News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ರುಚಿಕರವಾದ ಹಯಗ್ರೀವ ಮಾಡುವ ವಿಧಾನ ಹೇಗೆ ಗೊತ್ತಾ.?

143

ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ.
ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ.

ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್‌‌‌, ತೆಂಗಿನ ತುರಿ – 1ಕಪ್‌, ಬೆಲ್ಲ – 1 ಕಪ್‌‌‌‌, ತುಪ್ಪ – 1 ಕಪ್‌‌‌
ಏಲಕ್ಕಿ ಪುಡಿ – 1/2 ಸ್ಪೂನ್, ಗಸಗಸೆ – 1/4 ಕಪ್‌‌, ಗೋಡಂಬಿ – 1/4 ಕಪ್‌‌‌, ಬಾದಾಮಿ – 1/4ಕಪ್‌‌‌
ಒಣದ್ರಾಕ್ಷಿ – 1/4 ಕಪ್‌‌‌.

ತಯಾರಿಸುವ ವಿಧಾನ

ಒಂದು ಬೌಲ್ನಲ್ಲಿ ಕಡಲೇ ಬೇಳೆಯನ್ನು ಹಾಕಿ. ಅದಕ್ಕೆ 2 ಕಪ್ ನೀರನ್ನು ಸೇರಿಸಿ ಅರ್ಧ ಗಂಟೆ ನೆನೆಯಲು ಬಿಡಿ. ನೆನೆಸಿಕೊಂಡ ಕಡಲೇ ಬೇಳೆಯನ್ನು ಕುಕ್ಕರ್‌ಗೆ ಹಾಕಿ. ಅರ್ಧ ಕಪ್ ನೀರನ್ನು ಸೇರಿಸಿ. 4-5 ಸೀಟಿ ಕೂಗಿಸಿ ಬೇಯಿಸಿ. ನಂತರ ಆರಲು ಬಿಡಿ. ಮುಚ್ಚಳವನ್ನು ತೆರೆದು, ಲಘು ಪ್ರಮಾಣದಲ್ಲಿ ಬೇಳೆಯನ್ನು ಅರೆದು ಒಂದೆಡೆ ಇಡಿ. ಒಂದು ಪಾತ್ರೆಯಲ್ಲಿ ಬೆಲ್ಲವನ್ನು ಸೇರಿಸಿ ಬಿಸಿ ಮಾಡಿ. ತಕ್ಷಣವೇ ಅರ್ಧ ಕಪ್ ನೀರನ್ನು ಬೆರೆಸಿ. ಬೆಲ್ಲ ಸಂಪೂರ್ಣವಾಗಿ ಕರಗಲು, ಮಧ್ಯಮ ಉರಿಯಲ್ಲಿ 5-7 ನಿಮಿಷಗಳ ಕಾಲ ಕುದಿಸಿ. ಬೆಲ್ಲದ ಪಾಕಕ್ಕೆ ಬೇಯಿಸಿಕೊಂಡ ಬೇಳೆಯನ್ನು ಸೇರಿಸಿ ಚೆನ್ನಾಗಿ ಬೆರೆಸಿ. ಗಸಗಸೆಯನ್ನು ಬೆರೆಸಿ, ಚೆನ್ನಾಗಿ ಮಿಶ್ರಗೊಳಿಸಿ, 3 ಟೇಬಲ್ ಚಮಚ ತುಪ್ಪವನ್ನು ಸೇರಿಸಿ. ಇವೆಲ್ಲವನ್ನು 15 ನಿಮಿಷಗಳ ಕಾಲ ಚೆನ್ನಾಗಿ ಬೇಯಿಸಿ, ಒಣದ್ರಾಕ್ಷಿ ಮತ್ತು ಒಣ ತೆಂಗಿನ ತುರಿಯನ್ನು ಸೇರಿಸಿ. ಪುನಃ 5 ಟೇಬಲ್ ಚಮಚ ತುಪ್ಪವನ್ನು ಸೇರಿಸಿ, ಚೆನ್ನಾಗಿ ಮಿಶ್ರಗೊಳಿಸಿ. ಇದನ್ನು 2 ನಿಮಿಷ ಬೇಯಿಸಲು ಬಿಡಿ. ಈ ಮಧ್ಯೆ, ಒಂದು ಚಿಕ್ಕ ಪಾತ್ರೆಯಲ್ಲಿ ಒಂದು ಟೇಬಲ್ ಚಮಚ ತುಪ್ಪವನ್ನು ಸೇರಿಸಿ ಬಿಸಿ ಮಾಡಿ, ಕತ್ತರಿಸಿಕೊಂಡ ಗೋಡಂಬಿಯನ್ನು ಹಾಕಿ 2 ನಿಮಿಷ ಹುರಿಯಿರಿ. ಅವು ಹುರಿದು ಹೊಂಬಣ್ಣಕ್ಕೆ ತಿರುಗಬೇಕು,ನಂತರ ಲವಂಗವನ್ನು ಸೇರಿಸಿ ಬೇಯಿಸಿದ ಗೋಡಂಬಿ ಮಿಶ್ರಣವನ್ನು ಬೆಲ್ಲ ಮತ್ತು ಬೇಳೆಯ ಮಿಶ್ರಣಕ್ಕೆ ಸೇರಿಸಿ. ಏಲಕ್ಕಿ ಪುಡಿಯನ್ನು ಸೇರಿಸಿ, ಚೆನ್ನಾಗಿ ಬೆರೆಸಿ, ಬಿಸಿ ಇರುವಾಗಲೇ ಸವಿಯಲು ನೀಡಿ.

ಸಲಹೆ : ಕಡಲೇ ಬೇಳೆಯನ್ನು ನೆನೆಸಿಕೊಂಡರೆ ನುಣ್ಣಗೆ ಬೇಯುತ್ತದೆ. ಒಣಗಿದ ತೆಂಗಿನ ತುರಿ ಸೇರಿಸುವುದು ನಿಮ್ಮ ಆಯ್ಕೆ. ಗಸಗಸೆಯನ್ನು ಸೇರಿಸುವುದು ನಿಮ್ಮ ಆಯ್ಕೆಗೆ ಬಿಟ್ಟಿದ್ದು.
ಕ್ಯಾಲೋರಿ – 256.9 ಕ್ಯಾಲ್ ಫ್ಯಾಟ್ – 11.4 ಗ್ರಾಂ. ಪ್ರೋಟೀನ್ – 21.1 ಗ್ರಾಂ. ಕಾರ್ಬೋಹೈಡ್ರೇಟ್ – 61 ಗ್ರಾಂ. ಸಕ್ಕರೆ – 24.8 ಗ್ರಾಂ. ಫೈಬರ್ – 6.2 ಗ್ರಾಂ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಗಂಡನಿಗೆ ಬುರ್ಖಾ ಹಾಕಿಸಿ ಉಟಕ್ಕೆ ಕರೆದುಕೊಂಡು ಹೋದ ಯುವತಿ!

    ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…

  • ದೇಶ-ವಿದೇಶ

    ಹೇಡಿ ನೀಚ ಉಗ್ರರಿಂದ ಅಮರನಾಥ ಯಾತ್ರಾ, ಶಿವ ಭಕ್ತರ ಮೇಲೆ ದಾಳಿ…

    ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.

  • ಸಿನಿಮಾ

    ಶಾಕಿಂಗ್ ನ್ಯೂಸ್, ಪ್ರಥಮ್ ನಿಂದ ಲೈವ್ ಪ್ರೇಮ ಪತ್ರ ! ಯಾರಿಗೆ? ಏನಾಯಿತು?

    ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…

  • ಆರೋಗ್ಯ

    ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

    ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…