News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ನೀರೊಳಗಿರುವ ಟೈಟಾನಿಕ್ ಹಡಗನ್ನು ಮೇಲೆತ್ತುವ ಪ್ರಯತ್ನವನ್ನು ಯಾರು ಮಾಡುತ್ತಿಲ್ಲ ಏಕೆ? ರೋಚಕ ಸತ್ಯವನ್ನು ತಿಳಿಯಿರಿ.

867

ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು. ಇನ್ನು ಈ ಸಿನೆಮಾ ಅಂದಿನ ಕಾಲದಲ್ಲೇ ಸುಮಾರ 20 ಕೋಟಿ USD ಯಲ್ಲಿ ನಿರ್ಮಾಣ ಮಾಡಲಾಗಿತ್ತು, ಜೇಮ್ಸ್ ಕ್ಯಾಮರೂನ್ ಇರ್ದೆಶಿಸಿದ ಈ ಚಿತ್ರ ಇಂದಿಗೂ ಒಂದು ದೊಡ್ಡ ಸಾಧನೆಯೇ ಸರಿ.

ಇನ್ನು ಈ ಟೈಟಾನಿಕ್ ಮುಳುಗಿ ಅದರ ಅವಶೇಷಗಳು ಈಗಲೂ ಸುಮುದ್ರದಾಳದಲ್ಲಿ ಇರುವುದು ನಮಗೆಲ್ಲ ತಿಳಿದೇ ಇದೆ. ಪ್ರಪಂಚದ ಅತಿ ದೊಡ್ಡ ಹಡಗು ಮುಳುಗಿ ಎಷ್ಟೊಂದು ಜನ ಸಾವನ್ನಪ್ಪಿದರೂ ಕೂಡ ಈ ಹಡಗನ್ನು ಮೇಲೆತ್ತುವ ಕೆಲಸವನ್ನು ಇಂದಿಗೂ ಕೂಡ ಮಾಡಿಲ್ಲ ಯಾಕೆ ಗೊತ್ತಾ. ಯಾಕೆ ಟೈಟಾನಿಕ್ ಇನ್ನು ಸಮುದ್ರದಲ್ಲೇ ಇದೆ ಇದನ್ನು ಎತ್ತುವ ಪ್ರಯತ್ನ ಮಾಡಿ ಯಾವುದಾದರೂ ಒಂದು ಮ್ಯೂಸಿಯಂ ಮಾಡಾಬಹುದಲ್ಲ ಎನ್ನುವ ಪ್ರಶ್ನೆ ಹಲವರನ್ನು ಕಾಡುತ್ತದೆ, ಸ್ನೇಹಿತರೆ ಈ ವಿಶಾಲ ಹಡಗಿನ ಬಗ್ಗೆ ಇರುವ ರೋಚಕ ಸಂಗತಿ ತಿಳಿಯಿರಿ. 1912 ರಲ್ಲಿ ಮುಳುಗಿದ ಈ ಶಿಪ್ ಬಹಳ ವಿಶಾಲವಾದ ಗಾತ್ರ ಹೊಂದಿತ್ತು, ಈ ಶಿಪ್ ಮುಳುಗಿ ಈಗಾಗಲೇ ನೂರಕ್ಕೂ ಅಧಿಕ ವರ್ಷವಾಗಿದೆ.

ಪ್ರಸ್ತುತ ಈ ಹಡಗು ಈಗ 12,500 ಅಡಿಗಳಷ್ಟು ಆಳದಲ್ಲಿದೆ, ಅಷ್ಟೊಂದು ಆಳದಲ್ಲಿರುವ ಇದನ್ನು ಎತ್ತುವುದು ಕೂಡ ಅಸಾಧ್ಯದ ಕೆಲಸ ಏಕೆಂದರೆ ಅಷ್ಟೊಂದು ಆಳದಿಂದ ಮೇಲ್ಬರುವ ಸಮಯದಲ್ಲಿ ಇದು ಹಲವಾರು ಒತ್ತಡಗಳನ್ನು ಅನುಭವಿಸುತ್ತದೆ ಹೀಗಾಗಿ ಯಾವುದೇ ಕ್ಷಣದಲ್ಲೂ ಕೂಡ ಇದು ಕುಸಿದು ಮತ್ತೆ ನೀರಿನ ಆಳಕ್ಕೆ ಬೀಳಬಹುದು. ಟೈಟಾನಿಕ್ ಅನ್ನು ಮೇಲೆತ್ತಿದರೂ ಕೂಡ ನೀವು ಆ ಹಡಗನ್ನು ಎಲ್ಲಿ ಇಡುತ್ತೀರಿ ಎನ್ನುವುದೇ ಒಂದು ದೊಡ್ಡ ಪ್ರಶ್ನೆಯಾಗಿದೆ, 1912 ರಲ್ಲಿ ಟೈಟಾನಿಕ್ 882 ಅಡಿ ಉದ್ದವಿತ್ತು, ಇದು ಈಗಲೂ ಸಾಕಷ್ಟು ದೊಡ್ಡ ಗಾತ್ರವಾಗಿದೆ. ನೀರೊಳಗಿನ ಈ ಅವಶೇಷ ಸದ್ಯಕ್ಕೆ ಸಂಪೂರ್ಣ ಹದಗೆಟ್ಟಿದೆ ಮತ್ತು ಅದನ್ನು ತಂದು ಭೂಮಿ ಮೇಲೆ ಇಡುವುದು ಮೂರ್ಖತನ ಎನ್ನುವುದು ಹಲವರ ವಾದ ಇನ್ನು ಮತ್ತೊಂದು ಮುಖ್ಯ ಕಾರಣ ಎಂದರೆ ಟೈಟಾನಿಕ್ ಹಡಗಿನ ವಾರಸುದಾರ ಯಾರು ಎನ್ನುವ ಬಗ್ಗೆ ಹಲವಾರು ಗೊಂದಲಗಳಿವೆ, ಇದು ಯಾವ ಕಂಪನಿಯ ಸೊತ್ತು ಎನ್ನುವುದರ ಬಗ್ಗೆ ಕೆಲವು ಸಮಸ್ಯೆಗಳಿವೆ.

ಟೈಟಾನಿಕ್ ಮೇಲೆತ್ತದೆ ಇರಲು ಮತ್ತೊಂದು ಮುಖ್ಯ ಕಾರಣ ಎಂದರೆ ಹಣದ ದುಂದು ವೆಚ್ಚ, ಉದಾಹರಣೆಗೆ 50 ಅಡಿ ವಿಹಾರ ನೌಕೆಯನ್ನು ನೀವು ಮೇಲೆತ್ತಲು ಕೇವಲ ಏರ್‌ಬ್ಯಾಗ್‌ಗಳ ಬಳಕೆಗಾಗಿ ಗಂಟೆಗೆ $ 250 ಖರ್ಚಾಗುತ್ತದೆ. ಇನ್ನು ಇಷ್ಟೊಂದು ಭಾರಿ ಗಾತ್ರದ ಹಡಗನ್ನು ಈ ಬ್ಯಾಗ್ ಗಳ ಮೂಲಕ ಎತ್ತುವುದು ಎಂದರೆ ಅದು ದುಬಾರಿ ಮತ್ತು ಕೆಲಸಕ್ಕೆ ಬಾರದ್ದು ಎನ್ನಲಾಗಿದೆ. ಇನ್ನು ಈ ದುರಂತದಲ್ಲಿ ಮೃತಪಟ್ಟವರ ನೆನಪಿನ ಜೀವಂತ ಸಮಾಧಿ ಇದು ಎಂದು ಎಷ್ಟೋ ಜನರು ಇವತ್ತಿಗೂ ಕೂಡ ಅಂದುಕೊಂಡಿದ್ದಾರೆ, ಹಾಗಾಗಿ ಇದಕ್ಕೆ ಅಡಚಣೆ ಮಾಡಬಾರದು ಎನ್ನುವ ವಾದ ಕೂಡ ಇದೆ. ಈ ಎಲ್ಲಾ ಕಾರಣದಿಂದ ಟೈಟಾನಿಕ್ ಮೇಲೆತ್ತುವ ಗೋಜಿಗೆ ಯಾರು ಕೂಡ ಹೋಗಿಲ್ಲ ಮತ್ತು ಹೋದರು ಕೂಡ ಅದೊಂದು ವ್ಯರ್ಥ ಪ್ರಯತ್ನ ಎಂದು ಎಷ್ಟೋ ಕಂಪನಿಗಳು ಈಗಾಗಲೇ ನಂಬಿ ಬಿಟ್ಟಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…

  • ಸುದ್ದಿ

    ಪುಟ್ಟ ಮಕ್ಕಳಿಗೆ ವಿಳ್ಯೆದೆಲೆ ಯನ್ನು ಹೊಟ್ಟೆಗೆ ಅಂಟಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ,.!ಇದನೊಮ್ಮೆ ತಿಳಿಯಿರಿ.

    ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ವಿಚಿತ್ರ ಆದರೂ ಸತ್ಯ

    ಮತ್ಸ್ಯ ಮಗುವಿಗೆ ಜನ್ಮ ನೀಡಿದ ಮಹಿಳೆ..!ತಿಳಿಯಲು ಈ ಲೇಖನ ಓದಿ…

    ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.

  • ದೇಗುಲ ದರ್ಶನ, ದೇವರು

    ಮಕ್ಕಳಾಗದ ದಂಪತಿ ಒಮ್ಮೆ ಈ ದೇಗುಲಕ್ಕೆ ಭೇಟಿ ನೀಡಿ. ನಿಮ್ಮ ಇಷ್ಟಾರ್ಥವನ್ನು ಈಡೇರಿಸಿಕೊಳ್ಳಿ.!

    ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…