ಸುದ್ದಿ

ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಈತ 100 ಕಿ.ಮೀ. ದೂರದಿಂದ ಎದ್ದು ಬಂದಿದ್ದೇಗೆ ಗೊತ್ತಾ?

251

ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್‌ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ.

ಬಕ್ಸಾ ಜಿಲ್ಲೆಯ ತಾಮುಲ್ಪುರದ ಧುಲಬಾರಿಯ ನಿವಾಸಿಯಾಗಿದ್ದ 27 ವರ್ಷದ ಸ್ವರ್ಗೀಯರಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಗುವಾಹಟಿಯ ಸರೈಘಾಟ್ ಸೇತುವೆಯನ್ನು ತಲುಪಿದ್ದಾನೆ. ಪರ್ಸ್, ಮೊಬೈಲ್ ಫೋನ್, ಗುರುತಿನ ದಾಖಲೆಗಳು, ಚಪ್ಪಲಿ ಸೇರಿದಂತೆ ದ್ವಿಚಕ್ರ ವಾಹನವನ್ನು ಸೇತುವೆ ಮೇಲೆ ಬಿಟ್ಟು ಬ್ರಹ್ಮಪುತ್ರ ನದಿಗೆ ಹಾರಿದ್ದಾನೆ.ಕೂಡಲೇ ಆತ ನದಿಯ ಮೇಲೆ ತೇಲುತ್ತಿದ್ದ ನೀರಿನ ಜೊಂಡು ಮತ್ತು ಬಾಳೆ ಎಲೆಯನ್ನು ಗಮನಿಸಿದ್ದಾನೆ. ಅದನ್ನು ಹಿಡಿದು ಈಜಲು ಶುರುಮಾಡಿದ್ದಾನೆ. ರಾತ್ರಿಯಿಡೀ ಈಜುತ್ತಲೇ ಸಾಗಿದ್ದ ಈತನನ್ನು ಮರುದಿನ ಬೆಳಗ್ಗೆ ಅಸ್ಸಾಂನ ಬರ್ಪೇಟಾ ಜಿಲ್ಲೆಯ ಬೊಹೊರಿಯಲ್ಲಿನ ದೋಣಿಗಾರರು ರಕ್ಷಿಸಿದ್ದಾರೆ.

ಕಲಾಚಂದ್ ಅಲಿ ಎಂಬಾತ ದೋಣಿ ನಡೆಸುತ್ತಿದ್ದಾಗ ಬಟ್ಟೆಗಳಿಲ್ಲದೆ ನೀರಿನಲ್ಲಿ ತೇಲಿ ಬರುತ್ತಿದ್ದ ಸ್ವರ್ಗೀಯರಿಯನ್ನು ರಕ್ಷಿಸಿದ್ದಾನೆ. ನಾನು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೆ. ಆಗ ಯಾರೋ ಸಹಾಯಕ್ಕಾಗಿ ಕೇಳುತ್ತಿದ್ದರು. ಕೊನೆಗೆ ಆತನನ್ನು ಪತ್ತೆ ಮಾಡಿ ದೋಣಿಯನ್ನು ಅವನ ಕಡೆಗೆ ತೆಗೆದುಕೊಂಡು ಅವನನ್ನು ರಕ್ಷಿಸಿದೆ ಎಂದು ಹೇಳಿದ್ದಾರೆ.

ದಡಕ್ಕೆ ಸೇರಿದ ನಂತರ ಆತನನ್ನು ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ಸೇರಸಲಾಗಿದ್ದು, ಆತ್ಮಹತ್ಯೆಗೆ ಮುಂದಾಗಿದ್ದು ಯಾಕೆ ಎನ್ನುವುದಕ್ಕೆ ಯಾವುದೇ ಕಾರಣವನ್ನು ತಿಳಿಸದ ಆತ ನನ್ನ ಜೀವನವನ್ನು ಕೊನೆಗೊಳಿಸಲು ನಾನು ಬಯಸಿದ್ದೆ. ಹಾಗಾಗಿ ನದಿಗೆ ಹಾರಿದೆ. ಆದರೆ ನಾನು ಸಾಯಲು ಆಗಲಿಲ್ಲ. ನೀರಿಗೆ ಬಿದ್ದ ತಕ್ಷಣ ನಾನು ಬದುಕಬೇಕು ಎನಿಸಿತು ಎಂದು ಸುದ್ದಿಗಾರರಿಗೆ ತಿಳಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…

  • ಉಪಯುಕ್ತ ಮಾಹಿತಿ

    ಮಳೆಗಾಲದಲ್ಲಿ ಬರುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ರಾಜಕೀಯ

    ಸಿದ್ದರಾಮಯ್ಯನವರು ಜೆಡಿಎಸ್ ಬಿಟ್ಟು ಬರಲು ಕಾರಣವೇನು…?ರೆಬೆಲ್ ಶಾಸಕ ಬಾಲಕೃಷ್ಣರವರು ಕೊಟ್ಟ ಹೇಳಿಕೆ..!

    ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಸುದ್ದಿ

    ರಾಯಲ್ ಆಗಿದೆ ‘Bigg Boss House’; ಇದನ್ನೊಮ್ಮೆ ನೋಡಿ,.!

    ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…