News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

100

ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ.

ಹೃದಯಾಘಾತದ ಸಾಧ್ಯತೆ
ಜಾಮಾ ಅಧ್ಯಯನದ ಪ್ರಕಾರ, ಬೆಳಗಿನ ಉಪಹಾರವನ್ನು ತ್ಯಜಿಸುವ ಪುರುಷರಲ್ಲಿ ಹೃದಯಾಘಾತದ ಸಾಧ್ಯತೆ ಶೇ.27ಕ್ಕಿಂತ ಹೆಚ್ಚಿರುತ್ತದೆ. ಈ ಸಂಶೋಧನೆಯ ನೇತೃತ್ವ ವಹಿಸಿದ್ದ ಡಾ. ಲೇಹ್ ಕಾಹಿಲ್, ನೀವು ಆರೋಗ್ಯಕರವಾದ ಉಪಹಾರ ಸೇವಿಸಿದರೆ ಹೃದಯಾಘಾತದ ಅಪಾಯ ತಡೆಯಬಹುದು. ಬೆಳಗಿನ ಉಪಾಹಾರವನ್ನು ತ್ಯಜಿಸಿದರೆ ಜನರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ.


ತೂಕ ಹೆಚ್ಚಾಗುತ್ತದೆ
ಬೆಳಗಿನ ಸಮಯದಲ್ಲಿ ಉಪಹಾರವನ್ನು ಸೇವಿಸದಿರುವವರ ಕುರಿತು ನಡೆಸಿದ ಅಧ್ಯಯನಗಳ ಪ್ರಕಾರ, ಬೆಳಗ್ಗೆ ತಿಂಡಿ ತಿನ್ನದವರು ಕ್ರಮೇಣ ತೂಕವನ್ನು ಹೆಚ್ಚಿಸಿಕೊಂಡಿದ್ದರು. ಹಸಿವಿನ ಮಟ್ಟ ಹೆಚ್ಚಾದಷ್ಟೂ ಆಹಾರ ಸೇವನೆಯ ಪ್ರಮಾಣ ಹೆಚ್ಚಾಗುತ್ತದೆ. ತಿಂಡಿ ತ್ಯಜಿಸುವ ನಿರಂತರ ಅಭ್ಯಾಸವು ಅಂತಿಮವಾಗಿ ತೂಕ ಹೆಚ್ಚಾಗಲು ಕಾರಣವಾಗುತ್ತದೆ ಹೊರತು ತೂಕ ನಷ್ಟಕ್ಕೆ ಕಾರಣವಾಗುವುದಿಲ್ಲ ಎನ್ನುವುದನ್ನು ಮರೆಯಬೇಡಿ.

ದೇಹದ ಶಕ್ತಿ ಕುಗ್ಗುತ್ತದೆ
1999 ರಲ್ಲಿ ಫಿಸಿಯೋಲಾಜಿಕಲ್ ಬಿಹೇವಿಯರ್ ಎಂಬ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಉಪಹಾರವನ್ನು ತ್ಯಜಿಸುವುದರಿಂದ ದೇಹದ ಶಕ್ತಿ ಮತ್ತು ಮನಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಕ್ಯಾನ್ಸರ್ ಬರಬಹುದು!!
ಬೆಳಗಿನ ಸಮಯದಲ್ಲಿ ಉಪಹಾರ ತ್ಯಜಿಸಿ, ಆ ನಂತರ ಆಹಾರವನ್ನು ಅತಿಯಾಗಿ ಸೇವಿಸಿದರೆ ಸ್ಥೂಲಕಾಯತೆ ಬರಲು ದಾರಿ ಮಾಡಿ ಕೊಟ್ಟಂತಾಗುತ್ತದೆ. ಕ್ಯಾನ್ಸರ್ ರಿಸರ್ಚ್ ಯುಕೆ ನಡೆಸಿದ ಸಂಶೋಧನೆಯ ಪ್ರಕಾರ, ಅಧಿಕ ತೂಕ ಅಥವಾ ಬೊಜ್ಜು ಹೊಂದಿರುವ ವ್ಯಕ್ತಿಗೆ ಕ್ಯಾನ್ಸರ್ ಬರುವ ಅಪಾಯವಿದೆ ಎಂದು ತಿಳಿದುಬಂದಿದೆ.

ವಿಶುಯಲ್ ಸರ್ಚ್ ಟೆಸ್ಟ್
12 ರಿಂದ 15 ವರ್ಷದೊಳಗಿನ ಮಕ್ಕಳ ಮೇಲೆ ಒಂದು ಅಧ್ಯಯನ ನಡೆಸಲಾಯಿತು. ಮೊದಲನೆ ಪ್ರಯೋಗದಲ್ಲಿ ಇವರಿಗೆ ಉಪಹಾರ ನೀಡಲು ಅವಕಾಶ ನೀಡಲಾಯಿತು. ಎರಡನೇ ಪ್ರಯೋಗದಲ್ಲಿ ಉಪಹಾರ ಕೊಡಲಿಲ್ಲ. ಆಗ ಬಂದ ಫಲಿತಾಂಶ ಹೀಗಿತ್ತು. ಉಪಹಾರ ಸೇವಿಸಿದಾಗ ವಿಶುಯಲ್ ಸರ್ಚ್ ಟೆಸ್ಟ್ ರಿಸಲ್ಟ್ ಉತ್ತಮವಾಗಿತ್ತು. ಉಪಹಾರದ ಸೇವಿಸದಿದ್ದಾಗ ರಿಸಲ್ಟ್ ಶೂನ್ಯ. ಹದಿಹರೆಯದವರ ಮೇಲೆ ಈ ಅಧ್ಯಯನವನ್ನು ನಡೆಸಲಾಗಿದ್ದರೂ ಇದು ವಯಸ್ಕರಿಗೂ ಅನ್ವಯವಾಗುತ್ತದೆ.

ಕೂದಲು ಉದುರುತ್ತದೆ
ಬೆಳಗಿನ ಸಮಯ ಉಪಹಾರ ತ್ಯಜಿಸುವುದರಿಂದ ಆಗುವ ಅಡ್ಡಪರಿಣಾಮವೆಂದರೆ ಕೂದಲು ಉದುರುವುದು. ಇದು ಕೂದಲಿನ ಬೆಳವಣಿಗೆಯನ್ನು ತಪ್ಪಿಸಿ, ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ನಿಮಗೆ ಗೊತ್ತಿದೆಯೋ, ಇಲ್ಲವೋ ನೀವು ಬೆಳಗಿನ ಸಮಯ ಉಪಹಾರ ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ನೀವು ನಿಜಕ್ಕೂ ಸೊಂಪಾದ ಕೂದಲನ್ನು ಬಯಸಿದ್ದರೆ ಪ್ರತಿದಿನ ಪ್ರೊಟೀನ್ ಭರಿತ ಉಪಹಾರ ಸೇವಿಸಿ.

ಚಯಾಪಚಯ ಕ್ರಿಯೆ ಉಪಹಾರದಿಂದಲೇ
ಇಂಧನ ಇಲ್ಲದಿದ್ದರೆ ಕಾರು ಹೇಗೆ ಸ್ಟಾರ್ಟ್ ಆಗುವುದಿಲ್ಲವೋ ಅಂತೆಯೇ, ನಮ್ಮ ಚಯಾಪಚಯ ಕ್ರಿಯೆ ಪ್ರಾರಂಭವಾಗಲು ಉಪಹಾರ ಬೇಕು. ರಾತ್ರಿ12 ಗಂಟೆಗಳ ಕಾಲ ವಿಶ್ರಾಂತಿ ಪಡೆದ ನಂತರ ದೇಹವನ್ನು ಪೋಷಿಸುವುದು ಬೆಳಗಿನ ಉಪಾಹಾರ. ವಿವಿಧ ಅಧ್ಯಯನಗಳ ಪ್ರಕಾರ ಉಪಹಾರ ಸೇವಿಸುವ ಜನರ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಸ್ಪೂರ್ತಿ

    ಬಸ್ ನಲ್ಲಿ ಸಿಕ್ಕ ಒಂದು ಲಕ್ಷವನ್ನು ಕಂಡಕ್ಟರ್ ಮಾಡಿದ್ದೇನು ಗೊತ್ತಾ..?

    ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…

  • ಉಪಯುಕ್ತ ಮಾಹಿತಿ

    ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

    ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…

  • ಜ್ಯೋತಿಷ್ಯ

    ತಾಯಿ ದುರ್ಗಾ ಪರಮೇಶ್ವರಿಯನ್ನು ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಫಲವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಸಿನಿಮಾ

    ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

    ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…