ಸುದ್ದಿ

ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಈತ 100 ಕಿ.ಮೀ. ದೂರದಿಂದ ಎದ್ದು ಬಂದಿದ್ದೇಗೆ ಗೊತ್ತಾ?

255

ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್‌ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ.

ಬಕ್ಸಾ ಜಿಲ್ಲೆಯ ತಾಮುಲ್ಪುರದ ಧುಲಬಾರಿಯ ನಿವಾಸಿಯಾಗಿದ್ದ 27 ವರ್ಷದ ಸ್ವರ್ಗೀಯರಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಗುವಾಹಟಿಯ ಸರೈಘಾಟ್ ಸೇತುವೆಯನ್ನು ತಲುಪಿದ್ದಾನೆ. ಪರ್ಸ್, ಮೊಬೈಲ್ ಫೋನ್, ಗುರುತಿನ ದಾಖಲೆಗಳು, ಚಪ್ಪಲಿ ಸೇರಿದಂತೆ ದ್ವಿಚಕ್ರ ವಾಹನವನ್ನು ಸೇತುವೆ ಮೇಲೆ ಬಿಟ್ಟು ಬ್ರಹ್ಮಪುತ್ರ ನದಿಗೆ ಹಾರಿದ್ದಾನೆ.ಕೂಡಲೇ ಆತ ನದಿಯ ಮೇಲೆ ತೇಲುತ್ತಿದ್ದ ನೀರಿನ ಜೊಂಡು ಮತ್ತು ಬಾಳೆ ಎಲೆಯನ್ನು ಗಮನಿಸಿದ್ದಾನೆ. ಅದನ್ನು ಹಿಡಿದು ಈಜಲು ಶುರುಮಾಡಿದ್ದಾನೆ. ರಾತ್ರಿಯಿಡೀ ಈಜುತ್ತಲೇ ಸಾಗಿದ್ದ ಈತನನ್ನು ಮರುದಿನ ಬೆಳಗ್ಗೆ ಅಸ್ಸಾಂನ ಬರ್ಪೇಟಾ ಜಿಲ್ಲೆಯ ಬೊಹೊರಿಯಲ್ಲಿನ ದೋಣಿಗಾರರು ರಕ್ಷಿಸಿದ್ದಾರೆ.

ಕಲಾಚಂದ್ ಅಲಿ ಎಂಬಾತ ದೋಣಿ ನಡೆಸುತ್ತಿದ್ದಾಗ ಬಟ್ಟೆಗಳಿಲ್ಲದೆ ನೀರಿನಲ್ಲಿ ತೇಲಿ ಬರುತ್ತಿದ್ದ ಸ್ವರ್ಗೀಯರಿಯನ್ನು ರಕ್ಷಿಸಿದ್ದಾನೆ. ನಾನು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೆ. ಆಗ ಯಾರೋ ಸಹಾಯಕ್ಕಾಗಿ ಕೇಳುತ್ತಿದ್ದರು. ಕೊನೆಗೆ ಆತನನ್ನು ಪತ್ತೆ ಮಾಡಿ ದೋಣಿಯನ್ನು ಅವನ ಕಡೆಗೆ ತೆಗೆದುಕೊಂಡು ಅವನನ್ನು ರಕ್ಷಿಸಿದೆ ಎಂದು ಹೇಳಿದ್ದಾರೆ.

ದಡಕ್ಕೆ ಸೇರಿದ ನಂತರ ಆತನನ್ನು ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ಸೇರಸಲಾಗಿದ್ದು, ಆತ್ಮಹತ್ಯೆಗೆ ಮುಂದಾಗಿದ್ದು ಯಾಕೆ ಎನ್ನುವುದಕ್ಕೆ ಯಾವುದೇ ಕಾರಣವನ್ನು ತಿಳಿಸದ ಆತ ನನ್ನ ಜೀವನವನ್ನು ಕೊನೆಗೊಳಿಸಲು ನಾನು ಬಯಸಿದ್ದೆ. ಹಾಗಾಗಿ ನದಿಗೆ ಹಾರಿದೆ. ಆದರೆ ನಾನು ಸಾಯಲು ಆಗಲಿಲ್ಲ. ನೀರಿಗೆ ಬಿದ್ದ ತಕ್ಷಣ ನಾನು ಬದುಕಬೇಕು ಎನಿಸಿತು ಎಂದು ಸುದ್ದಿಗಾರರಿಗೆ ತಿಳಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಸಿಬಿಸಿ ಕಾಫಿ ಕುಡಿಯಿರಿ:ʼತೂಕʼ ಇಳಿಸಿಕೊಳ್ಳಿ…..!

    ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್‌ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್‌ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್‌ ಫ್ಯಾಟ್‌ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…

  • ಜ್ಯೋತಿಷ್ಯ

    ಸುಬ್ರಮಣ್ಯ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…

  • ಸುದ್ದಿ

    ಪೊಲೀಸರ ನಿರ್ಲಕ್ಷ್ಯ. ಪಾಕ್ ಪರ ಘೋಷಣೆ ಕೂಗಿದ್ದ ದೇಶದ್ರೋಹಿ ವಿದ್ಯಾರ್ಥಿಗಳ ಬಿಡುಗಡೆ!ಕಿಡಿಕಾರಿದ ವಕೀಲರು.

    ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್‍ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…

  • ಕ್ರೀಡೆ

    RCB ಸೋಲಿಗೆ ಕಾರಣವಾಗಿದ್ದು ಅದೊಂದು ಬಾಲ್.!ಆಕ್ರೋಶ ಹೊರಹಾಕಿದ ವಿರಾಟ್…

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…

  • ಸುದ್ದಿ

    1200 ಕೋಟಿ ಕೊಡುತ್ತೇನೆಂದರೂ ತನ್ನ ಮಗಳನ್ನು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ. ಈ ಕೋಟಿ ಅಧಿಪತಿಯ ರೋದನೆ ತೀರುವುದು ಯಾವಾಗ.?

    ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…