ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ.

ಹೃದಯಾಘಾತದ ಸಾಧ್ಯತೆ
ಜಾಮಾ ಅಧ್ಯಯನದ ಪ್ರಕಾರ, ಬೆಳಗಿನ ಉಪಹಾರವನ್ನು ತ್ಯಜಿಸುವ ಪುರುಷರಲ್ಲಿ ಹೃದಯಾಘಾತದ ಸಾಧ್ಯತೆ ಶೇ.27ಕ್ಕಿಂತ ಹೆಚ್ಚಿರುತ್ತದೆ. ಈ ಸಂಶೋಧನೆಯ ನೇತೃತ್ವ ವಹಿಸಿದ್ದ ಡಾ. ಲೇಹ್ ಕಾಹಿಲ್, ನೀವು ಆರೋಗ್ಯಕರವಾದ ಉಪಹಾರ ಸೇವಿಸಿದರೆ ಹೃದಯಾಘಾತದ ಅಪಾಯ ತಡೆಯಬಹುದು. ಬೆಳಗಿನ ಉಪಾಹಾರವನ್ನು ತ್ಯಜಿಸಿದರೆ ಜನರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ.

ತೂಕ ಹೆಚ್ಚಾಗುತ್ತದೆ
ಬೆಳಗಿನ ಸಮಯದಲ್ಲಿ ಉಪಹಾರವನ್ನು ಸೇವಿಸದಿರುವವರ ಕುರಿತು ನಡೆಸಿದ ಅಧ್ಯಯನಗಳ ಪ್ರಕಾರ, ಬೆಳಗ್ಗೆ ತಿಂಡಿ ತಿನ್ನದವರು ಕ್ರಮೇಣ ತೂಕವನ್ನು ಹೆಚ್ಚಿಸಿಕೊಂಡಿದ್ದರು. ಹಸಿವಿನ ಮಟ್ಟ ಹೆಚ್ಚಾದಷ್ಟೂ ಆಹಾರ ಸೇವನೆಯ ಪ್ರಮಾಣ ಹೆಚ್ಚಾಗುತ್ತದೆ. ತಿಂಡಿ ತ್ಯಜಿಸುವ ನಿರಂತರ ಅಭ್ಯಾಸವು ಅಂತಿಮವಾಗಿ ತೂಕ ಹೆಚ್ಚಾಗಲು ಕಾರಣವಾಗುತ್ತದೆ ಹೊರತು ತೂಕ ನಷ್ಟಕ್ಕೆ ಕಾರಣವಾಗುವುದಿಲ್ಲ ಎನ್ನುವುದನ್ನು ಮರೆಯಬೇಡಿ.
ದೇಹದ ಶಕ್ತಿ ಕುಗ್ಗುತ್ತದೆ
1999 ರಲ್ಲಿ ಫಿಸಿಯೋಲಾಜಿಕಲ್ ಬಿಹೇವಿಯರ್ ಎಂಬ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಉಪಹಾರವನ್ನು ತ್ಯಜಿಸುವುದರಿಂದ ದೇಹದ ಶಕ್ತಿ ಮತ್ತು ಮನಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಕ್ಯಾನ್ಸರ್ ಬರಬಹುದು!!
ಬೆಳಗಿನ ಸಮಯದಲ್ಲಿ ಉಪಹಾರ ತ್ಯಜಿಸಿ, ಆ ನಂತರ ಆಹಾರವನ್ನು ಅತಿಯಾಗಿ ಸೇವಿಸಿದರೆ ಸ್ಥೂಲಕಾಯತೆ ಬರಲು ದಾರಿ ಮಾಡಿ ಕೊಟ್ಟಂತಾಗುತ್ತದೆ. ಕ್ಯಾನ್ಸರ್ ರಿಸರ್ಚ್ ಯುಕೆ ನಡೆಸಿದ ಸಂಶೋಧನೆಯ ಪ್ರಕಾರ, ಅಧಿಕ ತೂಕ ಅಥವಾ ಬೊಜ್ಜು ಹೊಂದಿರುವ ವ್ಯಕ್ತಿಗೆ ಕ್ಯಾನ್ಸರ್ ಬರುವ ಅಪಾಯವಿದೆ ಎಂದು ತಿಳಿದುಬಂದಿದೆ.
ವಿಶುಯಲ್ ಸರ್ಚ್ ಟೆಸ್ಟ್
12 ರಿಂದ 15 ವರ್ಷದೊಳಗಿನ ಮಕ್ಕಳ ಮೇಲೆ ಒಂದು ಅಧ್ಯಯನ ನಡೆಸಲಾಯಿತು. ಮೊದಲನೆ ಪ್ರಯೋಗದಲ್ಲಿ ಇವರಿಗೆ ಉಪಹಾರ ನೀಡಲು ಅವಕಾಶ ನೀಡಲಾಯಿತು. ಎರಡನೇ ಪ್ರಯೋಗದಲ್ಲಿ ಉಪಹಾರ ಕೊಡಲಿಲ್ಲ. ಆಗ ಬಂದ ಫಲಿತಾಂಶ ಹೀಗಿತ್ತು. ಉಪಹಾರ ಸೇವಿಸಿದಾಗ ವಿಶುಯಲ್ ಸರ್ಚ್ ಟೆಸ್ಟ್ ರಿಸಲ್ಟ್ ಉತ್ತಮವಾಗಿತ್ತು. ಉಪಹಾರದ ಸೇವಿಸದಿದ್ದಾಗ ರಿಸಲ್ಟ್ ಶೂನ್ಯ. ಹದಿಹರೆಯದವರ ಮೇಲೆ ಈ ಅಧ್ಯಯನವನ್ನು ನಡೆಸಲಾಗಿದ್ದರೂ ಇದು ವಯಸ್ಕರಿಗೂ ಅನ್ವಯವಾಗುತ್ತದೆ.

ಕೂದಲು ಉದುರುತ್ತದೆ
ಬೆಳಗಿನ ಸಮಯ ಉಪಹಾರ ತ್ಯಜಿಸುವುದರಿಂದ ಆಗುವ ಅಡ್ಡಪರಿಣಾಮವೆಂದರೆ ಕೂದಲು ಉದುರುವುದು. ಇದು ಕೂದಲಿನ ಬೆಳವಣಿಗೆಯನ್ನು ತಪ್ಪಿಸಿ, ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ನಿಮಗೆ ಗೊತ್ತಿದೆಯೋ, ಇಲ್ಲವೋ ನೀವು ಬೆಳಗಿನ ಸಮಯ ಉಪಹಾರ ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ನೀವು ನಿಜಕ್ಕೂ ಸೊಂಪಾದ ಕೂದಲನ್ನು ಬಯಸಿದ್ದರೆ ಪ್ರತಿದಿನ ಪ್ರೊಟೀನ್ ಭರಿತ ಉಪಹಾರ ಸೇವಿಸಿ.

ಚಯಾಪಚಯ ಕ್ರಿಯೆ ಉಪಹಾರದಿಂದಲೇ
ಇಂಧನ ಇಲ್ಲದಿದ್ದರೆ ಕಾರು ಹೇಗೆ ಸ್ಟಾರ್ಟ್ ಆಗುವುದಿಲ್ಲವೋ ಅಂತೆಯೇ, ನಮ್ಮ ಚಯಾಪಚಯ ಕ್ರಿಯೆ ಪ್ರಾರಂಭವಾಗಲು ಉಪಹಾರ ಬೇಕು. ರಾತ್ರಿ12 ಗಂಟೆಗಳ ಕಾಲ ವಿಶ್ರಾಂತಿ ಪಡೆದ ನಂತರ ದೇಹವನ್ನು ಪೋಷಿಸುವುದು ಬೆಳಗಿನ ಉಪಾಹಾರ. ವಿವಿಧ ಅಧ್ಯಯನಗಳ ಪ್ರಕಾರ ಉಪಹಾರ ಸೇವಿಸುವ ಜನರ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…