ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ.

ಬಕ್ಸಾ ಜಿಲ್ಲೆಯ ತಾಮುಲ್ಪುರದ ಧುಲಬಾರಿಯ ನಿವಾಸಿಯಾಗಿದ್ದ 27 ವರ್ಷದ ಸ್ವರ್ಗೀಯರಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಗುವಾಹಟಿಯ ಸರೈಘಾಟ್ ಸೇತುವೆಯನ್ನು ತಲುಪಿದ್ದಾನೆ. ಪರ್ಸ್, ಮೊಬೈಲ್ ಫೋನ್, ಗುರುತಿನ ದಾಖಲೆಗಳು, ಚಪ್ಪಲಿ ಸೇರಿದಂತೆ ದ್ವಿಚಕ್ರ ವಾಹನವನ್ನು ಸೇತುವೆ ಮೇಲೆ ಬಿಟ್ಟು ಬ್ರಹ್ಮಪುತ್ರ ನದಿಗೆ ಹಾರಿದ್ದಾನೆ.ಕೂಡಲೇ ಆತ ನದಿಯ ಮೇಲೆ ತೇಲುತ್ತಿದ್ದ ನೀರಿನ ಜೊಂಡು ಮತ್ತು ಬಾಳೆ ಎಲೆಯನ್ನು ಗಮನಿಸಿದ್ದಾನೆ. ಅದನ್ನು ಹಿಡಿದು ಈಜಲು ಶುರುಮಾಡಿದ್ದಾನೆ. ರಾತ್ರಿಯಿಡೀ ಈಜುತ್ತಲೇ ಸಾಗಿದ್ದ ಈತನನ್ನು ಮರುದಿನ ಬೆಳಗ್ಗೆ ಅಸ್ಸಾಂನ ಬರ್ಪೇಟಾ ಜಿಲ್ಲೆಯ ಬೊಹೊರಿಯಲ್ಲಿನ ದೋಣಿಗಾರರು ರಕ್ಷಿಸಿದ್ದಾರೆ.

ಕಲಾಚಂದ್ ಅಲಿ ಎಂಬಾತ ದೋಣಿ ನಡೆಸುತ್ತಿದ್ದಾಗ ಬಟ್ಟೆಗಳಿಲ್ಲದೆ ನೀರಿನಲ್ಲಿ ತೇಲಿ ಬರುತ್ತಿದ್ದ ಸ್ವರ್ಗೀಯರಿಯನ್ನು ರಕ್ಷಿಸಿದ್ದಾನೆ. ನಾನು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೆ. ಆಗ ಯಾರೋ ಸಹಾಯಕ್ಕಾಗಿ ಕೇಳುತ್ತಿದ್ದರು. ಕೊನೆಗೆ ಆತನನ್ನು ಪತ್ತೆ ಮಾಡಿ ದೋಣಿಯನ್ನು ಅವನ ಕಡೆಗೆ ತೆಗೆದುಕೊಂಡು ಅವನನ್ನು ರಕ್ಷಿಸಿದೆ ಎಂದು ಹೇಳಿದ್ದಾರೆ.

ದಡಕ್ಕೆ ಸೇರಿದ ನಂತರ ಆತನನ್ನು ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ಸೇರಸಲಾಗಿದ್ದು, ಆತ್ಮಹತ್ಯೆಗೆ ಮುಂದಾಗಿದ್ದು ಯಾಕೆ ಎನ್ನುವುದಕ್ಕೆ ಯಾವುದೇ ಕಾರಣವನ್ನು ತಿಳಿಸದ ಆತ ನನ್ನ ಜೀವನವನ್ನು ಕೊನೆಗೊಳಿಸಲು ನಾನು ಬಯಸಿದ್ದೆ. ಹಾಗಾಗಿ ನದಿಗೆ ಹಾರಿದೆ. ಆದರೆ ನಾನು ಸಾಯಲು ಆಗಲಿಲ್ಲ. ನೀರಿಗೆ ಬಿದ್ದ ತಕ್ಷಣ ನಾನು ಬದುಕಬೇಕು ಎನಿಸಿತು ಎಂದು ಸುದ್ದಿಗಾರರಿಗೆ ತಿಳಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.
ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…