ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ.

ಹೃದಯಾಘಾತದ ಸಾಧ್ಯತೆ
ಜಾಮಾ ಅಧ್ಯಯನದ ಪ್ರಕಾರ, ಬೆಳಗಿನ ಉಪಹಾರವನ್ನು ತ್ಯಜಿಸುವ ಪುರುಷರಲ್ಲಿ ಹೃದಯಾಘಾತದ ಸಾಧ್ಯತೆ ಶೇ.27ಕ್ಕಿಂತ ಹೆಚ್ಚಿರುತ್ತದೆ. ಈ ಸಂಶೋಧನೆಯ ನೇತೃತ್ವ ವಹಿಸಿದ್ದ ಡಾ. ಲೇಹ್ ಕಾಹಿಲ್, ನೀವು ಆರೋಗ್ಯಕರವಾದ ಉಪಹಾರ ಸೇವಿಸಿದರೆ ಹೃದಯಾಘಾತದ ಅಪಾಯ ತಡೆಯಬಹುದು. ಬೆಳಗಿನ ಉಪಾಹಾರವನ್ನು ತ್ಯಜಿಸಿದರೆ ಜನರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ.

ತೂಕ ಹೆಚ್ಚಾಗುತ್ತದೆ
ಬೆಳಗಿನ ಸಮಯದಲ್ಲಿ ಉಪಹಾರವನ್ನು ಸೇವಿಸದಿರುವವರ ಕುರಿತು ನಡೆಸಿದ ಅಧ್ಯಯನಗಳ ಪ್ರಕಾರ, ಬೆಳಗ್ಗೆ ತಿಂಡಿ ತಿನ್ನದವರು ಕ್ರಮೇಣ ತೂಕವನ್ನು ಹೆಚ್ಚಿಸಿಕೊಂಡಿದ್ದರು. ಹಸಿವಿನ ಮಟ್ಟ ಹೆಚ್ಚಾದಷ್ಟೂ ಆಹಾರ ಸೇವನೆಯ ಪ್ರಮಾಣ ಹೆಚ್ಚಾಗುತ್ತದೆ. ತಿಂಡಿ ತ್ಯಜಿಸುವ ನಿರಂತರ ಅಭ್ಯಾಸವು ಅಂತಿಮವಾಗಿ ತೂಕ ಹೆಚ್ಚಾಗಲು ಕಾರಣವಾಗುತ್ತದೆ ಹೊರತು ತೂಕ ನಷ್ಟಕ್ಕೆ ಕಾರಣವಾಗುವುದಿಲ್ಲ ಎನ್ನುವುದನ್ನು ಮರೆಯಬೇಡಿ.
ದೇಹದ ಶಕ್ತಿ ಕುಗ್ಗುತ್ತದೆ
1999 ರಲ್ಲಿ ಫಿಸಿಯೋಲಾಜಿಕಲ್ ಬಿಹೇವಿಯರ್ ಎಂಬ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಉಪಹಾರವನ್ನು ತ್ಯಜಿಸುವುದರಿಂದ ದೇಹದ ಶಕ್ತಿ ಮತ್ತು ಮನಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಕ್ಯಾನ್ಸರ್ ಬರಬಹುದು!!
ಬೆಳಗಿನ ಸಮಯದಲ್ಲಿ ಉಪಹಾರ ತ್ಯಜಿಸಿ, ಆ ನಂತರ ಆಹಾರವನ್ನು ಅತಿಯಾಗಿ ಸೇವಿಸಿದರೆ ಸ್ಥೂಲಕಾಯತೆ ಬರಲು ದಾರಿ ಮಾಡಿ ಕೊಟ್ಟಂತಾಗುತ್ತದೆ. ಕ್ಯಾನ್ಸರ್ ರಿಸರ್ಚ್ ಯುಕೆ ನಡೆಸಿದ ಸಂಶೋಧನೆಯ ಪ್ರಕಾರ, ಅಧಿಕ ತೂಕ ಅಥವಾ ಬೊಜ್ಜು ಹೊಂದಿರುವ ವ್ಯಕ್ತಿಗೆ ಕ್ಯಾನ್ಸರ್ ಬರುವ ಅಪಾಯವಿದೆ ಎಂದು ತಿಳಿದುಬಂದಿದೆ.
ವಿಶುಯಲ್ ಸರ್ಚ್ ಟೆಸ್ಟ್
12 ರಿಂದ 15 ವರ್ಷದೊಳಗಿನ ಮಕ್ಕಳ ಮೇಲೆ ಒಂದು ಅಧ್ಯಯನ ನಡೆಸಲಾಯಿತು. ಮೊದಲನೆ ಪ್ರಯೋಗದಲ್ಲಿ ಇವರಿಗೆ ಉಪಹಾರ ನೀಡಲು ಅವಕಾಶ ನೀಡಲಾಯಿತು. ಎರಡನೇ ಪ್ರಯೋಗದಲ್ಲಿ ಉಪಹಾರ ಕೊಡಲಿಲ್ಲ. ಆಗ ಬಂದ ಫಲಿತಾಂಶ ಹೀಗಿತ್ತು. ಉಪಹಾರ ಸೇವಿಸಿದಾಗ ವಿಶುಯಲ್ ಸರ್ಚ್ ಟೆಸ್ಟ್ ರಿಸಲ್ಟ್ ಉತ್ತಮವಾಗಿತ್ತು. ಉಪಹಾರದ ಸೇವಿಸದಿದ್ದಾಗ ರಿಸಲ್ಟ್ ಶೂನ್ಯ. ಹದಿಹರೆಯದವರ ಮೇಲೆ ಈ ಅಧ್ಯಯನವನ್ನು ನಡೆಸಲಾಗಿದ್ದರೂ ಇದು ವಯಸ್ಕರಿಗೂ ಅನ್ವಯವಾಗುತ್ತದೆ.

ಕೂದಲು ಉದುರುತ್ತದೆ
ಬೆಳಗಿನ ಸಮಯ ಉಪಹಾರ ತ್ಯಜಿಸುವುದರಿಂದ ಆಗುವ ಅಡ್ಡಪರಿಣಾಮವೆಂದರೆ ಕೂದಲು ಉದುರುವುದು. ಇದು ಕೂದಲಿನ ಬೆಳವಣಿಗೆಯನ್ನು ತಪ್ಪಿಸಿ, ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ನಿಮಗೆ ಗೊತ್ತಿದೆಯೋ, ಇಲ್ಲವೋ ನೀವು ಬೆಳಗಿನ ಸಮಯ ಉಪಹಾರ ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ನೀವು ನಿಜಕ್ಕೂ ಸೊಂಪಾದ ಕೂದಲನ್ನು ಬಯಸಿದ್ದರೆ ಪ್ರತಿದಿನ ಪ್ರೊಟೀನ್ ಭರಿತ ಉಪಹಾರ ಸೇವಿಸಿ.

ಚಯಾಪಚಯ ಕ್ರಿಯೆ ಉಪಹಾರದಿಂದಲೇ
ಇಂಧನ ಇಲ್ಲದಿದ್ದರೆ ಕಾರು ಹೇಗೆ ಸ್ಟಾರ್ಟ್ ಆಗುವುದಿಲ್ಲವೋ ಅಂತೆಯೇ, ನಮ್ಮ ಚಯಾಪಚಯ ಕ್ರಿಯೆ ಪ್ರಾರಂಭವಾಗಲು ಉಪಹಾರ ಬೇಕು. ರಾತ್ರಿ12 ಗಂಟೆಗಳ ಕಾಲ ವಿಶ್ರಾಂತಿ ಪಡೆದ ನಂತರ ದೇಹವನ್ನು ಪೋಷಿಸುವುದು ಬೆಳಗಿನ ಉಪಾಹಾರ. ವಿವಿಧ ಅಧ್ಯಯನಗಳ ಪ್ರಕಾರ ಉಪಹಾರ ಸೇವಿಸುವ ಜನರ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…
ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್ಮೆಂಟ್ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್ನಲ್ಲಿಯೂ ಬೆವರುತ್ತಾನೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…
ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…