News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮೈಸೂರಿನ ದೇವಾಲಯಕ್ಕೆ ಪ್ರವೇಶಿಸಿದ ಕಾರಣಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ…!

212

ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು, ಈ ಬಗ್ಗೆ ಗುಂಡ್ಲುಪೇಟೆ ದೇವಾಲಯದಲ್ಲಿ ದೂರು ನೀಡಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆ ವ್ಯಕ್ತಿ ವಿಗ್ರಹದ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ ಎಂದು ಗುಂಡ್ಲುಪೇಟೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಮಾನಸಿಕವಾಗಿ ಅಸಮರ್ಥನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ವಿಡಿಯೋದಲ್ಲಿ ಹೇಳಿರುವ ಹೇಳಿಕೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೆಲಸ ತೊರೆದಿದ್ದ ಸಂತ್ರಸ್ತ ನಾಗರಿಕ ಸೇವಾ ಪರೀಕ್ಷೆಗಾಗಿ ಸಿದ್ದತೆ ನಡೆಸುತ್ತಿದ್ದ ಎಂದು ಆತನ ಸಂಬಂಧಿ ಕಾಂತರಾಜ್ ತಿಳಿಸಿದ್ದಾರೆ. ಗುಂಡ್ಲುಪೇಟೆಯ ಶ್ಯಾನಾದ್ರಾಹಳ್ಳಿ ನಿವಾಸಿಯಾಗಿರುವ ಸಂತ್ರಸ್ತ ಜೂನ್ 2 ರಂದು ಮೈಸೂರಿನಲ್ಲಿ ನಾಗರಿಕ ಸೇವಾ ಪರೀಕ್ಷೆ ಬರೆಯಲು ಹೋಗಿದ್ದಾರೆ. ಪರೀಕ್ಷೆಯ ಪ್ರವೇಶ ಪತ್ರದ ಪ್ರತಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ದೊರೆತಿದೆ. ಆದಾಗ್ಯೂ, ಅಂದು ಪರೀಕ್ಷಾ ಕೇಂದ್ರಕ್ಕೆ ನಿಗದಿತ ವೇಳೆಗೆ ಹೋಗದೆ ಮನೆಗೆ ಹಿಂತಿರುಗುತ್ತಿದ್ದ ಎಂದು ಕಾಂತರಾಜ್ ಹೇಳಿದ್ದಾರೆ.

ಮನೆಗೆ ಹಿಂದಿರುವ ವೇಳೆಯಲ್ಲಿ ಊಟಿ ರಸ್ತೆಯ ರಾಘವಪುರ ಗ್ರಾಮದ ಬಳಿ ತಂಗಿದ್ದು, ಅಲ್ಲಿಯೇ ರಾತ್ರಿಯಿಡೀ ತಂಗಿದ್ದಾನೆ. ಮಾರನೇ ದಿನ ಕೆಬೆಕಟ್ಟೆ ಶನಿ ದೇವಾಲಯಕ್ಕೆ ಹೋಗಿದ್ದಾಗ ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಆತನ ಊರಿನ ಹೆಸರು ತಿಳಿಸಿದ ನಂತರ ಆತ ದಲಿತ ಎಂದು ತಿಳಿದು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಕಾಂತರಾಜ್ ಆರೋಪಿಸಿದ್ದಾರೆ.
ಸಂತ್ರಸ್ತನ ತಂದೆ ನಿವೃತ್ತ ಬಿಇಒ ಅಧಿಕಾರಿ ಆತನನನ್ನು ರಕ್ಷಿಸಲು ಹೋದಾಗ ಅವರನ್ನು ಕೂಡಾ ಕಂಬಕ್ಕೆ ಕಟ್ಟಲು ಗ್ರಾಮಸ್ಥರು ಪ್ರಯತ್ನಿಸಿದ್ದಾರೆ. ಆದರೆ, ಅವರ ಮಾನಸಿಕವಾಗಿ ಅಸ್ವಸ್ಥರಾದಗ ಅವರನ್ನು ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಒಂದು ದಿನ ಆತ ಮಾಡಿದ ವಿಡಿಯೋಗಳನ್ನು ಪಡೆಯಲು ಪ್ರಯತ್ನಿಸಿದ್ದಾಗಿ ಸಂತ್ರಸ್ತನ ಸ್ನೇಹಿತ ಮೂರ್ತಿ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

  • ಆರೋಗ್ಯ

    ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

    ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…

  • ಸುದ್ದಿ

    ಪರಿಹಾರದ ರೂಪದಲ್ಲಿ ಬಂದ ಲಕ್ಷಾಂತರ ಹಣಕ್ಕೋಸ್ಕರ, ಶುರುವಾಯ್ತು ಯೋಧನ ಕುಟುಂಬದಲ್ಲಿ ಜಗಳ?ಈ ಶಾಕಿಂಗ್ ಸುದ್ದಿ ನೋಡಿ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…

  • ಸುದ್ದಿ

    ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ…

  • ಸುದ್ದಿ

    D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

    ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…