ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ
ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ.

ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು ವಿಭಿನ್ನವಾಗಿ ಅಂದಗಾಣಿಸಲು ಹೋಗಿ ಮೈತುಂಬ ಬಗೆಬಗೆ ಟ್ಯಾಟೂ ಹಾಕಿಸಿಕೊಂಡಿದ್ದಳು. ಬರೀ ಮೈಗಲ್ಲ. ಕಣ್ಣನ್ನೂ ಈಕೆ ನೀಲಿ ಮಾಡಿದ್ದಳು… ಇದಕ್ಕಾಗಿ ಈಕೆ ವ್ಯಯಿಸಿದ್ದು ಬರೋಬ್ಬರಿ 26 ಸಾವಿರ ಅಮೇರಿಕನ್ ಡಾಲರ್. ಅಂದರೆ ಭಾರತದ ಸುಮಾರು 18 ಲಕ್ಷ ರೂಪಾಯಿ…! ಹೀಗೆ ದೇಹವನ್ನು ಮಾರ್ಪಾಡು ಮಾಡಿದ್ದ ಈಕೆಗೆ ನಂತರ ಕಷ್ಟಕಾಲ ಎದುರಾಗಿತ್ತು. ಅಂದರೆ, ಕಣ್ಣಿಗೆ ಹಾಕಿದ್ದ ನೀಲಿ ಟ್ಯಾಟೂ ಕಾರಣದಿಂದಾಗಿ ಈಕೆ ಮೂರು ವಾರಗಳ ಕಾಲ ತನ್ನ ದೃಷ್ಟಿಯನ್ನೇ ಕಳೆದುಕೊಂಡಿದ್ದಳು…! ಇದನ್ನು ಸ್ವತಃ ಈಕೆ ಹೇಳಿಕೊಂಡಿದ್ದಾಳೆ.

ದೇಹವನ್ನು ಸಂಪೂರ್ಣ ನೀಲಿ ಬಣ್ಣಕ್ಕೆ ಬದಲಾಯಿಸಿಕೊಂಡಿದ್ದ ಈಕೆ ತನ್ನ ದೇಹದ ತುಂಬಾ ಇನ್ನೂರಕ್ಕೂ ಅಧಿಕ ಟ್ಯಾಟೂಗಳನ್ನು ಹಾಕಿಕೊಂಡಿದ್ದಳು. ಇದರಲ್ಲಿ ಕಣ್ಣಿಗೆ ಹಾಕಿದ್ದ ಟ್ಯಾಟೂ ಕೂಡಾ ಒಂದಾಗಿತ್ತು. ಈಕೆ ತನ್ನನ್ನು ತಾನು `ಬ್ಲೂ ಐಡ್ ವೈಟ್ ಡ್ರ್ಯಾಗನ್’ ಎಂದು ಕರೆದುಕೊಳ್ಳುತ್ತಿದ್ದಳು.

ಆದರೆ, ಈ ಟ್ಯಾಟೂ ಹಾಕಿಕೊಂಡ ಬಳಿಕ ಈಕೆಗೆ ಕಣ್ಣಿನ ನೋವು ಶುರುವಾಗಿತ್ತು. `ನಾನು ಅನುಭವಿಸಿದ್ದ ನೋವನ್ನು ನಿಮಗೆ ಹೇಳಲು ಸಾಧ್ಯವೇ ಇಲ್ಲ’ ಎಂದು ಈಕೆ ಈಗ ಹೇಳಿಕೊಂಡಿದ್ದಾಳೆ. ಈಕೆ ಅದೆಷ್ಟರ ಮಟ್ಟಿಗೆ ಹೆದರಿಕೊಂಡಿದ್ದಾಳೆ ಎಂದರೆ ಇನ್ನೆಂದೂ ನಾನು ಬಾಡಿ ಮಾಡಿಫಿಕೇಷನ್ ಮಾಡಿಕೊಳ್ಳುವುದಿಲ್ಲ ಎಂದು ಈಕೆ ತಿಳಿಸಿದ್ದಾಳೆ. ಮಗಳ ಈ ಸ್ಥಿತಿಗೆ ತಾಯಿಯೂ ಕಣ್ಣೀರಿಟ್ಟಿದ್ದಾರೆ. ಈಕೆಯೇ ಹೇಳುವಂತೆ ಎರಡು ಕಣ್ಣಿಗೆ ಟ್ಯಾಟೂ ಹಾಕಿಕೊಳ್ಳಲು ಸುಮಾರು 40 ನಿಮಿಷ ಹಿಡಿದಿತ್ತಂತೆ. ಜೊತೆಗೆ, ಇನ್ನೂ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೆ ಈಕೆ ಸಂಪೂರ್ಣ ದೃಷ್ಟಿ ಕಳೆದುಕೊಳ್ಳುವ ಅಪಾಯವೂ ಇತ್ತಂತೆ…!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…