News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸ್ಪೂರ್ತಿ

ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

1275

ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ.

ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ.

ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು ಅವರಿಗೆ ಇಷ್ಟವಿರಲಿಲ್ಲ. ಶಾಲೆಯಿಂದ ಹೊರಟು ನಿಂತ ಆ ಶಿಕ್ಷಕನನ್ನು ವಿದ್ಯಾರ್ಥಿಗಳೆಲ್ಲರೂ ಸುತ್ತುವರಿದು, ಸರ್, ನಮ್ಮನ್ನು ಬಿಟ್ಟು ಹೋಗಬೇಡಿಎಂದು ಕಣ್ಣೀರಿಟ್ಟರು.

ವಿದ್ಯಾರ್ಥಿಗಳ ಸ್ನೇಹಬಂಧನದಲ್ಲಿ ಸಿಲುಕಿದ ಆ ಶಿಕ್ಷಕನ ಕಣ್ಣಲ್ಲಿಯೂ ನೀರು. ತಮಿಳುನಾಡಿನ ತಿರುವಳ್ಳೂರ್ನ ವೆಲಿಯಗರಂ ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳ ಈ ಪ್ರೀತಿಯ ಬಗ್ಗೆ ತಮಿಳುನಾಡಿನ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಜಿ. ಭಗವಾನ್ ಎಂಬ 28ರ ಹರೆಯದ ಇಂಗ್ಲಿಷ್ ಅಧ್ಯಾಪಕನಿಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳು ಈ ರೀತಿ ಕಣ್ಣೀರಿಟ್ಟಿದ್ದಾರೆ. ವಿದ್ಯಾರ್ಥಿಗಳ ಪ್ರೀತಿಗೆ ಭಾವುಕನಾಗಿ ಹೊರಡುತ್ತಿರುವ ಅಧ್ಯಾಪಕನನ್ನು ವಿದ್ಯಾರ್ಥಿಗಳು ಅಪ್ಪಿ ಹಿಡಿದಿರುವ ಚಿತ್ರವನ್ನು ತಮಿಳುನಾಡಿನ ಪತ್ರಿಕೆಗಳು ಮತ್ತು ಸುದ್ದಿವಾಹಿನಿ ಪ್ರಸಾರ ಮಾಡಿತ್ತು.

ಜಿ. ಭಗವಾನ್ ಅವರಿಗೆ ತಿರುತ್ತಾಣಿ ಬಳಿಯ ಆರುಂಗುಲಮ್ ಸರ್ಕಾರಿ ಹೈಸ್ಕೂಲ್ಗೆ ವರ್ಗವಾಗಿದೆ. ಆದರೆ ಸದ್ಯ ಈ ಆದೇಶವನ್ನು 10 ದಿನದಳ ಕಾಲ ತಡೆಹಿಡಿದಿದ್ದು, ವರ್ಗಾವಣೆಯಾಗಿ ಹೊಸ ಶಾಲೆಗೆ ಹೋಗಬೇಕೇ ? ಬೇಡವೇ? ಎಂಬುದನ್ನು ನಿರ್ಧರಿಸಲಾಗುವುದು.

ಈ ಬಗ್ಗೆ  ಮಾತನಾಡಿದ ಭಗವಾನ್, ಇದು ನನ್ನ ಮೊದಲ ಕೆಲಸ ಆಗಿತ್ತು. 2014ರಲ್ಲಿ ನಾನು ಈ ಹೈಸ್ಕೂಲ್ಗೆ ಶಿಕ್ಷಕನಾಗಿ ಬಂದಿದ್ದೆ. ಇಲ್ಲಿನ ವಿದ್ಯಾರ್ಥಿ-ಶಿಕ್ಷಕರ ಅನುಪಾತ ನೋಡಿದರೆ ನಾನು ಹೆಚ್ಚುವರಿ ಅಧ್ಯಾಪಕನಾಗಿದ್ದೆ. ಹಾಗಾಗಿ ಶಿಕ್ಷಕರ ಕೊರತೆ ಇರುವ ಶಾಲೆಗೆ ನನ್ನನ್ನು ವರ್ಗ ಮಾಡಲು ತೀರ್ಮಾನಿಸಿದ್ದು, ತಿರುತ್ತಾಣಿ ಶಾಲೆಗೆ ವರ್ಗಾವಣೆ ಆದೇಶ ಸಿಕ್ಕಿತ್ತು.

ಶಿಕ್ಷಕನಾದವನು ಮಕ್ಕಳನ್ನು ತನ್ನ ಸ್ವಂತ ಮಕ್ಕಳೆಂದು ಪ್ರೀತಿಸಿ, ಮಕ್ಕಳೊಂದಿಗೆ ಒಂದಾಗಿ, ಮಕ್ಕಳ ಮನದೊಳಗೆ ಇಳಿದು, ಮಕ್ಕಳನ್ನು ಅರ್ಥಮಾಡಿಕೊಂಡಾಗ ಮಾತ್ರ ನಿಜವಾದ ಶಿಕ್ಷಕನಾಗುತ್ತಾನೆ. ಮಕ್ಕಳ ಪ್ರೀತಿಯನ್ನು ಸಂಪಾದಿಸುವುದು ಸುಲಭದ ಮಾತಲ್ಲ. ಭಗವಾನ್ ಅವರು ಶಿಕ್ಷಕರಿಗೆಲ್ಲಾ ಒಂದು ರೋಲ್ ಮಾಡೆಲ್. ಮಕ್ಕಳು ಶಿಕ್ಷಕನನ್ನು ಬಿಟ್ಟು ಕೊಡ್ತಿಲ್ಲ ಅಂದ್ರೆ ಆ ಶಿಕ್ಷಕನ ವೃತ್ತಿ ಪ್ರೇಮ, ಮಕ್ಕಳ ಬಗೆಗಿನ ಪ್ರೀತಿ ಎಂತದ್ದಿರಬೇಕು. ಹ್ಯಾಟ್ಸ್ ಆಫ್ ಭಗವಾನ್ ಸರ್.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…

  • India, Sports, ಕ್ರೀಡೆ

    2 ನೇ ಟೆಸ್ಟ್ ಸೋತ ಭಾರತ ತಂಡ

    ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್‌ಗಳೊಂದಿಗೆ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್‌ನಲ್ಲಿ ಅಂತಿಮ ಟೆಸ್ಟ್‌ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್‌ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…

    Loading

  • ಸುದ್ದಿ

    ನೂತನ ಸ್ಪೀಕರ್ ಆಗಿ​ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

    ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್​ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್​ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್​ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್​  ಮತ್ತು ಜೆಡಿಎಸ್​ ನಾಯಕರು ಸ್ಪೀಕರ್​ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…

  • ಆರೋಗ್ಯ

    ಕಾಲುಗಳ ಸೆಳೆತದಿಂದ ನಿಮ್ಮ ನಿದ್ದೆ ಹಾಳಾಗಿದೆಯೇ..? ಪರಿಹಾರ ತಿಳಿಯಲು ಈ ಲೇಖನ ಓದಿ ..

    ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.