ಸುದ್ದಿ

ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

1143

ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ ಇತ್ತು. ಫೈಟ್ ಅನ್ನು ಇಷ್ಟ ಪಡುವ ಪ್ರಭಾಕರ್ ಅದ್ಭುತವಾಗಿ ಫೈಟ್ ಮಾಡೋದು ಇನ್ನೊಂದು ವಿಶೇಷ. ತನಗೂ ಸೇರಿದಂತೆ ಹಲವಾರು ಸ್ಟಾರ್ ಗಳಿಗೂ ಫೈಟ್ ಅನ್ನು ಕಂಪೋಸ್ ಮಾಡುತ್ತಿದ್ದರು. ತನ್ನ 14ನೇ ವಯಸ್ಸಿನಲ್ಲಿಯೇ ಬಾಕ್ಸರ್ ಅನ್ನು ಎರಡು ಬಾರಿ ನೆಲಕ್ಕೆ ಕೆಡುವಿಹಿದ ಬಲಿಷ್ಠ ದೇಹಿ ಅವರಾಗಿದ್ದರು.

ಸುಮಾರು ನಾಲ್ಕು ದಶಕಗಳ ಹಿಂದೆ ಪ್ರಭಾಕರ್ ಕನ್ನಡ ಸಿನಿಮಾ ರಂಗದಲ್ಲಿ ಸ್ಟಂಟ್ ಮ್ಯಾನ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಹೀಗೆ ಸ್ಟಂಟ್ ಮಾಸ್ಟರ್ ಆಗಿ ಖ್ಯಾತರಾಗಿದ್ದರು. ತನ್ನ ಫೈಟ್ಸ್ ನೋಡಲಿಕ್ಕಾಗಿಯೇ ಪ್ರೇಕ್ಷಕರು ತನ್ನ ಸಿನಿಮಾ ನೋಡಲು ಬರುತ್ತಾರೆ ಎಂಬ ಹೆಮ್ಮೆ ಪ್ರಭಾಕರ್ ಅವರಿಗೆ ಇತ್ತಂತೆ. ಅವೆಲ್ಲಕ್ಕಿಂತ ಹೆಚ್ಚಾಗಿ ಪ್ರಭಾಕರ್ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಎಲ್ಲಾ ಫೈಟ್ ದೃಶ್ಯಗಳನ್ನು ತಾನೇ ಖುದ್ದಾಗಿ ಮಾಡುತ್ತಿದ್ದರು. ಇದರಿಂದಾಗಿಯೇ ತಾನು ಇಂದು ಸೋತು ಹೋದ ವ್ಯಕ್ತಿಯಾಗಿದ್ದೇನೆ. ನನ್ನೆಲ್ಲಾ ಮುರಿದ ಮೂಳೆಗಳು ಸರ್ಜರಿಯಲ್ಲಿ ನಿಂತಿವೆ ಎಂದು ಸಂದರ್ಶನವೊಂದರಲ್ಲಿ ಪ್ರಭಾಕರ್ ಹೇಳಿದ್ದರು.

ಟೈಗರ್ ಪ್ರಭಾಕರ್ ಖಳನಟ, ನಿರ್ದೇಶಕ, ನಿರ್ಮಾಪಕ, ಹೀರೋ ಎಲ್ಲಕ್ಕಿಂತ ಹೆಚ್ಚಾಗಿ ಅವರೊಬ್ಬ ಹೃದಯವಂತ ವ್ಯಕ್ತಿ. ಕನ್ನಡ, ತೆಲುಗು, ತಮಿಳು ಸೇರಿ 450 ಸಿನಿಮಾಗಳಲ್ಲಿ ನಟಿಸಿದ್ದ ಅವರು ಬಹುತೇಕರಿಂದ ಮೋಸಕ್ಕೊಳಗಾಗಿದ್ದ ವ್ಯಕ್ತಿ ಟೈಗರ್. ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಅನೇಕ ಕಲಾವಿದರಿಗೆ, ಅನಾಥಾಶ್ರಮಗಳಿಗೆ, ಸಂಘ, ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದರು. ಬೈಕ್ ಅಪಘಾತದ ಬಳಿಕ ಪ್ರಭಾಕರ್ ಆರೋಗ್ಯ ಹದಗೆಡ ತೊಡಗಿತ್ತು..ನಿಧಾನಕ್ಕೆ ಸ್ಟಾರ್ ವ್ಯಾಲ್ಯೂ ಕೂಡಾ ಕಡಿಮೆಯಾಗತೊಡಗಿತ್ತು.

ಅಧಿಕೃತವಾಗಿ ಮೂರು ಮದುವೆಯಾಗಿದ್ದ ಟೈಗರ್ ಗೆ ಇಬ್ಬರು ಪುತ್ರಿಯರು ಭಾರತಿ ಮತ್ತು ಗೀತಾ ಹಾಗೂ ಪುತ್ರ ವಿನೋದ್(ಮೊದಲ ಹೆಂಡತಿ ಮಕ್ಕಳು), 2ನೇ ವಿವಾಹವಾಗಿದ್ದು ನಟಿ ಜಯಮಾಲಾ ಜೊತೆ. ಇವರಿಗೆ ಸೌಂದರ್ಯ ಎಂಬ ಮಗಳು ಹುಟ್ಟಿದ್ದಳು. ಮೂರನೆಯ ಮದುವೆ ಅಂಜು ಜೊತೆ..ಈಕೆಗೆ ಅರ್ಜುನ್ ಎಂಬ ಮಗ ಜನಿಸಿದ್ದ. 2 ಮದುವೆಗಳು ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ತಾನೇನಿದ್ದರೂ ನೇರವಾಗಿ ಮಾತನಾಡುವ ಮನುಷ್ಯ ಎಂದೇ ಹೇಳಿಕೊಳ್ಳುತ್ತಿದ್ದ ಪ್ರಭಾಕರ್ ಅದೇ ರೀತಿ ಬದುಕಿದ್ದರು. ತನ್ನ ವೈಯಕ್ತಿಕ ಸೇರಿದಂತೆ ಎಲ್ಲಾ ವಿಚಾರವನ್ನು ಮುಚ್ಚಿಡದೇ ಹೇಳುತ್ತಿದ್ದ ನಟ ಅವರಾಗಿದ್ದರು. ವಿಪರ್ಯಾಸ ಎಂಬಂತೆ ಟೈಗರ್ ಕೊನೆಗಾಲದಲ್ಲಿ ಅವರ ಜೊತೆ ಮಗ ವಿನೋದ್ ಬಿಟ್ಟರೆ ಬೇರೆ ಯಾರೂ ಇರಲಿಲ್ಲವಾಗಿತ್ತು. ತನಗೆ ಎಲ್ಲಾ ಮೋಸ ಮಾಡಿಬಿಟ್ಟರು ಎಂಬುದಾಗಿ ಕೊನೆಯ ದಿನಗಳಲ್ಲಿ ಮಗನ ಜೊತೆ ಟೈಗರ್ ಹೇಳಿಕೊಂಡಿದ್ದರಂತೆ. ಕೊನೆಗೆ 1948ರಲ್ಲಿ ಜನಿಸಿದ್ದ ಟೈಗರ್ ಬಹುಅಂಗಾಂಗ ವೈಫಲ್ಯದಿಂದ ತನ್ನ 52ನೇ ವಯಸ್ಸಿನಲ್ಲಿ (2001ರ ಮಾರ್ಚ್ 25ರಂದು ) ವಿಧಿವಶರಾಗಿದ್ದರು. ಸುಮಾರು ನಾಲ್ಕು ವರ್ಷಗಳ ಬಳಿಕ ಟೈಗರ್ ನಿರ್ದೇಶಿಸಿದ್ದ ಗುಡ್ ಬ್ಯಾಡ್ ಅಂಡ್ ಅಗ್ಲಿ ಸಿನಿಮಾ ತೆರೆಕಂಡಿತ್ತು..ಅದು ಪ್ರಭಾಕರ್ ಅವರ ಬದುಕು ಮತ್ತು ಅಂತ್ಯಕ್ಕೆ ಮುನ್ನುಡಿ ಬರೆದಂತೆ ಇತ್ತು..ಇವೆಲ್ಲದರ ನಡುವೆ ಟೈಗರ್ ಇನ್ನೂ ಚಿತ್ರರಸಿಕರ ಮನದಲ್ಲಿ ಉಳಿದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಸ್ಮರಿಸುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ದೇವರು-ಧರ್ಮ

    ಈ ದೇವಸ್ಥಾನದಲ್ಲಿ ದೇವರಿಗೆ ಕೊಡೋ ಕಾಣಿಕೆ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..?ಏನದು..?ಮುಂದೆ ಓದಿ…

    ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…

  • ಸುದ್ದಿ

    ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

    ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…