ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ.

ಹೃದಯಾಘಾತದ ಸಾಧ್ಯತೆ
ಜಾಮಾ ಅಧ್ಯಯನದ ಪ್ರಕಾರ, ಬೆಳಗಿನ ಉಪಹಾರವನ್ನು ತ್ಯಜಿಸುವ ಪುರುಷರಲ್ಲಿ ಹೃದಯಾಘಾತದ ಸಾಧ್ಯತೆ ಶೇ.27ಕ್ಕಿಂತ ಹೆಚ್ಚಿರುತ್ತದೆ. ಈ ಸಂಶೋಧನೆಯ ನೇತೃತ್ವ ವಹಿಸಿದ್ದ ಡಾ. ಲೇಹ್ ಕಾಹಿಲ್, ನೀವು ಆರೋಗ್ಯಕರವಾದ ಉಪಹಾರ ಸೇವಿಸಿದರೆ ಹೃದಯಾಘಾತದ ಅಪಾಯ ತಡೆಯಬಹುದು. ಬೆಳಗಿನ ಉಪಾಹಾರವನ್ನು ತ್ಯಜಿಸಿದರೆ ಜನರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ.

ತೂಕ ಹೆಚ್ಚಾಗುತ್ತದೆ
ಬೆಳಗಿನ ಸಮಯದಲ್ಲಿ ಉಪಹಾರವನ್ನು ಸೇವಿಸದಿರುವವರ ಕುರಿತು ನಡೆಸಿದ ಅಧ್ಯಯನಗಳ ಪ್ರಕಾರ, ಬೆಳಗ್ಗೆ ತಿಂಡಿ ತಿನ್ನದವರು ಕ್ರಮೇಣ ತೂಕವನ್ನು ಹೆಚ್ಚಿಸಿಕೊಂಡಿದ್ದರು. ಹಸಿವಿನ ಮಟ್ಟ ಹೆಚ್ಚಾದಷ್ಟೂ ಆಹಾರ ಸೇವನೆಯ ಪ್ರಮಾಣ ಹೆಚ್ಚಾಗುತ್ತದೆ. ತಿಂಡಿ ತ್ಯಜಿಸುವ ನಿರಂತರ ಅಭ್ಯಾಸವು ಅಂತಿಮವಾಗಿ ತೂಕ ಹೆಚ್ಚಾಗಲು ಕಾರಣವಾಗುತ್ತದೆ ಹೊರತು ತೂಕ ನಷ್ಟಕ್ಕೆ ಕಾರಣವಾಗುವುದಿಲ್ಲ ಎನ್ನುವುದನ್ನು ಮರೆಯಬೇಡಿ.
ದೇಹದ ಶಕ್ತಿ ಕುಗ್ಗುತ್ತದೆ
1999 ರಲ್ಲಿ ಫಿಸಿಯೋಲಾಜಿಕಲ್ ಬಿಹೇವಿಯರ್ ಎಂಬ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಉಪಹಾರವನ್ನು ತ್ಯಜಿಸುವುದರಿಂದ ದೇಹದ ಶಕ್ತಿ ಮತ್ತು ಮನಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಕ್ಯಾನ್ಸರ್ ಬರಬಹುದು!!
ಬೆಳಗಿನ ಸಮಯದಲ್ಲಿ ಉಪಹಾರ ತ್ಯಜಿಸಿ, ಆ ನಂತರ ಆಹಾರವನ್ನು ಅತಿಯಾಗಿ ಸೇವಿಸಿದರೆ ಸ್ಥೂಲಕಾಯತೆ ಬರಲು ದಾರಿ ಮಾಡಿ ಕೊಟ್ಟಂತಾಗುತ್ತದೆ. ಕ್ಯಾನ್ಸರ್ ರಿಸರ್ಚ್ ಯುಕೆ ನಡೆಸಿದ ಸಂಶೋಧನೆಯ ಪ್ರಕಾರ, ಅಧಿಕ ತೂಕ ಅಥವಾ ಬೊಜ್ಜು ಹೊಂದಿರುವ ವ್ಯಕ್ತಿಗೆ ಕ್ಯಾನ್ಸರ್ ಬರುವ ಅಪಾಯವಿದೆ ಎಂದು ತಿಳಿದುಬಂದಿದೆ.
ವಿಶುಯಲ್ ಸರ್ಚ್ ಟೆಸ್ಟ್
12 ರಿಂದ 15 ವರ್ಷದೊಳಗಿನ ಮಕ್ಕಳ ಮೇಲೆ ಒಂದು ಅಧ್ಯಯನ ನಡೆಸಲಾಯಿತು. ಮೊದಲನೆ ಪ್ರಯೋಗದಲ್ಲಿ ಇವರಿಗೆ ಉಪಹಾರ ನೀಡಲು ಅವಕಾಶ ನೀಡಲಾಯಿತು. ಎರಡನೇ ಪ್ರಯೋಗದಲ್ಲಿ ಉಪಹಾರ ಕೊಡಲಿಲ್ಲ. ಆಗ ಬಂದ ಫಲಿತಾಂಶ ಹೀಗಿತ್ತು. ಉಪಹಾರ ಸೇವಿಸಿದಾಗ ವಿಶುಯಲ್ ಸರ್ಚ್ ಟೆಸ್ಟ್ ರಿಸಲ್ಟ್ ಉತ್ತಮವಾಗಿತ್ತು. ಉಪಹಾರದ ಸೇವಿಸದಿದ್ದಾಗ ರಿಸಲ್ಟ್ ಶೂನ್ಯ. ಹದಿಹರೆಯದವರ ಮೇಲೆ ಈ ಅಧ್ಯಯನವನ್ನು ನಡೆಸಲಾಗಿದ್ದರೂ ಇದು ವಯಸ್ಕರಿಗೂ ಅನ್ವಯವಾಗುತ್ತದೆ.

ಕೂದಲು ಉದುರುತ್ತದೆ
ಬೆಳಗಿನ ಸಮಯ ಉಪಹಾರ ತ್ಯಜಿಸುವುದರಿಂದ ಆಗುವ ಅಡ್ಡಪರಿಣಾಮವೆಂದರೆ ಕೂದಲು ಉದುರುವುದು. ಇದು ಕೂದಲಿನ ಬೆಳವಣಿಗೆಯನ್ನು ತಪ್ಪಿಸಿ, ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ನಿಮಗೆ ಗೊತ್ತಿದೆಯೋ, ಇಲ್ಲವೋ ನೀವು ಬೆಳಗಿನ ಸಮಯ ಉಪಹಾರ ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ನೀವು ನಿಜಕ್ಕೂ ಸೊಂಪಾದ ಕೂದಲನ್ನು ಬಯಸಿದ್ದರೆ ಪ್ರತಿದಿನ ಪ್ರೊಟೀನ್ ಭರಿತ ಉಪಹಾರ ಸೇವಿಸಿ.

ಚಯಾಪಚಯ ಕ್ರಿಯೆ ಉಪಹಾರದಿಂದಲೇ
ಇಂಧನ ಇಲ್ಲದಿದ್ದರೆ ಕಾರು ಹೇಗೆ ಸ್ಟಾರ್ಟ್ ಆಗುವುದಿಲ್ಲವೋ ಅಂತೆಯೇ, ನಮ್ಮ ಚಯಾಪಚಯ ಕ್ರಿಯೆ ಪ್ರಾರಂಭವಾಗಲು ಉಪಹಾರ ಬೇಕು. ರಾತ್ರಿ12 ಗಂಟೆಗಳ ಕಾಲ ವಿಶ್ರಾಂತಿ ಪಡೆದ ನಂತರ ದೇಹವನ್ನು ಪೋಷಿಸುವುದು ಬೆಳಗಿನ ಉಪಾಹಾರ. ವಿವಿಧ ಅಧ್ಯಯನಗಳ ಪ್ರಕಾರ ಉಪಹಾರ ಸೇವಿಸುವ ಜನರ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…
ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…