್ದರು. ಕೊನೆಗೆ ಆತನನ್ನು ಪತ್ತೆ ಮಾಡಿ ದೋಣಿಯನ್ನು ಅವನ ಕಡೆಗೆ ತೆಗೆದುಕೊಂಡು ಅವನನ್ನು ರಕ್ಷಿಸಿದೆ ಎಂದು ಹೇಳಿದ್ದಾರೆ.

ದಡಕ್ಕೆ ಸೇರಿದ ನಂತರ ಆತನನ್ನು ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ಸೇರಸಲಾಗಿದ್ದು, ಆತ್ಮಹತ್ಯೆಗೆ ಮುಂದಾಗಿದ್ದು ಯಾಕೆ ಎನ್ನುವುದಕ್ಕೆ ಯಾವುದೇ ಕಾರಣವನ್ನು ತಿಳಿಸದ ಆತ ನನ್ನ ಜೀವನವನ್ನು ಕೊನೆಗೊಳಿಸಲು ನಾನು ಬಯಸಿದ್ದೆ. ಹಾಗಾಗಿ ನದಿಗೆ ಹಾರಿದೆ. ಆದರೆ ನಾನು ಸಾಯಲು ಆಗಲಿಲ್ಲ. ನೀರಿಗೆ ಬಿದ್ದ ತಕ್ಷಣ ನಾನು ಬದುಕಬೇಕು ಎನಿಸಿತು ಎಂದು ಸುದ್ದಿಗಾರರಿಗೆ ತಿಳಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

    ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….

  • ವಿಸ್ಮಯ ಜಗತ್ತು

    ಇಂತಹ ಮೈ ಜುಮ್ಮೆನಿಸುವ ಶವ ಸಂಸ್ಕಾರ ನೀವು ಎಲ್ಲಿಯೂ ನೋಡಿಲ್ಲ, ಕೇಳಿಲ್ಲ!ಗುಂಡಿಗೆ ಇರೋರು ಮಾತ್ರ ಓದಿ…

    ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…

  • ಸರ್ಕಾರಿ ಯೋಜನೆಗಳು

    ಜೂನ್‌ ತಿಂಗಳಿನಿಂದ ಸರ್ಕಾರಿ ಬಸ್ ಪ್ರಯಾಣ ದರ ಶೇ 20ರಷ್ಟು ಏರಿಕೆ …!

    ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…