News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮತ್ತೆ ಮಂಡ್ಯದಲ್ಲಿ ಜೋಡೆತ್ತುಗಳ ಅಬ್ಬರ: ಸುಮಲತಾ ಅವರ ಮುಂದಿನ ಪ್ಲಾನ್ ಏನು?

32

ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ.

200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ ಮಾಡುವಾಗ ಬಹುತೇಕ ಎಲ್ಲ ಹಳ್ಳಿಗಳಿಗೂ ದರ್ಶನ್ ಮತ್ತು ಯಶ್ ಹೋಗಿದ್ದರು. ಈಗ ಮತ್ತೊಮ್ಮೆ ಎಲ್ಲ ಹಳ್ಳಿಗಳಿಗೂ ಭೇಟಿ ನೀಡಲು ನಿರ್ಧರಿಸಿದ್ದಾರೆ. ಮಂಡ್ಯ ಜಿಲ್ಲೆಯ 8 ವಿಧಾನಸಭೆಯ ಸುಮಾರು 200 ಹಳ್ಳಿಗಳಿಗೆ ದರ್ಶನ್-ಯಶ್ ಮತ್ತು ಸುಮಲತಾ ಭೇಟಿ ನೀಡಿ ಕೃತಜ್ಞತೆ ಸಲ್ಲಿಸುವ ಯೋಜನೆ ಹಾಕಿಕೊಂಡಿದ್ದಾರಂತೆ.

ನಾವು ಮಂಡ್ಯದಲ್ಲೇ ಇರುತ್ತೇವೆ ಗೆದ್ದು ಸಂಭ್ರಮಿಸಿ ಸುಮ್ಮನಾಗದ ಸುಮಲತಾ ಮತ್ತು ಜೋಡೆತ್ತುಗಳು, ಮಂಡ್ಯ ಜನರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆಯಲು ಮುಂದಾಗಿದ್ದಾರೆ. ‘ನಾವು ಮಂಡ್ಯದಲ್ಲೇ ಇರುತ್ತೇವೆ, ಮಂಡ್ಯ ಜನರ ಜೊತೆಯಲ್ಲೇ ಇರುತ್ತೇವೆ. ಮಂಡ್ಯ ಅಭಿವೃದ್ದಿಗಾಗಿ ನಾವು ಇರುತ್ತೇವೆ’ ಎಂದು ಸಾರಲು ವಿಜಯಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಯಾತ್ರೆಯಿಂದ ಸುಮಲತಾ ಅವರಿಗೆ ಮತ್ತಷ್ಟು ಜನಬೆಂಬಲ ಸಿಗುವುದು ಪಕ್ಕಾ.

ಯಾವ ಪಕ್ಷಕ್ಕೂ ಹೋಗಲ್ಲ ಅಂಬಿ ಪತ್ನಿ ಮಂಡ್ಯದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿತ್ತು. ಗೆದ್ದ ಬಳಿಕ ಸುಮಲತಾ ಬಿಜೆಪಿಗೆ ಹೋಗ್ತಾರೆ ಎನ್ನಲಾಗುತ್ತಿತ್ತು. ಅದೇ ರೀತಿ ಮಂಡ್ಯದ ಕಾಂಗ್ರೆಸ್ ನಾಯಕರು ಪರೋಕ್ಷವಾಗಿ ಸುಮಲತಾ ಗೆಲುವಿಗೆ ಶ್ರಮಿಸಿದ್ದರು. ನಂತರ ಕಾಂಗ್ರೆಸ್ ಗೆ ಸುಮಲತಾ ಅವರನ್ನ ಕರೆತರುವ ಪ್ರಯತ್ನ ಸಾಗುತ್ತಿದೆ ಎಂಬ ಮಾತು ಚರ್ಚೆಯಾಯಿತು. ಈ ನಡುವೆ ಯಾವ ಪಕ್ಷಕ್ಕೂ ಹೋಗದಿರಲು ಸುಮಲತಾ ನಿರ್ಧರಿಸಿದ್ದಾರಂತೆ. ‘ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದು, ಹಾಗೆ ಕೆಲಸ ಮಾಡುತ್ತೇನೆ’ ಎಂಬ ಮಾತು ಹೇಳಿದ್ದಾರಂತೆ.

ಸುಮಲತಾ ಪ್ಲಾನ್ ಏನು? ಯಾವುದೇ ರಾಜಕೀಯ ಪಕ್ಷದ ಮುಖ ನೋಡಿ ಸುಮಲತಾಗೆ ಮಂಡ್ಯ ಜನ ವೋಟ್ ಹಾಕಿಲ್ಲ. ಅಂಬರೀಶ್ ಪತ್ನಿ, ಪಕ್ಷೇತರ ಅಭ್ಯರ್ಥಿ ಎಂದು ಗೆಲ್ಲಿಸಿದ್ದಾರೆ. ಈಗ ಯಾವುದಾದರೂ ಪಕ್ಷಕ್ಕೆ ಹೋದರೇ ಮುಂದಿನ ದಿನದಲ್ಲಿ ಕಷ್ಟವಾಗುತ್ತೆ. ಹಾಗಾಗಿ, ಪಕ್ಷೇತರವಾಗಿ ಉಳಿದು, ಜೋಡೆತ್ತುಗಳ ಜೊತೆಯಲ್ಲಿ ಮಂಡ್ಯ ಸಂಸದೆಯಾಗಿ ಮುಂದುವರಿಯಲು ಸುಮಲತಾ ಪ್ಲಾನ್ ಮಾಡಿದ್ದಾರೆ. ಇದನ್ನ ಮತ್ತೊಮ್ಮೆ ಮಂಡ್ಯ ಜನರಿಗೆ ಸಾರಿ ಹೇಳಲು ವಿಜಯಯಾತ್ರೆ ಕೈಗೊಳ್ಳಲು ತೀರ್ಮಾನಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…

  • ಸಿನಿಮಾ

    ಸ್ವಾತಂತ್ರ್ಯ ಬಂದ ನಂತರ ಮೊದಲ ಉಗ್ರ ಹಿಂದೂ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ನಟ ಕಮಲ್ ಹಾಸನ್..!

    ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…

  • ಆಧ್ಯಾತ್ಮ, ದೇವರು-ಧರ್ಮ

    ರಾಯರು ಇನ್ನೂ ಬದುಕಿದ್ದಾರೆ ಎನ್ನುವುದಕ್ಕೆ ಇಲ್ಲಿವೆ ಸಾಕ್ಷಿಗಳು ಮತ್ತು ರಾಯರ ಪವಾಡಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ದಾಂಪತ್ಯ ಜೀವನವೆಂದರೆ ಬರೀ ಅರ್ಥ ಧರ್ಮ ಕಾಮಾವೇ..?ಸುಖ ದಾಂಪತ್ಯ ಜೀವನವೆಂದರೆ ಹೇಗಿರಬೇಕು?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…

  • ಆರೋಗ್ಯ

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾದ ಪೋಷಕಾಂಶಗಳಿವೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.