inspirational

ನೀರೊಳಗಿರುವ ಟೈಟಾನಿಕ್ ಹಡಗನ್ನು ಮೇಲೆತ್ತುವ ಪ್ರಯತ್ನವನ್ನು ಯಾರು ಮಾಡುತ್ತಿಲ್ಲ ಏಕೆ? ರೋಚಕ ಸತ್ಯವನ್ನು ತಿಳಿಯಿರಿ.

860

ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು. ಇನ್ನು ಈ ಸಿನೆಮಾ ಅಂದಿನ ಕಾಲದಲ್ಲೇ ಸುಮಾರ 20 ಕೋಟಿ USD ಯಲ್ಲಿ ನಿರ್ಮಾಣ ಮಾಡಲಾಗಿತ್ತು, ಜೇಮ್ಸ್ ಕ್ಯಾಮರೂನ್ ಇರ್ದೆಶಿಸಿದ ಈ ಚಿತ್ರ ಇಂದಿಗೂ ಒಂದು ದೊಡ್ಡ ಸಾಧನೆಯೇ ಸರಿ.

ಇನ್ನು ಈ ಟೈಟಾನಿಕ್ ಮುಳುಗಿ ಅದರ ಅವಶೇಷಗಳು ಈಗಲೂ ಸುಮುದ್ರದಾಳದಲ್ಲಿ ಇರುವುದು ನಮಗೆಲ್ಲ ತಿಳಿದೇ ಇದೆ. ಪ್ರಪಂಚದ ಅತಿ ದೊಡ್ಡ ಹಡಗು ಮುಳುಗಿ ಎಷ್ಟೊಂದು ಜನ ಸಾವನ್ನಪ್ಪಿದರೂ ಕೂಡ ಈ ಹಡಗನ್ನು ಮೇಲೆತ್ತುವ ಕೆಲಸವನ್ನು ಇಂದಿಗೂ ಕೂಡ ಮಾಡಿಲ್ಲ ಯಾಕೆ ಗೊತ್ತಾ. ಯಾಕೆ ಟೈಟಾನಿಕ್ ಇನ್ನು ಸಮುದ್ರದಲ್ಲೇ ಇದೆ ಇದನ್ನು ಎತ್ತುವ ಪ್ರಯತ್ನ ಮಾಡಿ ಯಾವುದಾದರೂ ಒಂದು ಮ್ಯೂಸಿಯಂ ಮಾಡಾಬಹುದಲ್ಲ ಎನ್ನುವ ಪ್ರಶ್ನೆ ಹಲವರನ್ನು ಕಾಡುತ್ತದೆ, ಸ್ನೇಹಿತರೆ ಈ ವಿಶಾಲ ಹಡಗಿನ ಬಗ್ಗೆ ಇರುವ ರೋಚಕ ಸಂಗತಿ ತಿಳಿಯಿರಿ. 1912 ರಲ್ಲಿ ಮುಳುಗಿದ ಈ ಶಿಪ್ ಬಹಳ ವಿಶಾಲವಾದ ಗಾತ್ರ ಹೊಂದಿತ್ತು, ಈ ಶಿಪ್ ಮುಳುಗಿ ಈಗಾಗಲೇ ನೂರಕ್ಕೂ ಅಧಿಕ ವರ್ಷವಾಗಿದೆ.

ಪ್ರಸ್ತುತ ಈ ಹಡಗು ಈಗ 12,500 ಅಡಿಗಳಷ್ಟು ಆಳದಲ್ಲಿದೆ, ಅಷ್ಟೊಂದು ಆಳದಲ್ಲಿರುವ ಇದನ್ನು ಎತ್ತುವುದು ಕೂಡ ಅಸಾಧ್ಯದ ಕೆಲಸ ಏಕೆಂದರೆ ಅಷ್ಟೊಂದು ಆಳದಿಂದ ಮೇಲ್ಬರುವ ಸಮಯದಲ್ಲಿ ಇದು ಹಲವಾರು ಒತ್ತಡಗಳನ್ನು ಅನುಭವಿಸುತ್ತದೆ ಹೀಗಾಗಿ ಯಾವುದೇ ಕ್ಷಣದಲ್ಲೂ ಕೂಡ ಇದು ಕುಸಿದು ಮತ್ತೆ ನೀರಿನ ಆಳಕ್ಕೆ ಬೀಳಬಹುದು. ಟೈಟಾನಿಕ್ ಅನ್ನು ಮೇಲೆತ್ತಿದರೂ ಕೂಡ ನೀವು ಆ ಹಡಗನ್ನು ಎಲ್ಲಿ ಇಡುತ್ತೀರಿ ಎನ್ನುವುದೇ ಒಂದು ದೊಡ್ಡ ಪ್ರಶ್ನೆಯಾಗಿದೆ, 1912 ರಲ್ಲಿ ಟೈಟಾನಿಕ್ 882 ಅಡಿ ಉದ್ದವಿತ್ತು, ಇದು ಈಗಲೂ ಸಾಕಷ್ಟು ದೊಡ್ಡ ಗಾತ್ರವಾಗಿದೆ. ನೀರೊಳಗಿನ ಈ ಅವಶೇಷ ಸದ್ಯಕ್ಕೆ ಸಂಪೂರ್ಣ ಹದಗೆಟ್ಟಿದೆ ಮತ್ತು ಅದನ್ನು ತಂದು ಭೂಮಿ ಮೇಲೆ ಇಡುವುದು ಮೂರ್ಖತನ ಎನ್ನುವುದು ಹಲವರ ವಾದ ಇನ್ನು ಮತ್ತೊಂದು ಮುಖ್ಯ ಕಾರಣ ಎಂದರೆ ಟೈಟಾನಿಕ್ ಹಡಗಿನ ವಾರಸುದಾರ ಯಾರು ಎನ್ನುವ ಬಗ್ಗೆ ಹಲವಾರು ಗೊಂದಲಗಳಿವೆ, ಇದು ಯಾವ ಕಂಪನಿಯ ಸೊತ್ತು ಎನ್ನುವುದರ ಬಗ್ಗೆ ಕೆಲವು ಸಮಸ್ಯೆಗಳಿವೆ.

ಟೈಟಾನಿಕ್ ಮೇಲೆತ್ತದೆ ಇರಲು ಮತ್ತೊಂದು ಮುಖ್ಯ ಕಾರಣ ಎಂದರೆ ಹಣದ ದುಂದು ವೆಚ್ಚ, ಉದಾಹರಣೆಗೆ 50 ಅಡಿ ವಿಹಾರ ನೌಕೆಯನ್ನು ನೀವು ಮೇಲೆತ್ತಲು ಕೇವಲ ಏರ್‌ಬ್ಯಾಗ್‌ಗಳ ಬಳಕೆಗಾಗಿ ಗಂಟೆಗೆ $ 250 ಖರ್ಚಾಗುತ್ತದೆ. ಇನ್ನು ಇಷ್ಟೊಂದು ಭಾರಿ ಗಾತ್ರದ ಹಡಗನ್ನು ಈ ಬ್ಯಾಗ್ ಗಳ ಮೂಲಕ ಎತ್ತುವುದು ಎಂದರೆ ಅದು ದುಬಾರಿ ಮತ್ತು ಕೆಲಸಕ್ಕೆ ಬಾರದ್ದು ಎನ್ನಲಾಗಿದೆ. ಇನ್ನು ಈ ದುರಂತದಲ್ಲಿ ಮೃತಪಟ್ಟವರ ನೆನಪಿನ ಜೀವಂತ ಸಮಾಧಿ ಇದು ಎಂದು ಎಷ್ಟೋ ಜನರು ಇವತ್ತಿಗೂ ಕೂಡ ಅಂದುಕೊಂಡಿದ್ದಾರೆ, ಹಾಗಾಗಿ ಇದಕ್ಕೆ ಅಡಚಣೆ ಮಾಡಬಾರದು ಎನ್ನುವ ವಾದ ಕೂಡ ಇದೆ. ಈ ಎಲ್ಲಾ ಕಾರಣದಿಂದ ಟೈಟಾನಿಕ್ ಮೇಲೆತ್ತುವ ಗೋಜಿಗೆ ಯಾರು ಕೂಡ ಹೋಗಿಲ್ಲ ಮತ್ತು ಹೋದರು ಕೂಡ ಅದೊಂದು ವ್ಯರ್ಥ ಪ್ರಯತ್ನ ಎಂದು ಎಷ್ಟೋ ಕಂಪನಿಗಳು ಈಗಾಗಲೇ ನಂಬಿ ಬಿಟ್ಟಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…

  • ಉಪಯುಕ್ತ ಮಾಹಿತಿ

    ಜೀನ್ಸ್ ಪ್ಯಾಂಟುಗಳಲ್ಲಿ ಈ ರೀತಿಯ ಚಿಕ್ಕ ಜೇಬುಗಳು ಏಕೆ ಇರುತ್ತದೆ ಗೊತ್ತಾ, ಈ ಜೇಬಿನ ರಹಸ್ಯ ನೋಡಿ.

    ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…

  • ಸುದ್ದಿ

    ವಾಹನ ಚಾಲಕರಿಗೆ ಹೊಸ ರೂಲ್ಸ್…..ಏನೆಂದು ತಿಳಿಯಿರಿ?

    ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…

  • ಜೀವನಶೈಲಿ

    ನಿಮ್ಮ ದೇಹದ ಶಾಖವನ್ನು ಕಡಿಮೆ ಮಾಡಲು ಈ ಆಹಾರ ಕ್ರಮಗಳನ್ನು ಅನುಸರಿಸಿ…ತಿಳಿಯಲು ಈ ಲೇಖನ ಓದಿ…

    ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.

  • ಸುದ್ದಿ

    ಈ ಜಾಗದಲ್ಲಿ ವಾಸಿಸುವವರಿಗೆ ಸಿಗುತ್ತೆ ಭಾರೀ ಹಣ…!

    ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….