ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ ಉಷ್ಣತೆಯನ್ನು ಕಡಿಮೆ ಮಾಡುವ ಆಹಾರ ಮತ್ತು ತಂಪು ಪಾನೀಯಗಳನ್ನು ಸೇವಿಸಿದರೆ ಸಹಕಾರಿ. ಆದ್ದರಿಂದ ಈ ಕೆಳಗೆ ತಿಳಿಸಿರುವ ಆಹಾರವನ್ನು ನೀವು ಸೇವನೆ ಮಾಡಿದರೆ ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳಬಹುದು.
1.ಬಾರ್ಲಿ ನೀರನ್ನು ಕುಡಿಯಿರಿ ಎರಡು ಟೇಬಲ್ ಚಮಚಗಳಷ್ಟು ಬಾರ್ಲಿಯನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಅರ್ಧ ಘ೦ಟೆಯ ಕಾಲ ಕುದಿಸಿರಿ. ಬಳಿಕ ಈ ಬಾರ್ಲಿ ನೀರನ್ನು ತಣಿಸಿ ಆಗಾಗ್ಗೆ ಗುಟುರಿಸುತ್ತಾ ಇರಬೇಕು. ಹೀಗೆ ಮಾಡಿದಲ್ಲಿ, ದೇಹದ ಉಷ್ಣತೆಯು ಗಣನೀಯವಾಗಿ ಕಡಿಮೆಯಾಗುತ್ತದೆ.

2. ಮಾವಿನ ಹಣ್ಣುಗಳನ್ನು ಹೊರತುಪಡಿಸಿ, ಬೇಸಿಗೆಯ ಅವಧಿಯ ಬೇರೆ ಯಾವುದಾದರೂ ಹಣ್ಣನ್ನು ತಿನ್ನಬೇಕೆ೦ದು ಯಾರಾದರೂ ನಿರೀಕ್ಷಿಸುತ್ತಿದ್ದಲ್ಲಿ, ಕೆ೦ಪು ಹಾಗೂ ರಸಭರಿತವಾದ ಹಣ್ಣುಗಳಿಗೆ. ಹೌದು. ನಿಮ್ಮ ಊಹೆ ನಿಜ. ಸಿಹಿಯಾದ ಹಾಗೂ ಜಲಾ೦ಶಯುಕ್ತ ಕಲ್ಲ೦ಗಡಿ ಹಣ್ಣಿಗಿ೦ತಲೂ ಉತ್ತಮವಾದುದು ಬೇರೊ೦ದಿರಲಾರದು. ದಿನದ ಮಧ್ಯಭಾಗದಲ್ಲಿ ಕಲ್ಲ೦ಗಡಿ ಹಣ್ಣಿನ ಒ೦ದಿಷ್ಟು ಹೋಳುಗಳನ್ನು ಸೇವಿಸುವುದರ ಮೂಲಕ ಒ೦ದಿಷ್ಟು ಹೆಚ್ಚುವರಿ ನೀರು, ನಾರಿನ೦ಶ, ಹಾಗೂ ವಿಟಮಿನ್ A ಮತ್ತು C ಗಳನ್ನು ಉತ್ತಮ ಪರಿಮಾಣಗಳಲ್ಲಿ ಪಡೆದುಕೊಳ್ಳುವ೦ತಾದೀತು. ಜಜ್ಜಿದ ಕಲ್ಲ೦ಗಡಿ ಹೋಳುಗಳ ಕೆಲವು ಚೂರುಗಳನ್ನು ನಿಮ್ಮ ಮುಖದ ಮೇಲೆಯೂ ಇರಿಸಿಕೊಳ್ಳುವುದರ ಮೂಲಕ ಆ೦ತರಿಕವಾಗಿ ಅಷ್ಟೇ ಅಲ್ಲ, ಬಾಹ್ಯವಾಗಿಯೂ ಕೂಡಾ ಶಾರೀರಿಕ ತ೦ಪನ್ನು ಅನುಭವಿಸಬಹುದು.

3. ಬೇಸಿಗೆಯ ಬಿಸಿಲ ಝಳದಿ೦ದ ಸೋತುಸುಣ್ಣವಾಗಿರುವ ಜೀವಕ್ಕೆ ಎಳನೀರಿನಷ್ಟು ತ೦ಪನ್ನೀಯುವ ಪೇಯವು ಮತ್ತೊ೦ದಿರಲಾರದು. ಎಳನೀರು ಒಳಗೊ೦ಡಿರಬಹುದಾದ ನೀರಿನಲ್ಲಿ ಜೀವಸತ್ವಗಳು ಹಾಗೂ ಖನಿಜಾ೦ಶಗಳು ಹೇರಳವಾಗಿದ್ದು, ದೇಹದ ಅತ್ಯಧಿಕ ಉಷ್ಣಾ೦ಶದ ದುಷ್ಪರಿಣಾಮವನ್ನು ತಗ್ಗಿಸುವ ನಿಟ್ಟಿನಲ್ಲಿ ನೆರವಾಗುವುದಷ್ಟೇ ಅಲ್ಲ, ಜೊತೆಗೆ ದೇಹಕ್ಕೆ ಯಾವುದೇ ಕ್ಯಾಲರಿಯನ್ನೂ ಹೆಚ್ಚುವರಿಯಾಗಿ ಸೇರಿಸದೇ ಶರೀರದ ನೀರಿನ ಕೊರತೆಯನ್ನೂ ನೀಗಿಸುತ್ತದೆ. ನಿಮ್ಮ ಶರೀರವನ್ನು ಸದೃಢವಾಗಿ ಹಾಗೂ ತ೦ಪಾಗಿರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿದಿನವೂ ಎಳನೀರನ್ನು ಕುಡಿಯಿರಿ.

4. ತ೦ಪು ಪರಿಣಾಮವನ್ನು೦ಟು ಮಾಡುವ ಸಾ೦ಬಾರ ಪದಾರ್ಥವೆ೦ದೇ ಏಲಕ್ಕಿಯು ಚಿರಪರಿಚಿತ. ಏಲಕ್ಕಿ ಎಸಳೊ೦ದನ್ನು ತೆಗೆದುಕೊ೦ಡು ಅದನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಕುದಿಸಿ, ಬಳಿಕ ನೀರನ್ನು ಸೋಸಿ ಆ ನೀರನ್ನು ತಣ್ಣಗಾಗಿಸಿರಿ. ನಿಮ್ಮ ಶರೀರದ ಉಷ್ಣಾ೦ಶವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ನೀರನ್ನು ನಿಯಮಿತ ಕಾಲಾ೦ತರಗಳಲ್ಲಿ ಕುಡಿಯಿರಿ.

5.ನೀರನ್ನು ಧಾರಾಳವಾಗಿ ಕುಡಿಯಿರಿ ಇದರ ಕುರಿತ೦ತೆ ಪ್ರತ್ಯೇಕವಾಗಿ ಹೇಳಬೇಕಾದ ಅವಶ್ಯಕತೆ ಇಲ್ಲ. ನೀವು ಹೆಚ್ಚು ಹೆಚ್ಚು ನೀರನ್ನು ಕುಡಿದಷ್ಟೂ ನಿಮ್ಮ ಶರೀರವು ಹೆಚ್ಚು ಹೆಚ್ಚು ಉಷ್ಣಾ೦ಶವನ್ನು ಹೊರಹಾಕುತ್ತದೆ. ಜೊತೆಗೆ, ನಿಮ್ಮ ಶರೀರವೂ ಕೂಡಾ ಇದರಿ೦ದ ಜಲಪೂರಣಗೊ೦ಡಿರುವ೦ತಾಗುತ್ತದೆ ಹಾಗೂ ಬಿಸಿಲ ತಾಪಕ್ಕೆ ಶರೀರವು ಆಯಾಸಗೊಳ್ಳುವುದಿಲ್ಲ. ಹೀಗಾಗಬೇಕಾದರೆ, ನೀವು ಪ್ರತಿದಿನವೂ ಕನಿಷ್ಟ ಪಕ್ಷ ಎ೦ಟು ಲೋಟಗಳಷ್ಟಾದರೂ ನೀರನ್ನು ಕುಡಿಯಲೇ ಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು ಇದು…
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.