ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.
ಬಾಲಕ ಮೂರು ವರ್ಷದವನಿರುವಾಗಲೇ ಆತನ ಬಾಯಿ ಊದಿಕೊಂಡಿರುವುದನ್ನು ಪೋಷಕರು ಗಮನಿಸಿದ್ದರು. ಆದರೆ ಬಲಕನ ಬಾಯಿ ಬಾವು ಬಂದಿರುವ ಕುರಿತು ತಲೆ ಕೆಡಿಸಿಕೊಂಡಿರಲಿಲ್ಲ. ಅಲ್ಲದೆ, ಬಾಯಿಯನ್ನು ಪರೀಕ್ಷಿಸಲು ಮುಂದಾದಾಗ ಬಾಲಕ ಅಳಲು ಪ್ರಾರಂಭಿಸುತ್ತಿದ್ದ. ಹೀಗಾಗಿ ಪೋಷಕರು ನಿರ್ಲಕ್ಷ್ಯ ವಹಿಸಿದ್ದರು. ಬಾವು ಹೆಚ್ಚಾಗುತ್ತಿದ್ದಂತೆ ಪೋಷಕರು ಭಯಭೀತರಾಗಿದ್ದು, ನಂತರ ಆಸ್ಪತ್ರೆಗೆ ಕರೆ ತಂದಿದ್ದಾರೆ ಎಂದು ಓರಲ್ ಆಂಡ್ ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗದ ಪ್ರಾಧ್ಯಾಪಕ ಪಿ.ಸೆಂದಿಲ್ನಾಥನ್ ತಿಳಿಸಿದ್ದಾರೆ.
ಎಕ್ಸ್-ರೇ ಹಾಗೂ ಸಿಟಿ ಸ್ಕ್ಯಾನ್ ಮಾಡಿದಾಗ ಕೆಳಭಾಗದ ಬಲ ದವಡೆಯಲ್ಲಿ ಹೆಚ್ಚು ಹಲ್ಲುಗಳಿರುವುದು ಕಂಡು ಬಂತು. ಹೀಗಾಗಿ ಸರ್ಜರಿ ಮಾಡಲು ನಿರ್ಧರಿಸಿದೆವು. ನಂತರ ಅರಿವಳಿಕೆ(ಅನಸ್ತೇಶಿಯಾ) ನೀಡಿ ಬಲಭಾಗದ ದವಡೆಯನ್ನು ತೆರೆದೆವು, ಅಲ್ಲಿ ಒಂದು ಚೀಲದ ರೀತಿ ಕಾಣಿಸಿತು. ಅದು ಸುಮಾರು 200 ಗ್ರಾಂ. ತೂಕವಿತ್ತು. ಆ ಚೀಲದ ತುಂಬ ಹಲ್ಲುಗಳಿದ್ದವು. ತುಂಬಾ ಎಚ್ಚರಿಕೆ ವಹಿಸಿ ಹಲ್ಲುಗಳನ್ನು ಹೊರ ತೆಗೆದೆವು. ಚೀಲ ತೆರೆದು ನೋಡಿದಾಗ ನೋಡಿದಾಗ ಸಣ್ಣ, ಮಧ್ಯಮ ಹಾಗೂ ದೊಡ್ಡ ಗಾತ್ರದ 526 ಹಲ್ಲುಗಳು ಪತ್ತೆಯಾಗಿವೆ ಎಂದು ಪಿ.ಸೆಂದಿಲ್ನಾಥನ್ ವಿವರಿಸಿದರು.
ಕೆಲವು ತುಂಬಾ ಸಣ್ಣ ಕಣಗಳಿದ್ದರೂ ಅವುಗಳಲ್ಲಿ ಹಲ್ಲುಗಳ ಗುಣಗಳಿರುತ್ತವೆ. ಆ ಚೀಲದಿಂದ ಹಲ್ಲುಗಳನ್ನು ತೆಗೆಯಲು ಸುಮಾರು 5 ತಾಸು ತೆಗೆದುಕೊಳ್ಳಲಾಗಿದೆ. ಹೊರ ತೆಗೆಯಲಾದ ಹಲ್ಲುಗಳು ಮುತ್ತಿನ ಆಕಾರದಲ್ಲಿವೆ ಎಂದು ವೈದ್ಯರು ತಿಳಿಸಿದ್ದಾರೆ.ಓರಲ್ ಆಂಡ್ ಮ್ಯಾಕ್ಸಿಲೊಫೇಶಿಯಲ್ ಪ್ಯಾಥೋಲಜಿ ವಿಭಾಗದ ಮುಖ್ಯಸ್ಥೆ ಪ್ರತಿಭಾ ರಮಣಿ ಈ ಕುರಿತು ಮಾಹಿತಿ ನೀಡಿ, ಸರ್ಜರಿ ಮಾಡಿದ ಮೂರು ದಿನಗಳ ನಂತರ ಬಾಲಕ ಸಹಜ ಸ್ಥಿಗೆ ಮರಳಿದ್ದಾನೆ ಎಂದು ತಿಳಿಸಿದ್ದಾರೆ. ಬಾಯಿಯಲ್ಲಿ 526 ಹಲ್ಲುಗಳು ಪತ್ತೆಯಾಗಿದ್ದು ವಿಶ್ವದಲ್ಲೇ ದಾಖಲಾದ ಮೊದಲ ಪ್ರಕರಣ ಇದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.