ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ ಉಷ್ಣತೆಯನ್ನು ಕಡಿಮೆ ಮಾಡುವ ಆಹಾರ ಮತ್ತು ತಂಪು ಪಾನೀಯಗಳನ್ನು ಸೇವಿಸಿದರೆ ಸಹಕಾರಿ. ಆದ್ದರಿಂದ ಈ ಕೆಳಗೆ ತಿಳಿಸಿರುವ ಆಹಾರವನ್ನು ನೀವು ಸೇವನೆ ಮಾಡಿದರೆ ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳಬಹುದು.
1.ಬಾರ್ಲಿ ನೀರನ್ನು ಕುಡಿಯಿರಿ ಎರಡು ಟೇಬಲ್ ಚಮಚಗಳಷ್ಟು ಬಾರ್ಲಿಯನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಅರ್ಧ ಘ೦ಟೆಯ ಕಾಲ ಕುದಿಸಿರಿ. ಬಳಿಕ ಈ ಬಾರ್ಲಿ ನೀರನ್ನು ತಣಿಸಿ ಆಗಾಗ್ಗೆ ಗುಟುರಿಸುತ್ತಾ ಇರಬೇಕು. ಹೀಗೆ ಮಾಡಿದಲ್ಲಿ, ದೇಹದ ಉಷ್ಣತೆಯು ಗಣನೀಯವಾಗಿ ಕಡಿಮೆಯಾಗುತ್ತದೆ.

2. ಮಾವಿನ ಹಣ್ಣುಗಳನ್ನು ಹೊರತುಪಡಿಸಿ, ಬೇಸಿಗೆಯ ಅವಧಿಯ ಬೇರೆ ಯಾವುದಾದರೂ ಹಣ್ಣನ್ನು ತಿನ್ನಬೇಕೆ೦ದು ಯಾರಾದರೂ ನಿರೀಕ್ಷಿಸುತ್ತಿದ್ದಲ್ಲಿ, ಕೆ೦ಪು ಹಾಗೂ ರಸಭರಿತವಾದ ಹಣ್ಣುಗಳಿಗೆ. ಹೌದು. ನಿಮ್ಮ ಊಹೆ ನಿಜ. ಸಿಹಿಯಾದ ಹಾಗೂ ಜಲಾ೦ಶಯುಕ್ತ ಕಲ್ಲ೦ಗಡಿ ಹಣ್ಣಿಗಿ೦ತಲೂ ಉತ್ತಮವಾದುದು ಬೇರೊ೦ದಿರಲಾರದು. ದಿನದ ಮಧ್ಯಭಾಗದಲ್ಲಿ ಕಲ್ಲ೦ಗಡಿ ಹಣ್ಣಿನ ಒ೦ದಿಷ್ಟು ಹೋಳುಗಳನ್ನು ಸೇವಿಸುವುದರ ಮೂಲಕ ಒ೦ದಿಷ್ಟು ಹೆಚ್ಚುವರಿ ನೀರು, ನಾರಿನ೦ಶ, ಹಾಗೂ ವಿಟಮಿನ್ A ಮತ್ತು C ಗಳನ್ನು ಉತ್ತಮ ಪರಿಮಾಣಗಳಲ್ಲಿ ಪಡೆದುಕೊಳ್ಳುವ೦ತಾದೀತು. ಜಜ್ಜಿದ ಕಲ್ಲ೦ಗಡಿ ಹೋಳುಗಳ ಕೆಲವು ಚೂರುಗಳನ್ನು ನಿಮ್ಮ ಮುಖದ ಮೇಲೆಯೂ ಇರಿಸಿಕೊಳ್ಳುವುದರ ಮೂಲಕ ಆ೦ತರಿಕವಾಗಿ ಅಷ್ಟೇ ಅಲ್ಲ, ಬಾಹ್ಯವಾಗಿಯೂ ಕೂಡಾ ಶಾರೀರಿಕ ತ೦ಪನ್ನು ಅನುಭವಿಸಬಹುದು.

3. ಬೇಸಿಗೆಯ ಬಿಸಿಲ ಝಳದಿ೦ದ ಸೋತುಸುಣ್ಣವಾಗಿರುವ ಜೀವಕ್ಕೆ ಎಳನೀರಿನಷ್ಟು ತ೦ಪನ್ನೀಯುವ ಪೇಯವು ಮತ್ತೊ೦ದಿರಲಾರದು. ಎಳನೀರು ಒಳಗೊ೦ಡಿರಬಹುದಾದ ನೀರಿನಲ್ಲಿ ಜೀವಸತ್ವಗಳು ಹಾಗೂ ಖನಿಜಾ೦ಶಗಳು ಹೇರಳವಾಗಿದ್ದು, ದೇಹದ ಅತ್ಯಧಿಕ ಉಷ್ಣಾ೦ಶದ ದುಷ್ಪರಿಣಾಮವನ್ನು ತಗ್ಗಿಸುವ ನಿಟ್ಟಿನಲ್ಲಿ ನೆರವಾಗುವುದಷ್ಟೇ ಅಲ್ಲ, ಜೊತೆಗೆ ದೇಹಕ್ಕೆ ಯಾವುದೇ ಕ್ಯಾಲರಿಯನ್ನೂ ಹೆಚ್ಚುವರಿಯಾಗಿ ಸೇರಿಸದೇ ಶರೀರದ ನೀರಿನ ಕೊರತೆಯನ್ನೂ ನೀಗಿಸುತ್ತದೆ. ನಿಮ್ಮ ಶರೀರವನ್ನು ಸದೃಢವಾಗಿ ಹಾಗೂ ತ೦ಪಾಗಿರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿದಿನವೂ ಎಳನೀರನ್ನು ಕುಡಿಯಿರಿ.

4. ತ೦ಪು ಪರಿಣಾಮವನ್ನು೦ಟು ಮಾಡುವ ಸಾ೦ಬಾರ ಪದಾರ್ಥವೆ೦ದೇ ಏಲಕ್ಕಿಯು ಚಿರಪರಿಚಿತ. ಏಲಕ್ಕಿ ಎಸಳೊ೦ದನ್ನು ತೆಗೆದುಕೊ೦ಡು ಅದನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಕುದಿಸಿ, ಬಳಿಕ ನೀರನ್ನು ಸೋಸಿ ಆ ನೀರನ್ನು ತಣ್ಣಗಾಗಿಸಿರಿ. ನಿಮ್ಮ ಶರೀರದ ಉಷ್ಣಾ೦ಶವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ನೀರನ್ನು ನಿಯಮಿತ ಕಾಲಾ೦ತರಗಳಲ್ಲಿ ಕುಡಿಯಿರಿ.

5.ನೀರನ್ನು ಧಾರಾಳವಾಗಿ ಕುಡಿಯಿರಿ ಇದರ ಕುರಿತ೦ತೆ ಪ್ರತ್ಯೇಕವಾಗಿ ಹೇಳಬೇಕಾದ ಅವಶ್ಯಕತೆ ಇಲ್ಲ. ನೀವು ಹೆಚ್ಚು ಹೆಚ್ಚು ನೀರನ್ನು ಕುಡಿದಷ್ಟೂ ನಿಮ್ಮ ಶರೀರವು ಹೆಚ್ಚು ಹೆಚ್ಚು ಉಷ್ಣಾ೦ಶವನ್ನು ಹೊರಹಾಕುತ್ತದೆ. ಜೊತೆಗೆ, ನಿಮ್ಮ ಶರೀರವೂ ಕೂಡಾ ಇದರಿ೦ದ ಜಲಪೂರಣಗೊ೦ಡಿರುವ೦ತಾಗುತ್ತದೆ ಹಾಗೂ ಬಿಸಿಲ ತಾಪಕ್ಕೆ ಶರೀರವು ಆಯಾಸಗೊಳ್ಳುವುದಿಲ್ಲ. ಹೀಗಾಗಬೇಕಾದರೆ, ನೀವು ಪ್ರತಿದಿನವೂ ಕನಿಷ್ಟ ಪಕ್ಷ ಎ೦ಟು ಲೋಟಗಳಷ್ಟಾದರೂ ನೀರನ್ನು ಕುಡಿಯಲೇ ಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…