ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ.

ಬಕ್ಸಾ ಜಿಲ್ಲೆಯ ತಾಮುಲ್ಪುರದ ಧುಲಬಾರಿಯ ನಿವಾಸಿಯಾಗಿದ್ದ 27 ವರ್ಷದ ಸ್ವರ್ಗೀಯರಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಗುವಾಹಟಿಯ ಸರೈಘಾಟ್ ಸೇತುವೆಯನ್ನು ತಲುಪಿದ್ದಾನೆ. ಪರ್ಸ್, ಮೊಬೈಲ್ ಫೋನ್, ಗುರುತಿನ ದಾಖಲೆಗಳು, ಚಪ್ಪಲಿ ಸೇರಿದಂತೆ ದ್ವಿಚಕ್ರ ವಾಹನವನ್ನು ಸೇತುವೆ ಮೇಲೆ ಬಿಟ್ಟು ಬ್ರಹ್ಮಪುತ್ರ ನದಿಗೆ ಹಾರಿದ್ದಾನೆ.ಕೂಡಲೇ ಆತ ನದಿಯ ಮೇಲೆ ತೇಲುತ್ತಿದ್ದ ನೀರಿನ ಜೊಂಡು ಮತ್ತು ಬಾಳೆ ಎಲೆಯನ್ನು ಗಮನಿಸಿದ್ದಾನೆ. ಅದನ್ನು ಹಿಡಿದು ಈಜಲು ಶುರುಮಾಡಿದ್ದಾನೆ. ರಾತ್ರಿಯಿಡೀ ಈಜುತ್ತಲೇ ಸಾಗಿದ್ದ ಈತನನ್ನು ಮರುದಿನ ಬೆಳಗ್ಗೆ ಅಸ್ಸಾಂನ ಬರ್ಪೇಟಾ ಜಿಲ್ಲೆಯ ಬೊಹೊರಿಯಲ್ಲಿನ ದೋಣಿಗಾರರು ರಕ್ಷಿಸಿದ್ದಾರೆ.

ಕಲಾಚಂದ್ ಅಲಿ ಎಂಬಾತ ದೋಣಿ ನಡೆಸುತ್ತಿದ್ದಾಗ ಬಟ್ಟೆಗಳಿಲ್ಲದೆ ನೀರಿನಲ್ಲಿ ತೇಲಿ ಬರುತ್ತಿದ್ದ ಸ್ವರ್ಗೀಯರಿಯನ್ನು ರಕ್ಷಿಸಿದ್ದಾನೆ. ನಾನು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೆ. ಆಗ ಯಾರೋ ಸಹಾಯಕ್ಕಾಗಿ ಕೇಳುತ್ತಿದ್ದರು. ಕೊನೆಗೆ ಆತನನ್ನು ಪತ್ತೆ ಮಾಡಿ ದೋಣಿಯನ್ನು ಅವನ ಕಡೆಗೆ ತೆಗೆದುಕೊಂಡು ಅವನನ್ನು ರಕ್ಷಿಸಿದೆ ಎಂದು ಹೇಳಿದ್ದಾರೆ.

ದಡಕ್ಕೆ ಸೇರಿದ ನಂತರ ಆತನನ್ನು ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ಸೇರಸಲಾಗಿದ್ದು, ಆತ್ಮಹತ್ಯೆಗೆ ಮುಂದಾಗಿದ್ದು ಯಾಕೆ ಎನ್ನುವುದಕ್ಕೆ ಯಾವುದೇ ಕಾರಣವನ್ನು ತಿಳಿಸದ ಆತ ನನ್ನ ಜೀವನವನ್ನು ಕೊನೆಗೊಳಿಸಲು ನಾನು ಬಯಸಿದ್ದೆ. ಹಾಗಾಗಿ ನದಿಗೆ ಹಾರಿದೆ. ಆದರೆ ನಾನು ಸಾಯಲು ಆಗಲಿಲ್ಲ. ನೀರಿಗೆ ಬಿದ್ದ ತಕ್ಷಣ ನಾನು ಬದುಕಬೇಕು ಎನಿಸಿತು ಎಂದು ಸುದ್ದಿಗಾರರಿಗೆ ತಿಳಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್ಮ್ಯಾನ್ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್ಮ್ಯಾನ್ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ. ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.