ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ.

ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ. ತುಂಡರಿಸಿದ ನಾಲಿಗೆಯನ್ನು ಹೈದ್ರಾಬಾದಿನ ಶ್ರೀನಗರ ಕಾಲೋನಿಯಲ್ಲಿರುವ ದೇವಾಲಯದ ಹುಂಡಿಯಲ್ಲಿ ಹಾಕಿದ್ದಾನೆ.

ಈ ಸಂದರ್ಭದಲ್ಲಿ ಆತ ಪತ್ರವೊಂದನ್ನು ಬರೆದಿಟ್ಟಿದ್ದು, ತೆಲಂಗಾಣ ಹಾಗೂ ಆಂಧ್ರಪ್ರದೇಶ ಎರಡು ರಾಜ್ಯಗಳಲ್ಲಿಯೂ ಪ್ರಾಮಾಣಿಕರಾಗಿರುವ ರಾಜಕಾರಣಿಗಳು ಮುಖ್ಯಮಂತ್ರಿಗಳಾಗಬೇಕು ಎಂದು ಆತ ಬರೆದಿಟ್ಟಿರುವುದಾಗಿ ಬಂಜಾರ ಹಿಲ್ಸ್ ಇನ್ಸ್ ಪೆಕ್ಟರ್ ಗೋವಿಂದ ರೆಡ್ಡಿ ಹೇಳಿದ್ದಾರೆ.
ಶ್ರೀನಗರ ಕಾಲೋನಿಯ ವೆಂಕಟೇಶ್ವರ ದೇವಾಲಯದಲ್ಲಿ ಈ ಘಟನೆ ನಡೆದಿದೆ. ನಂತರ ಮಹೇಶ್ ಓಸ್ಮಾನಿಯಾ ಆಸ್ಪತ್ರೆಗೆ ದೌಡಾಯಿಸಿದ್ದು, ಚಿಕಿತ್ಸೆ ಪಡೆದಿದ್ದಾನೆ. ಆತನ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

2009ರ ಚುನಾವಣೆ ಸಂದರ್ಭದಲ್ಲೂ ನಾಗೇಶ್ ಇದೇ ರೀತಿ ಮಾಡಿದ್ದ ಎನ್ನಲಾಗಿದೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ. ಎಸ್ . ರಾಜಶೇಖರ ರೆಡ್ಡಿ ಅವರ ನಿಷ್ಠಾವಂತ ಅಭಿಮಾನಿಯಾಗಿದ್ದು, ಅವರ ಗೆಲುವಿಗಾಗಿ ತುಂಡಿಸಿದ ನಾಲಿಗೆಯನ್ನು ತ್ಯಾಗ ಮಾಡಿರುವುದಾಗಿ ಹೇಳಿಕೆ ನೀಡಿದ್ದ. 2004ರ ಚುನಾವಣೆ ಸಂದರ್ಭದಲ್ಲೂ ಆತ ಇದೇ ರೀತಿಯಲ್ಲಿ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.ತೆಲಂಗಾಣದಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…