ಸುದ್ದಿ

ಮತ್ತೆ ಮಂಡ್ಯದಲ್ಲಿ ಜೋಡೆತ್ತುಗಳ ಅಬ್ಬರ: ಸುಮಲತಾ ಅವರ ಮುಂದಿನ ಪ್ಲಾನ್ ಏನು?

26

ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ.

200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ ಮಾಡುವಾಗ ಬಹುತೇಕ ಎಲ್ಲ ಹಳ್ಳಿಗಳಿಗೂ ದರ್ಶನ್ ಮತ್ತು ಯಶ್ ಹೋಗಿದ್ದರು. ಈಗ ಮತ್ತೊಮ್ಮೆ ಎಲ್ಲ ಹಳ್ಳಿಗಳಿಗೂ ಭೇಟಿ ನೀಡಲು ನಿರ್ಧರಿಸಿದ್ದಾರೆ. ಮಂಡ್ಯ ಜಿಲ್ಲೆಯ 8 ವಿಧಾನಸಭೆಯ ಸುಮಾರು 200 ಹಳ್ಳಿಗಳಿಗೆ ದರ್ಶನ್-ಯಶ್ ಮತ್ತು ಸುಮಲತಾ ಭೇಟಿ ನೀಡಿ ಕೃತಜ್ಞತೆ ಸಲ್ಲಿಸುವ ಯೋಜನೆ ಹಾಕಿಕೊಂಡಿದ್ದಾರಂತೆ.

ನಾವು ಮಂಡ್ಯದಲ್ಲೇ ಇರುತ್ತೇವೆ ಗೆದ್ದು ಸಂಭ್ರಮಿಸಿ ಸುಮ್ಮನಾಗದ ಸುಮಲತಾ ಮತ್ತು ಜೋಡೆತ್ತುಗಳು, ಮಂಡ್ಯ ಜನರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆಯಲು ಮುಂದಾಗಿದ್ದಾರೆ. ‘ನಾವು ಮಂಡ್ಯದಲ್ಲೇ ಇರುತ್ತೇವೆ, ಮಂಡ್ಯ ಜನರ ಜೊತೆಯಲ್ಲೇ ಇರುತ್ತೇವೆ. ಮಂಡ್ಯ ಅಭಿವೃದ್ದಿಗಾಗಿ ನಾವು ಇರುತ್ತೇವೆ’ ಎಂದು ಸಾರಲು ವಿಜಯಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಯಾತ್ರೆಯಿಂದ ಸುಮಲತಾ ಅವರಿಗೆ ಮತ್ತಷ್ಟು ಜನಬೆಂಬಲ ಸಿಗುವುದು ಪಕ್ಕಾ.

ಯಾವ ಪಕ್ಷಕ್ಕೂ ಹೋಗಲ್ಲ ಅಂಬಿ ಪತ್ನಿ ಮಂಡ್ಯದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿತ್ತು. ಗೆದ್ದ ಬಳಿಕ ಸುಮಲತಾ ಬಿಜೆಪಿಗೆ ಹೋಗ್ತಾರೆ ಎನ್ನಲಾಗುತ್ತಿತ್ತು. ಅದೇ ರೀತಿ ಮಂಡ್ಯದ ಕಾಂಗ್ರೆಸ್ ನಾಯಕರು ಪರೋಕ್ಷವಾಗಿ ಸುಮಲತಾ ಗೆಲುವಿಗೆ ಶ್ರಮಿಸಿದ್ದರು. ನಂತರ ಕಾಂಗ್ರೆಸ್ ಗೆ ಸುಮಲತಾ ಅವರನ್ನ ಕರೆತರುವ ಪ್ರಯತ್ನ ಸಾಗುತ್ತಿದೆ ಎಂಬ ಮಾತು ಚರ್ಚೆಯಾಯಿತು. ಈ ನಡುವೆ ಯಾವ ಪಕ್ಷಕ್ಕೂ ಹೋಗದಿರಲು ಸುಮಲತಾ ನಿರ್ಧರಿಸಿದ್ದಾರಂತೆ. ‘ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದು, ಹಾಗೆ ಕೆಲಸ ಮಾಡುತ್ತೇನೆ’ ಎಂಬ ಮಾತು ಹೇಳಿದ್ದಾರಂತೆ.

ಸುಮಲತಾ ಪ್ಲಾನ್ ಏನು? ಯಾವುದೇ ರಾಜಕೀಯ ಪಕ್ಷದ ಮುಖ ನೋಡಿ ಸುಮಲತಾಗೆ ಮಂಡ್ಯ ಜನ ವೋಟ್ ಹಾಕಿಲ್ಲ. ಅಂಬರೀಶ್ ಪತ್ನಿ, ಪಕ್ಷೇತರ ಅಭ್ಯರ್ಥಿ ಎಂದು ಗೆಲ್ಲಿಸಿದ್ದಾರೆ. ಈಗ ಯಾವುದಾದರೂ ಪಕ್ಷಕ್ಕೆ ಹೋದರೇ ಮುಂದಿನ ದಿನದಲ್ಲಿ ಕಷ್ಟವಾಗುತ್ತೆ. ಹಾಗಾಗಿ, ಪಕ್ಷೇತರವಾಗಿ ಉಳಿದು, ಜೋಡೆತ್ತುಗಳ ಜೊತೆಯಲ್ಲಿ ಮಂಡ್ಯ ಸಂಸದೆಯಾಗಿ ಮುಂದುವರಿಯಲು ಸುಮಲತಾ ಪ್ಲಾನ್ ಮಾಡಿದ್ದಾರೆ. ಇದನ್ನ ಮತ್ತೊಮ್ಮೆ ಮಂಡ್ಯ ಜನರಿಗೆ ಸಾರಿ ಹೇಳಲು ವಿಜಯಯಾತ್ರೆ ಕೈಗೊಳ್ಳಲು ತೀರ್ಮಾನಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಜ್ಞಾನ

    ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

    ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…

  • ಸುದ್ದಿ

    ಕೃಷ್ಣ ಜನ್ಮಾಷ್ಠಮಿಯಂದು ನವಿಲು ಗರಿಯನ್ನು ನಿಮ್ಮ ಮನೆಯ ಈ ಭಾಗದಲ್ಲಿಡಿ..ಅದೃಷ್ಟವಂತರಾಗಿ….!

    ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…

  • ಗ್ಯಾಜೆಟ್

    ನಿಮ್ಮ ಮೊಬೈಲ್ ನೀರಿಗೆ ಬಿದ್ರೆ,ಏನ್ ಮಾಡಬೇಕು..?ಏನ್ ಮಾಡಬಾರದು..?ತಿಳಿಯಲು ಈ ಲೇಖನ ನೋಡಿ…

    ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.

  • ಉಪಯುಕ್ತ ಮಾಹಿತಿ

    ಜೀನ್ಸ್ ಪ್ಯಾಂಟುಗಳಲ್ಲಿ ಈ ರೀತಿಯ ಚಿಕ್ಕ ಜೇಬುಗಳು ಏಕೆ ಇರುತ್ತದೆ ಗೊತ್ತಾ, ಈ ಜೇಬಿನ ರಹಸ್ಯ ನೋಡಿ.

    ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what   …