News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

96

ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ.

ಹೃದಯಾಘಾತದ ಸಾಧ್ಯತೆ
ಜಾಮಾ ಅಧ್ಯಯನದ ಪ್ರಕಾರ, ಬೆಳಗಿನ ಉಪಹಾರವನ್ನು ತ್ಯಜಿಸುವ ಪುರುಷರಲ್ಲಿ ಹೃದಯಾಘಾತದ ಸಾಧ್ಯತೆ ಶೇ.27ಕ್ಕಿಂತ ಹೆಚ್ಚಿರುತ್ತದೆ. ಈ ಸಂಶೋಧನೆಯ ನೇತೃತ್ವ ವಹಿಸಿದ್ದ ಡಾ. ಲೇಹ್ ಕಾಹಿಲ್, ನೀವು ಆರೋಗ್ಯಕರವಾದ ಉಪಹಾರ ಸೇವಿಸಿದರೆ ಹೃದಯಾಘಾತದ ಅಪಾಯ ತಡೆಯಬಹುದು. ಬೆಳಗಿನ ಉಪಾಹಾರವನ್ನು ತ್ಯಜಿಸಿದರೆ ಜನರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ.


ತೂಕ ಹೆಚ್ಚಾಗುತ್ತದೆ
ಬೆಳಗಿನ ಸಮಯದಲ್ಲಿ ಉಪಹಾರವನ್ನು ಸೇವಿಸದಿರುವವರ ಕುರಿತು ನಡೆಸಿದ ಅಧ್ಯಯನಗಳ ಪ್ರಕಾರ, ಬೆಳಗ್ಗೆ ತಿಂಡಿ ತಿನ್ನದವರು ಕ್ರಮೇಣ ತೂಕವನ್ನು ಹೆಚ್ಚಿಸಿಕೊಂಡಿದ್ದರು. ಹಸಿವಿನ ಮಟ್ಟ ಹೆಚ್ಚಾದಷ್ಟೂ ಆಹಾರ ಸೇವನೆಯ ಪ್ರಮಾಣ ಹೆಚ್ಚಾಗುತ್ತದೆ. ತಿಂಡಿ ತ್ಯಜಿಸುವ ನಿರಂತರ ಅಭ್ಯಾಸವು ಅಂತಿಮವಾಗಿ ತೂಕ ಹೆಚ್ಚಾಗಲು ಕಾರಣವಾಗುತ್ತದೆ ಹೊರತು ತೂಕ ನಷ್ಟಕ್ಕೆ ಕಾರಣವಾಗುವುದಿಲ್ಲ ಎನ್ನುವುದನ್ನು ಮರೆಯಬೇಡಿ.

ದೇಹದ ಶಕ್ತಿ ಕುಗ್ಗುತ್ತದೆ
1999 ರಲ್ಲಿ ಫಿಸಿಯೋಲಾಜಿಕಲ್ ಬಿಹೇವಿಯರ್ ಎಂಬ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಉಪಹಾರವನ್ನು ತ್ಯಜಿಸುವುದರಿಂದ ದೇಹದ ಶಕ್ತಿ ಮತ್ತು ಮನಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಕ್ಯಾನ್ಸರ್ ಬರಬಹುದು!!
ಬೆಳಗಿನ ಸಮಯದಲ್ಲಿ ಉಪಹಾರ ತ್ಯಜಿಸಿ, ಆ ನಂತರ ಆಹಾರವನ್ನು ಅತಿಯಾಗಿ ಸೇವಿಸಿದರೆ ಸ್ಥೂಲಕಾಯತೆ ಬರಲು ದಾರಿ ಮಾಡಿ ಕೊಟ್ಟಂತಾಗುತ್ತದೆ. ಕ್ಯಾನ್ಸರ್ ರಿಸರ್ಚ್ ಯುಕೆ ನಡೆಸಿದ ಸಂಶೋಧನೆಯ ಪ್ರಕಾರ, ಅಧಿಕ ತೂಕ ಅಥವಾ ಬೊಜ್ಜು ಹೊಂದಿರುವ ವ್ಯಕ್ತಿಗೆ ಕ್ಯಾನ್ಸರ್ ಬರುವ ಅಪಾಯವಿದೆ ಎಂದು ತಿಳಿದುಬಂದಿದೆ.

ವಿಶುಯಲ್ ಸರ್ಚ್ ಟೆಸ್ಟ್
12 ರಿಂದ 15 ವರ್ಷದೊಳಗಿನ ಮಕ್ಕಳ ಮೇಲೆ ಒಂದು ಅಧ್ಯಯನ ನಡೆಸಲಾಯಿತು. ಮೊದಲನೆ ಪ್ರಯೋಗದಲ್ಲಿ ಇವರಿಗೆ ಉಪಹಾರ ನೀಡಲು ಅವಕಾಶ ನೀಡಲಾಯಿತು. ಎರಡನೇ ಪ್ರಯೋಗದಲ್ಲಿ ಉಪಹಾರ ಕೊಡಲಿಲ್ಲ. ಆಗ ಬಂದ ಫಲಿತಾಂಶ ಹೀಗಿತ್ತು. ಉಪಹಾರ ಸೇವಿಸಿದಾಗ ವಿಶುಯಲ್ ಸರ್ಚ್ ಟೆಸ್ಟ್ ರಿಸಲ್ಟ್ ಉತ್ತಮವಾಗಿತ್ತು. ಉಪಹಾರದ ಸೇವಿಸದಿದ್ದಾಗ ರಿಸಲ್ಟ್ ಶೂನ್ಯ. ಹದಿಹರೆಯದವರ ಮೇಲೆ ಈ ಅಧ್ಯಯನವನ್ನು ನಡೆಸಲಾಗಿದ್ದರೂ ಇದು ವಯಸ್ಕರಿಗೂ ಅನ್ವಯವಾಗುತ್ತದೆ.

ಕೂದಲು ಉದುರುತ್ತದೆ
ಬೆಳಗಿನ ಸಮಯ ಉಪಹಾರ ತ್ಯಜಿಸುವುದರಿಂದ ಆಗುವ ಅಡ್ಡಪರಿಣಾಮವೆಂದರೆ ಕೂದಲು ಉದುರುವುದು. ಇದು ಕೂದಲಿನ ಬೆಳವಣಿಗೆಯನ್ನು ತಪ್ಪಿಸಿ, ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ನಿಮಗೆ ಗೊತ್ತಿದೆಯೋ, ಇಲ್ಲವೋ ನೀವು ಬೆಳಗಿನ ಸಮಯ ಉಪಹಾರ ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ನೀವು ನಿಜಕ್ಕೂ ಸೊಂಪಾದ ಕೂದಲನ್ನು ಬಯಸಿದ್ದರೆ ಪ್ರತಿದಿನ ಪ್ರೊಟೀನ್ ಭರಿತ ಉಪಹಾರ ಸೇವಿಸಿ.

ಚಯಾಪಚಯ ಕ್ರಿಯೆ ಉಪಹಾರದಿಂದಲೇ
ಇಂಧನ ಇಲ್ಲದಿದ್ದರೆ ಕಾರು ಹೇಗೆ ಸ್ಟಾರ್ಟ್ ಆಗುವುದಿಲ್ಲವೋ ಅಂತೆಯೇ, ನಮ್ಮ ಚಯಾಪಚಯ ಕ್ರಿಯೆ ಪ್ರಾರಂಭವಾಗಲು ಉಪಹಾರ ಬೇಕು. ರಾತ್ರಿ12 ಗಂಟೆಗಳ ಕಾಲ ವಿಶ್ರಾಂತಿ ಪಡೆದ ನಂತರ ದೇಹವನ್ನು ಪೋಷಿಸುವುದು ಬೆಳಗಿನ ಉಪಾಹಾರ. ವಿವಿಧ ಅಧ್ಯಯನಗಳ ಪ್ರಕಾರ ಉಪಹಾರ ಸೇವಿಸುವ ಜನರ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ …!

    ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ  ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ  ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ  ನಡೆದ  ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…

  • ಸುದ್ದಿ

    ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

    ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…

  • ಸುದ್ದಿ

    ಪ್ಲಾಸ್ಟಿಕ್ ಬಳಕೆಯನ್ನು ನಿಷೇದ ಮಾಡಿ, ಇಲ್ಲದಿದ್ದರೆ ಬಿಬಿಎಂಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು – ಡಾ. ಕೆ. ಸುಧಾಕರ್ ಹೇಳಿಕೆ …!

    ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.  ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ  ಬ್ರಿಗೇಡ್…

  • ಸುದ್ದಿ

    ಮಾಸ್ಕ್ ಧರಿಸದೇ ರಸ್ತೆಗೆ ಇಳಿದವರಿಗೆ ಬಿತ್ತು ದುಬಾರಿ ದಂಡ. ಒಂದೇ ದಿನದಲ್ಲಿ 69,400 ರೂ. ವಸೂಲಿ.

    ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…

  • ಸುದ್ದಿ

    ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

    ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…

  • ದೇವರು-ಧರ್ಮ

    ಹೆಣ್ಣುಮಕ್ಕಳಿಗೆ ಮಾತ್ರ ಪ್ರವೇಶವಿರುವ,ಹೆಣ್ಣುಮಕ್ಕಳ ಶಬರಿಮಲೆ..!ಗಿನ್ನಿಸ್ ರೆಕಾರ್ಡ್’ನಲ್ಲಿ ದಾಖಲೆ…ಈ ದೇವಾಲಯದ ವಿಶೇಷತೆ ಏನು ಗೊತ್ತಾ..?

    ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.