inspirational

ನೀರೊಳಗಿರುವ ಟೈಟಾನಿಕ್ ಹಡಗನ್ನು ಮೇಲೆತ್ತುವ ಪ್ರಯತ್ನವನ್ನು ಯಾರು ಮಾಡುತ್ತಿಲ್ಲ ಏಕೆ? ರೋಚಕ ಸತ್ಯವನ್ನು ತಿಳಿಯಿರಿ.

815

ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು. ಇನ್ನು ಈ ಸಿನೆಮಾ ಅಂದಿನ ಕಾಲದಲ್ಲೇ ಸುಮಾರ 20 ಕೋಟಿ USD ಯಲ್ಲಿ ನಿರ್ಮಾಣ ಮಾಡಲಾಗಿತ್ತು, ಜೇಮ್ಸ್ ಕ್ಯಾಮರೂನ್ ಇರ್ದೆಶಿಸಿದ ಈ ಚಿತ್ರ ಇಂದಿಗೂ ಒಂದು ದೊಡ್ಡ ಸಾಧನೆಯೇ ಸರಿ.

ಇನ್ನು ಈ ಟೈಟಾನಿಕ್ ಮುಳುಗಿ ಅದರ ಅವಶೇಷಗಳು ಈಗಲೂ ಸುಮುದ್ರದಾಳದಲ್ಲಿ ಇರುವುದು ನಮಗೆಲ್ಲ ತಿಳಿದೇ ಇದೆ. ಪ್ರಪಂಚದ ಅತಿ ದೊಡ್ಡ ಹಡಗು ಮುಳುಗಿ ಎಷ್ಟೊಂದು ಜನ ಸಾವನ್ನಪ್ಪಿದರೂ ಕೂಡ ಈ ಹಡಗನ್ನು ಮೇಲೆತ್ತುವ ಕೆಲಸವನ್ನು ಇಂದಿಗೂ ಕೂಡ ಮಾಡಿಲ್ಲ ಯಾಕೆ ಗೊತ್ತಾ. ಯಾಕೆ ಟೈಟಾನಿಕ್ ಇನ್ನು ಸಮುದ್ರದಲ್ಲೇ ಇದೆ ಇದನ್ನು ಎತ್ತುವ ಪ್ರಯತ್ನ ಮಾಡಿ ಯಾವುದಾದರೂ ಒಂದು ಮ್ಯೂಸಿಯಂ ಮಾಡಾಬಹುದಲ್ಲ ಎನ್ನುವ ಪ್ರಶ್ನೆ ಹಲವರನ್ನು ಕಾಡುತ್ತದೆ, ಸ್ನೇಹಿತರೆ ಈ ವಿಶಾಲ ಹಡಗಿನ ಬಗ್ಗೆ ಇರುವ ರೋಚಕ ಸಂಗತಿ ತಿಳಿಯಿರಿ. 1912 ರಲ್ಲಿ ಮುಳುಗಿದ ಈ ಶಿಪ್ ಬಹಳ ವಿಶಾಲವಾದ ಗಾತ್ರ ಹೊಂದಿತ್ತು, ಈ ಶಿಪ್ ಮುಳುಗಿ ಈಗಾಗಲೇ ನೂರಕ್ಕೂ ಅಧಿಕ ವರ್ಷವಾಗಿದೆ.

ಪ್ರಸ್ತುತ ಈ ಹಡಗು ಈಗ 12,500 ಅಡಿಗಳಷ್ಟು ಆಳದಲ್ಲಿದೆ, ಅಷ್ಟೊಂದು ಆಳದಲ್ಲಿರುವ ಇದನ್ನು ಎತ್ತುವುದು ಕೂಡ ಅಸಾಧ್ಯದ ಕೆಲಸ ಏಕೆಂದರೆ ಅಷ್ಟೊಂದು ಆಳದಿಂದ ಮೇಲ್ಬರುವ ಸಮಯದಲ್ಲಿ ಇದು ಹಲವಾರು ಒತ್ತಡಗಳನ್ನು ಅನುಭವಿಸುತ್ತದೆ ಹೀಗಾಗಿ ಯಾವುದೇ ಕ್ಷಣದಲ್ಲೂ ಕೂಡ ಇದು ಕುಸಿದು ಮತ್ತೆ ನೀರಿನ ಆಳಕ್ಕೆ ಬೀಳಬಹುದು. ಟೈಟಾನಿಕ್ ಅನ್ನು ಮೇಲೆತ್ತಿದರೂ ಕೂಡ ನೀವು ಆ ಹಡಗನ್ನು ಎಲ್ಲಿ ಇಡುತ್ತೀರಿ ಎನ್ನುವುದೇ ಒಂದು ದೊಡ್ಡ ಪ್ರಶ್ನೆಯಾಗಿದೆ, 1912 ರಲ್ಲಿ ಟೈಟಾನಿಕ್ 882 ಅಡಿ ಉದ್ದವಿತ್ತು, ಇದು ಈಗಲೂ ಸಾಕಷ್ಟು ದೊಡ್ಡ ಗಾತ್ರವಾಗಿದೆ. ನೀರೊಳಗಿನ ಈ ಅವಶೇಷ ಸದ್ಯಕ್ಕೆ ಸಂಪೂರ್ಣ ಹದಗೆಟ್ಟಿದೆ ಮತ್ತು ಅದನ್ನು ತಂದು ಭೂಮಿ ಮೇಲೆ ಇಡುವುದು ಮೂರ್ಖತನ ಎನ್ನುವುದು ಹಲವರ ವಾದ ಇನ್ನು ಮತ್ತೊಂದು ಮುಖ್ಯ ಕಾರಣ ಎಂದರೆ ಟೈಟಾನಿಕ್ ಹಡಗಿನ ವಾರಸುದಾರ ಯಾರು ಎನ್ನುವ ಬಗ್ಗೆ ಹಲವಾರು ಗೊಂದಲಗಳಿವೆ, ಇದು ಯಾವ ಕಂಪನಿಯ ಸೊತ್ತು ಎನ್ನುವುದರ ಬಗ್ಗೆ ಕೆಲವು ಸಮಸ್ಯೆಗಳಿವೆ.

ಟೈಟಾನಿಕ್ ಮೇಲೆತ್ತದೆ ಇರಲು ಮತ್ತೊಂದು ಮುಖ್ಯ ಕಾರಣ ಎಂದರೆ ಹಣದ ದುಂದು ವೆಚ್ಚ, ಉದಾಹರಣೆಗೆ 50 ಅಡಿ ವಿಹಾರ ನೌಕೆಯನ್ನು ನೀವು ಮೇಲೆತ್ತಲು ಕೇವಲ ಏರ್‌ಬ್ಯಾಗ್‌ಗಳ ಬಳಕೆಗಾಗಿ ಗಂಟೆಗೆ $ 250 ಖರ್ಚಾಗುತ್ತದೆ. ಇನ್ನು ಇಷ್ಟೊಂದು ಭಾರಿ ಗಾತ್ರದ ಹಡಗನ್ನು ಈ ಬ್ಯಾಗ್ ಗಳ ಮೂಲಕ ಎತ್ತುವುದು ಎಂದರೆ ಅದು ದುಬಾರಿ ಮತ್ತು ಕೆಲಸಕ್ಕೆ ಬಾರದ್ದು ಎನ್ನಲಾಗಿದೆ. ಇನ್ನು ಈ ದುರಂತದಲ್ಲಿ ಮೃತಪಟ್ಟವರ ನೆನಪಿನ ಜೀವಂತ ಸಮಾಧಿ ಇದು ಎಂದು ಎಷ್ಟೋ ಜನರು ಇವತ್ತಿಗೂ ಕೂಡ ಅಂದುಕೊಂಡಿದ್ದಾರೆ, ಹಾಗಾಗಿ ಇದಕ್ಕೆ ಅಡಚಣೆ ಮಾಡಬಾರದು ಎನ್ನುವ ವಾದ ಕೂಡ ಇದೆ. ಈ ಎಲ್ಲಾ ಕಾರಣದಿಂದ ಟೈಟಾನಿಕ್ ಮೇಲೆತ್ತುವ ಗೋಜಿಗೆ ಯಾರು ಕೂಡ ಹೋಗಿಲ್ಲ ಮತ್ತು ಹೋದರು ಕೂಡ ಅದೊಂದು ವ್ಯರ್ಥ ಪ್ರಯತ್ನ ಎಂದು ಎಷ್ಟೋ ಕಂಪನಿಗಳು ಈಗಾಗಲೇ ನಂಬಿ ಬಿಟ್ಟಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…

  • ಸೌಂದರ್ಯ

    ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

    ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…

  • ಮಾಡ್ರನ್ ಬೇಸಾಯ

    ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…

  • ಜ್ಯೋತಿಷ್ಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…

  • ಸುದ್ದಿ

    ಎರಡಕ್ಕಿಂತ ಹೆಚ್ಚು ಮದ್ವೆ ಆಗಿಲ್ಲ ಅಂದ್ರೆ, ಜೈಲಿಗೆ ಹೋಗಲು ರೆಡಿಯಾಗಿ!ಎಲ್ಲಿ ಗೊತ್ತಾ?ಮುಂದೆ ಓದಿ…

    ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.