News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಉಪಯುಕ್ತ ಮಾಹಿತಿ

ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

95

ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ.

ಹೃದಯಾಘಾತದ ಸಾಧ್ಯತೆ
ಜಾಮಾ ಅಧ್ಯಯನದ ಪ್ರಕಾರ, ಬೆಳಗಿನ ಉಪಹಾರವನ್ನು ತ್ಯಜಿಸುವ ಪುರುಷರಲ್ಲಿ ಹೃದಯಾಘಾತದ ಸಾಧ್ಯತೆ ಶೇ.27ಕ್ಕಿಂತ ಹೆಚ್ಚಿರುತ್ತದೆ. ಈ ಸಂಶೋಧನೆಯ ನೇತೃತ್ವ ವಹಿಸಿದ್ದ ಡಾ. ಲೇಹ್ ಕಾಹಿಲ್, ನೀವು ಆರೋಗ್ಯಕರವಾದ ಉಪಹಾರ ಸೇವಿಸಿದರೆ ಹೃದಯಾಘಾತದ ಅಪಾಯ ತಡೆಯಬಹುದು. ಬೆಳಗಿನ ಉಪಾಹಾರವನ್ನು ತ್ಯಜಿಸಿದರೆ ಜನರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ.


ತೂಕ ಹೆಚ್ಚಾಗುತ್ತದೆ
ಬೆಳಗಿನ ಸಮಯದಲ್ಲಿ ಉಪಹಾರವನ್ನು ಸೇವಿಸದಿರುವವರ ಕುರಿತು ನಡೆಸಿದ ಅಧ್ಯಯನಗಳ ಪ್ರಕಾರ, ಬೆಳಗ್ಗೆ ತಿಂಡಿ ತಿನ್ನದವರು ಕ್ರಮೇಣ ತೂಕವನ್ನು ಹೆಚ್ಚಿಸಿಕೊಂಡಿದ್ದರು. ಹಸಿವಿನ ಮಟ್ಟ ಹೆಚ್ಚಾದಷ್ಟೂ ಆಹಾರ ಸೇವನೆಯ ಪ್ರಮಾಣ ಹೆಚ್ಚಾಗುತ್ತದೆ. ತಿಂಡಿ ತ್ಯಜಿಸುವ ನಿರಂತರ ಅಭ್ಯಾಸವು ಅಂತಿಮವಾಗಿ ತೂಕ ಹೆಚ್ಚಾಗಲು ಕಾರಣವಾಗುತ್ತದೆ ಹೊರತು ತೂಕ ನಷ್ಟಕ್ಕೆ ಕಾರಣವಾಗುವುದಿಲ್ಲ ಎನ್ನುವುದನ್ನು ಮರೆಯಬೇಡಿ.

ದೇಹದ ಶಕ್ತಿ ಕುಗ್ಗುತ್ತದೆ
1999 ರಲ್ಲಿ ಫಿಸಿಯೋಲಾಜಿಕಲ್ ಬಿಹೇವಿಯರ್ ಎಂಬ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಉಪಹಾರವನ್ನು ತ್ಯಜಿಸುವುದರಿಂದ ದೇಹದ ಶಕ್ತಿ ಮತ್ತು ಮನಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಕ್ಯಾನ್ಸರ್ ಬರಬಹುದು!!
ಬೆಳಗಿನ ಸಮಯದಲ್ಲಿ ಉಪಹಾರ ತ್ಯಜಿಸಿ, ಆ ನಂತರ ಆಹಾರವನ್ನು ಅತಿಯಾಗಿ ಸೇವಿಸಿದರೆ ಸ್ಥೂಲಕಾಯತೆ ಬರಲು ದಾರಿ ಮಾಡಿ ಕೊಟ್ಟಂತಾಗುತ್ತದೆ. ಕ್ಯಾನ್ಸರ್ ರಿಸರ್ಚ್ ಯುಕೆ ನಡೆಸಿದ ಸಂಶೋಧನೆಯ ಪ್ರಕಾರ, ಅಧಿಕ ತೂಕ ಅಥವಾ ಬೊಜ್ಜು ಹೊಂದಿರುವ ವ್ಯಕ್ತಿಗೆ ಕ್ಯಾನ್ಸರ್ ಬರುವ ಅಪಾಯವಿದೆ ಎಂದು ತಿಳಿದುಬಂದಿದೆ.

ವಿಶುಯಲ್ ಸರ್ಚ್ ಟೆಸ್ಟ್
12 ರಿಂದ 15 ವರ್ಷದೊಳಗಿನ ಮಕ್ಕಳ ಮೇಲೆ ಒಂದು ಅಧ್ಯಯನ ನಡೆಸಲಾಯಿತು. ಮೊದಲನೆ ಪ್ರಯೋಗದಲ್ಲಿ ಇವರಿಗೆ ಉಪಹಾರ ನೀಡಲು ಅವಕಾಶ ನೀಡಲಾಯಿತು. ಎರಡನೇ ಪ್ರಯೋಗದಲ್ಲಿ ಉಪಹಾರ ಕೊಡಲಿಲ್ಲ. ಆಗ ಬಂದ ಫಲಿತಾಂಶ ಹೀಗಿತ್ತು. ಉಪಹಾರ ಸೇವಿಸಿದಾಗ ವಿಶುಯಲ್ ಸರ್ಚ್ ಟೆಸ್ಟ್ ರಿಸಲ್ಟ್ ಉತ್ತಮವಾಗಿತ್ತು. ಉಪಹಾರದ ಸೇವಿಸದಿದ್ದಾಗ ರಿಸಲ್ಟ್ ಶೂನ್ಯ. ಹದಿಹರೆಯದವರ ಮೇಲೆ ಈ ಅಧ್ಯಯನವನ್ನು ನಡೆಸಲಾಗಿದ್ದರೂ ಇದು ವಯಸ್ಕರಿಗೂ ಅನ್ವಯವಾಗುತ್ತದೆ.

ಕೂದಲು ಉದುರುತ್ತದೆ
ಬೆಳಗಿನ ಸಮಯ ಉಪಹಾರ ತ್ಯಜಿಸುವುದರಿಂದ ಆಗುವ ಅಡ್ಡಪರಿಣಾಮವೆಂದರೆ ಕೂದಲು ಉದುರುವುದು. ಇದು ಕೂದಲಿನ ಬೆಳವಣಿಗೆಯನ್ನು ತಪ್ಪಿಸಿ, ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ನಿಮಗೆ ಗೊತ್ತಿದೆಯೋ, ಇಲ್ಲವೋ ನೀವು ಬೆಳಗಿನ ಸಮಯ ಉಪಹಾರ ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ನೀವು ನಿಜಕ್ಕೂ ಸೊಂಪಾದ ಕೂದಲನ್ನು ಬಯಸಿದ್ದರೆ ಪ್ರತಿದಿನ ಪ್ರೊಟೀನ್ ಭರಿತ ಉಪಹಾರ ಸೇವಿಸಿ.

ಚಯಾಪಚಯ ಕ್ರಿಯೆ ಉಪಹಾರದಿಂದಲೇ
ಇಂಧನ ಇಲ್ಲದಿದ್ದರೆ ಕಾರು ಹೇಗೆ ಸ್ಟಾರ್ಟ್ ಆಗುವುದಿಲ್ಲವೋ ಅಂತೆಯೇ, ನಮ್ಮ ಚಯಾಪಚಯ ಕ್ರಿಯೆ ಪ್ರಾರಂಭವಾಗಲು ಉಪಹಾರ ಬೇಕು. ರಾತ್ರಿ12 ಗಂಟೆಗಳ ಕಾಲ ವಿಶ್ರಾಂತಿ ಪಡೆದ ನಂತರ ದೇಹವನ್ನು ಪೋಷಿಸುವುದು ಬೆಳಗಿನ ಉಪಾಹಾರ. ವಿವಿಧ ಅಧ್ಯಯನಗಳ ಪ್ರಕಾರ ಉಪಹಾರ ಸೇವಿಸುವ ಜನರ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ಈಗೆ ಮಾಡಿ.

    ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್‌ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್‌ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…

  • ಸುದ್ದಿ

    ಹಗಲು ನಿದ್ದೆ ಮಾಡುವುದರಿಂದಾಗುವ ಪ್ರಜಾಜನಗಳೇನು ಗೊತ್ತ..?

    ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…

  • ಸುದ್ದಿ

    ಯುವತಿ ಸ್ನಾನ ಮಾಡೋವಾಗ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‍ಮೇಲ್ ಮಾಡಿ ಅತ್ಯಾಚಾರ…!

    34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…

  • ಸಿನಿಮಾ

    ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

    ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…

  • ಕರ್ನಾಟಕ

    ಮೋದಿಯವರಿಗೆ ತನ್ನ ರಕ್ತದಲ್ಲಿ, ಪತ್ರ ಬರೆದ ಕರುನಾಡಿನ ಹಳ್ಳಿ ಯುವಕ! ಆ ಪತ್ರದಲ್ಲಿ ಏನಿದೆ ಗೊತ್ತಾ?

    ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…