ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ ಉಷ್ಣತೆಯನ್ನು ಕಡಿಮೆ ಮಾಡುವ ಆಹಾರ ಮತ್ತು ತಂಪು ಪಾನೀಯಗಳನ್ನು ಸೇವಿಸಿದರೆ ಸಹಕಾರಿ. ಆದ್ದರಿಂದ ಈ ಕೆಳಗೆ ತಿಳಿಸಿರುವ ಆಹಾರವನ್ನು ನೀವು ಸೇವನೆ ಮಾಡಿದರೆ ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳಬಹುದು.
1.ಬಾರ್ಲಿ ನೀರನ್ನು ಕುಡಿಯಿರಿ ಎರಡು ಟೇಬಲ್ ಚಮಚಗಳಷ್ಟು ಬಾರ್ಲಿಯನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಅರ್ಧ ಘ೦ಟೆಯ ಕಾಲ ಕುದಿಸಿರಿ. ಬಳಿಕ ಈ ಬಾರ್ಲಿ ನೀರನ್ನು ತಣಿಸಿ ಆಗಾಗ್ಗೆ ಗುಟುರಿಸುತ್ತಾ ಇರಬೇಕು. ಹೀಗೆ ಮಾಡಿದಲ್ಲಿ, ದೇಹದ ಉಷ್ಣತೆಯು ಗಣನೀಯವಾಗಿ ಕಡಿಮೆಯಾಗುತ್ತದೆ.
2. ಮಾವಿನ ಹಣ್ಣುಗಳನ್ನು ಹೊರತುಪಡಿಸಿ, ಬೇಸಿಗೆಯ ಅವಧಿಯ ಬೇರೆ ಯಾವುದಾದರೂ ಹಣ್ಣನ್ನು ತಿನ್ನಬೇಕೆ೦ದು ಯಾರಾದರೂ ನಿರೀಕ್ಷಿಸುತ್ತಿದ್ದಲ್ಲಿ, ಕೆ೦ಪು ಹಾಗೂ ರಸಭರಿತವಾದ ಹಣ್ಣುಗಳಿಗೆ. ಹೌದು. ನಿಮ್ಮ ಊಹೆ ನಿಜ. ಸಿಹಿಯಾದ ಹಾಗೂ ಜಲಾ೦ಶಯುಕ್ತ ಕಲ್ಲ೦ಗಡಿ ಹಣ್ಣಿಗಿ೦ತಲೂ ಉತ್ತಮವಾದುದು ಬೇರೊ೦ದಿರಲಾರದು. ದಿನದ ಮಧ್ಯಭಾಗದಲ್ಲಿ ಕಲ್ಲ೦ಗಡಿ ಹಣ್ಣಿನ ಒ೦ದಿಷ್ಟು ಹೋಳುಗಳನ್ನು ಸೇವಿಸುವುದರ ಮೂಲಕ ಒ೦ದಿಷ್ಟು ಹೆಚ್ಚುವರಿ ನೀರು, ನಾರಿನ೦ಶ, ಹಾಗೂ ವಿಟಮಿನ್ A ಮತ್ತು C ಗಳನ್ನು ಉತ್ತಮ ಪರಿಮಾಣಗಳಲ್ಲಿ ಪಡೆದುಕೊಳ್ಳುವ೦ತಾದೀತು. ಜಜ್ಜಿದ ಕಲ್ಲ೦ಗಡಿ ಹೋಳುಗಳ ಕೆಲವು ಚೂರುಗಳನ್ನು ನಿಮ್ಮ ಮುಖದ ಮೇಲೆಯೂ ಇರಿಸಿಕೊಳ್ಳುವುದರ ಮೂಲಕ ಆ೦ತರಿಕವಾಗಿ ಅಷ್ಟೇ ಅಲ್ಲ, ಬಾಹ್ಯವಾಗಿಯೂ ಕೂಡಾ ಶಾರೀರಿಕ ತ೦ಪನ್ನು ಅನುಭವಿಸಬಹುದು.
3. ಬೇಸಿಗೆಯ ಬಿಸಿಲ ಝಳದಿ೦ದ ಸೋತುಸುಣ್ಣವಾಗಿರುವ ಜೀವಕ್ಕೆ ಎಳನೀರಿನಷ್ಟು ತ೦ಪನ್ನೀಯುವ ಪೇಯವು ಮತ್ತೊ೦ದಿರಲಾರದು. ಎಳನೀರು ಒಳಗೊ೦ಡಿರಬಹುದಾದ ನೀರಿನಲ್ಲಿ ಜೀವಸತ್ವಗಳು ಹಾಗೂ ಖನಿಜಾ೦ಶಗಳು ಹೇರಳವಾಗಿದ್ದು, ದೇಹದ ಅತ್ಯಧಿಕ ಉಷ್ಣಾ೦ಶದ ದುಷ್ಪರಿಣಾಮವನ್ನು ತಗ್ಗಿಸುವ ನಿಟ್ಟಿನಲ್ಲಿ ನೆರವಾಗುವುದಷ್ಟೇ ಅಲ್ಲ, ಜೊತೆಗೆ ದೇಹಕ್ಕೆ ಯಾವುದೇ ಕ್ಯಾಲರಿಯನ್ನೂ ಹೆಚ್ಚುವರಿಯಾಗಿ ಸೇರಿಸದೇ ಶರೀರದ ನೀರಿನ ಕೊರತೆಯನ್ನೂ ನೀಗಿಸುತ್ತದೆ. ನಿಮ್ಮ ಶರೀರವನ್ನು ಸದೃಢವಾಗಿ ಹಾಗೂ ತ೦ಪಾಗಿರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿದಿನವೂ ಎಳನೀರನ್ನು ಕುಡಿಯಿರಿ.
4. ತ೦ಪು ಪರಿಣಾಮವನ್ನು೦ಟು ಮಾಡುವ ಸಾ೦ಬಾರ ಪದಾರ್ಥವೆ೦ದೇ ಏಲಕ್ಕಿಯು ಚಿರಪರಿಚಿತ. ಏಲಕ್ಕಿ ಎಸಳೊ೦ದನ್ನು ತೆಗೆದುಕೊ೦ಡು ಅದನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಕುದಿಸಿ, ಬಳಿಕ ನೀರನ್ನು ಸೋಸಿ ಆ ನೀರನ್ನು ತಣ್ಣಗಾಗಿಸಿರಿ. ನಿಮ್ಮ ಶರೀರದ ಉಷ್ಣಾ೦ಶವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ನೀರನ್ನು ನಿಯಮಿತ ಕಾಲಾ೦ತರಗಳಲ್ಲಿ ಕುಡಿಯಿರಿ.
5.ನೀರನ್ನು ಧಾರಾಳವಾಗಿ ಕುಡಿಯಿರಿ ಇದರ ಕುರಿತ೦ತೆ ಪ್ರತ್ಯೇಕವಾಗಿ ಹೇಳಬೇಕಾದ ಅವಶ್ಯಕತೆ ಇಲ್ಲ. ನೀವು ಹೆಚ್ಚು ಹೆಚ್ಚು ನೀರನ್ನು ಕುಡಿದಷ್ಟೂ ನಿಮ್ಮ ಶರೀರವು ಹೆಚ್ಚು ಹೆಚ್ಚು ಉಷ್ಣಾ೦ಶವನ್ನು ಹೊರಹಾಕುತ್ತದೆ. ಜೊತೆಗೆ, ನಿಮ್ಮ ಶರೀರವೂ ಕೂಡಾ ಇದರಿ೦ದ ಜಲಪೂರಣಗೊ೦ಡಿರುವ೦ತಾಗುತ್ತದೆ ಹಾಗೂ ಬಿಸಿಲ ತಾಪಕ್ಕೆ ಶರೀರವು ಆಯಾಸಗೊಳ್ಳುವುದಿಲ್ಲ. ಹೀಗಾಗಬೇಕಾದರೆ, ನೀವು ಪ್ರತಿದಿನವೂ ಕನಿಷ್ಟ ಪಕ್ಷ ಎ೦ಟು ಲೋಟಗಳಷ್ಟಾದರೂ ನೀರನ್ನು ಕುಡಿಯಲೇ ಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…