ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ.
ಹೃದಯಾಘಾತದ ಸಾಧ್ಯತೆ
ಜಾಮಾ ಅಧ್ಯಯನದ ಪ್ರಕಾರ, ಬೆಳಗಿನ ಉಪಹಾರವನ್ನು ತ್ಯಜಿಸುವ ಪುರುಷರಲ್ಲಿ ಹೃದಯಾಘಾತದ ಸಾಧ್ಯತೆ ಶೇ.27ಕ್ಕಿಂತ ಹೆಚ್ಚಿರುತ್ತದೆ. ಈ ಸಂಶೋಧನೆಯ ನೇತೃತ್ವ ವಹಿಸಿದ್ದ ಡಾ. ಲೇಹ್ ಕಾಹಿಲ್, ನೀವು ಆರೋಗ್ಯಕರವಾದ ಉಪಹಾರ ಸೇವಿಸಿದರೆ ಹೃದಯಾಘಾತದ ಅಪಾಯ ತಡೆಯಬಹುದು. ಬೆಳಗಿನ ಉಪಾಹಾರವನ್ನು ತ್ಯಜಿಸಿದರೆ ಜನರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ.
ತೂಕ ಹೆಚ್ಚಾಗುತ್ತದೆ
ಬೆಳಗಿನ ಸಮಯದಲ್ಲಿ ಉಪಹಾರವನ್ನು ಸೇವಿಸದಿರುವವರ ಕುರಿತು ನಡೆಸಿದ ಅಧ್ಯಯನಗಳ ಪ್ರಕಾರ, ಬೆಳಗ್ಗೆ ತಿಂಡಿ ತಿನ್ನದವರು ಕ್ರಮೇಣ ತೂಕವನ್ನು ಹೆಚ್ಚಿಸಿಕೊಂಡಿದ್ದರು. ಹಸಿವಿನ ಮಟ್ಟ ಹೆಚ್ಚಾದಷ್ಟೂ ಆಹಾರ ಸೇವನೆಯ ಪ್ರಮಾಣ ಹೆಚ್ಚಾಗುತ್ತದೆ. ತಿಂಡಿ ತ್ಯಜಿಸುವ ನಿರಂತರ ಅಭ್ಯಾಸವು ಅಂತಿಮವಾಗಿ ತೂಕ ಹೆಚ್ಚಾಗಲು ಕಾರಣವಾಗುತ್ತದೆ ಹೊರತು ತೂಕ ನಷ್ಟಕ್ಕೆ ಕಾರಣವಾಗುವುದಿಲ್ಲ ಎನ್ನುವುದನ್ನು ಮರೆಯಬೇಡಿ.
ದೇಹದ ಶಕ್ತಿ ಕುಗ್ಗುತ್ತದೆ
1999 ರಲ್ಲಿ ಫಿಸಿಯೋಲಾಜಿಕಲ್ ಬಿಹೇವಿಯರ್ ಎಂಬ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಉಪಹಾರವನ್ನು ತ್ಯಜಿಸುವುದರಿಂದ ದೇಹದ ಶಕ್ತಿ ಮತ್ತು ಮನಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಕ್ಯಾನ್ಸರ್ ಬರಬಹುದು!!
ಬೆಳಗಿನ ಸಮಯದಲ್ಲಿ ಉಪಹಾರ ತ್ಯಜಿಸಿ, ಆ ನಂತರ ಆಹಾರವನ್ನು ಅತಿಯಾಗಿ ಸೇವಿಸಿದರೆ ಸ್ಥೂಲಕಾಯತೆ ಬರಲು ದಾರಿ ಮಾಡಿ ಕೊಟ್ಟಂತಾಗುತ್ತದೆ. ಕ್ಯಾನ್ಸರ್ ರಿಸರ್ಚ್ ಯುಕೆ ನಡೆಸಿದ ಸಂಶೋಧನೆಯ ಪ್ರಕಾರ, ಅಧಿಕ ತೂಕ ಅಥವಾ ಬೊಜ್ಜು ಹೊಂದಿರುವ ವ್ಯಕ್ತಿಗೆ ಕ್ಯಾನ್ಸರ್ ಬರುವ ಅಪಾಯವಿದೆ ಎಂದು ತಿಳಿದುಬಂದಿದೆ.
ವಿಶುಯಲ್ ಸರ್ಚ್ ಟೆಸ್ಟ್
12 ರಿಂದ 15 ವರ್ಷದೊಳಗಿನ ಮಕ್ಕಳ ಮೇಲೆ ಒಂದು ಅಧ್ಯಯನ ನಡೆಸಲಾಯಿತು. ಮೊದಲನೆ ಪ್ರಯೋಗದಲ್ಲಿ ಇವರಿಗೆ ಉಪಹಾರ ನೀಡಲು ಅವಕಾಶ ನೀಡಲಾಯಿತು. ಎರಡನೇ ಪ್ರಯೋಗದಲ್ಲಿ ಉಪಹಾರ ಕೊಡಲಿಲ್ಲ. ಆಗ ಬಂದ ಫಲಿತಾಂಶ ಹೀಗಿತ್ತು. ಉಪಹಾರ ಸೇವಿಸಿದಾಗ ವಿಶುಯಲ್ ಸರ್ಚ್ ಟೆಸ್ಟ್ ರಿಸಲ್ಟ್ ಉತ್ತಮವಾಗಿತ್ತು. ಉಪಹಾರದ ಸೇವಿಸದಿದ್ದಾಗ ರಿಸಲ್ಟ್ ಶೂನ್ಯ. ಹದಿಹರೆಯದವರ ಮೇಲೆ ಈ ಅಧ್ಯಯನವನ್ನು ನಡೆಸಲಾಗಿದ್ದರೂ ಇದು ವಯಸ್ಕರಿಗೂ ಅನ್ವಯವಾಗುತ್ತದೆ.
ಕೂದಲು ಉದುರುತ್ತದೆ
ಬೆಳಗಿನ ಸಮಯ ಉಪಹಾರ ತ್ಯಜಿಸುವುದರಿಂದ ಆಗುವ ಅಡ್ಡಪರಿಣಾಮವೆಂದರೆ ಕೂದಲು ಉದುರುವುದು. ಇದು ಕೂದಲಿನ ಬೆಳವಣಿಗೆಯನ್ನು ತಪ್ಪಿಸಿ, ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ನಿಮಗೆ ಗೊತ್ತಿದೆಯೋ, ಇಲ್ಲವೋ ನೀವು ಬೆಳಗಿನ ಸಮಯ ಉಪಹಾರ ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ನೀವು ನಿಜಕ್ಕೂ ಸೊಂಪಾದ ಕೂದಲನ್ನು ಬಯಸಿದ್ದರೆ ಪ್ರತಿದಿನ ಪ್ರೊಟೀನ್ ಭರಿತ ಉಪಹಾರ ಸೇವಿಸಿ.
ಚಯಾಪಚಯ ಕ್ರಿಯೆ ಉಪಹಾರದಿಂದಲೇ
ಇಂಧನ ಇಲ್ಲದಿದ್ದರೆ ಕಾರು ಹೇಗೆ ಸ್ಟಾರ್ಟ್ ಆಗುವುದಿಲ್ಲವೋ ಅಂತೆಯೇ, ನಮ್ಮ ಚಯಾಪಚಯ ಕ್ರಿಯೆ ಪ್ರಾರಂಭವಾಗಲು ಉಪಹಾರ ಬೇಕು. ರಾತ್ರಿ12 ಗಂಟೆಗಳ ಕಾಲ ವಿಶ್ರಾಂತಿ ಪಡೆದ ನಂತರ ದೇಹವನ್ನು ಪೋಷಿಸುವುದು ಬೆಳಗಿನ ಉಪಾಹಾರ. ವಿವಿಧ ಅಧ್ಯಯನಗಳ ಪ್ರಕಾರ ಉಪಹಾರ ಸೇವಿಸುವ ಜನರ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?