ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ ಇತ್ತು. ಫೈಟ್ ಅನ್ನು ಇಷ್ಟ ಪಡುವ ಪ್ರಭಾಕರ್ ಅದ್ಭುತವಾಗಿ ಫೈಟ್ ಮಾಡೋದು ಇನ್ನೊಂದು ವಿಶೇಷ. ತನಗೂ ಸೇರಿದಂತೆ ಹಲವಾರು ಸ್ಟಾರ್ ಗಳಿಗೂ ಫೈಟ್ ಅನ್ನು ಕಂಪೋಸ್ ಮಾಡುತ್ತಿದ್ದರು. ತನ್ನ 14ನೇ ವಯಸ್ಸಿನಲ್ಲಿಯೇ ಬಾಕ್ಸರ್ ಅನ್ನು ಎರಡು ಬಾರಿ ನೆಲಕ್ಕೆ ಕೆಡುವಿಹಿದ ಬಲಿಷ್ಠ ದೇಹಿ ಅವರಾಗಿದ್ದರು.

ಸುಮಾರು ನಾಲ್ಕು ದಶಕಗಳ ಹಿಂದೆ ಪ್ರಭಾಕರ್ ಕನ್ನಡ ಸಿನಿಮಾ ರಂಗದಲ್ಲಿ ಸ್ಟಂಟ್ ಮ್ಯಾನ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಹೀಗೆ ಸ್ಟಂಟ್ ಮಾಸ್ಟರ್ ಆಗಿ ಖ್ಯಾತರಾಗಿದ್ದರು. ತನ್ನ ಫೈಟ್ಸ್ ನೋಡಲಿಕ್ಕಾಗಿಯೇ ಪ್ರೇಕ್ಷಕರು ತನ್ನ ಸಿನಿಮಾ ನೋಡಲು ಬರುತ್ತಾರೆ ಎಂಬ ಹೆಮ್ಮೆ ಪ್ರಭಾಕರ್ ಅವರಿಗೆ ಇತ್ತಂತೆ. ಅವೆಲ್ಲಕ್ಕಿಂತ ಹೆಚ್ಚಾಗಿ ಪ್ರಭಾಕರ್ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಎಲ್ಲಾ ಫೈಟ್ ದೃಶ್ಯಗಳನ್ನು ತಾನೇ ಖುದ್ದಾಗಿ ಮಾಡುತ್ತಿದ್ದರು. ಇದರಿಂದಾಗಿಯೇ ತಾನು ಇಂದು ಸೋತು ಹೋದ ವ್ಯಕ್ತಿಯಾಗಿದ್ದೇನೆ. ನನ್ನೆಲ್ಲಾ ಮುರಿದ ಮೂಳೆಗಳು ಸರ್ಜರಿಯಲ್ಲಿ ನಿಂತಿವೆ ಎಂದು ಸಂದರ್ಶನವೊಂದರಲ್ಲಿ ಪ್ರಭಾಕರ್ ಹೇಳಿದ್ದರು.
ಟೈಗರ್ ಪ್ರಭಾಕರ್ ಖಳನಟ, ನಿರ್ದೇಶಕ, ನಿರ್ಮಾಪಕ, ಹೀರೋ ಎಲ್ಲಕ್ಕಿಂತ ಹೆಚ್ಚಾಗಿ ಅವರೊಬ್ಬ ಹೃದಯವಂತ ವ್ಯಕ್ತಿ. ಕನ್ನಡ, ತೆಲುಗು, ತಮಿಳು ಸೇರಿ 450 ಸಿನಿಮಾಗಳಲ್ಲಿ ನಟಿಸಿದ್ದ ಅವರು ಬಹುತೇಕರಿಂದ ಮೋಸಕ್ಕೊಳಗಾಗಿದ್ದ ವ್ಯಕ್ತಿ ಟೈಗರ್. ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಅನೇಕ ಕಲಾವಿದರಿಗೆ, ಅನಾಥಾಶ್ರಮಗಳಿಗೆ, ಸಂಘ, ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದರು. ಬೈಕ್ ಅಪಘಾತದ ಬಳಿಕ ಪ್ರಭಾಕರ್ ಆರೋಗ್ಯ ಹದಗೆಡ ತೊಡಗಿತ್ತು..ನಿಧಾನಕ್ಕೆ ಸ್ಟಾರ್ ವ್ಯಾಲ್ಯೂ ಕೂಡಾ ಕಡಿಮೆಯಾಗತೊಡಗಿತ್ತು.

ಅಧಿಕೃತವಾಗಿ ಮೂರು ಮದುವೆಯಾಗಿದ್ದ ಟೈಗರ್ ಗೆ ಇಬ್ಬರು ಪುತ್ರಿಯರು ಭಾರತಿ ಮತ್ತು ಗೀತಾ ಹಾಗೂ ಪುತ್ರ ವಿನೋದ್(ಮೊದಲ ಹೆಂಡತಿ ಮಕ್ಕಳು), 2ನೇ ವಿವಾಹವಾಗಿದ್ದು ನಟಿ ಜಯಮಾಲಾ ಜೊತೆ. ಇವರಿಗೆ ಸೌಂದರ್ಯ ಎಂಬ ಮಗಳು ಹುಟ್ಟಿದ್ದಳು. ಮೂರನೆಯ ಮದುವೆ ಅಂಜು ಜೊತೆ..ಈಕೆಗೆ ಅರ್ಜುನ್ ಎಂಬ ಮಗ ಜನಿಸಿದ್ದ. 2 ಮದುವೆಗಳು ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ತಾನೇನಿದ್ದರೂ ನೇರವಾಗಿ ಮಾತನಾಡುವ ಮನುಷ್ಯ ಎಂದೇ ಹೇಳಿಕೊಳ್ಳುತ್ತಿದ್ದ ಪ್ರಭಾಕರ್ ಅದೇ ರೀತಿ ಬದುಕಿದ್ದರು. ತನ್ನ ವೈಯಕ್ತಿಕ ಸೇರಿದಂತೆ ಎಲ್ಲಾ ವಿಚಾರವನ್ನು ಮುಚ್ಚಿಡದೇ ಹೇಳುತ್ತಿದ್ದ ನಟ ಅವರಾಗಿದ್ದರು. ವಿಪರ್ಯಾಸ ಎಂಬಂತೆ ಟೈಗರ್ ಕೊನೆಗಾಲದಲ್ಲಿ ಅವರ ಜೊತೆ ಮಗ ವಿನೋದ್ ಬಿಟ್ಟರೆ ಬೇರೆ ಯಾರೂ ಇರಲಿಲ್ಲವಾಗಿತ್ತು. ತನಗೆ ಎಲ್ಲಾ ಮೋಸ ಮಾಡಿಬಿಟ್ಟರು ಎಂಬುದಾಗಿ ಕೊನೆಯ ದಿನಗಳಲ್ಲಿ ಮಗನ ಜೊತೆ ಟೈಗರ್ ಹೇಳಿಕೊಂಡಿದ್ದರಂತೆ. ಕೊನೆಗೆ 1948ರಲ್ಲಿ ಜನಿಸಿದ್ದ ಟೈಗರ್ ಬಹುಅಂಗಾಂಗ ವೈಫಲ್ಯದಿಂದ ತನ್ನ 52ನೇ ವಯಸ್ಸಿನಲ್ಲಿ (2001ರ ಮಾರ್ಚ್ 25ರಂದು ) ವಿಧಿವಶರಾಗಿದ್ದರು. ಸುಮಾರು ನಾಲ್ಕು ವರ್ಷಗಳ ಬಳಿಕ ಟೈಗರ್ ನಿರ್ದೇಶಿಸಿದ್ದ ಗುಡ್ ಬ್ಯಾಡ್ ಅಂಡ್ ಅಗ್ಲಿ ಸಿನಿಮಾ ತೆರೆಕಂಡಿತ್ತು..ಅದು ಪ್ರಭಾಕರ್ ಅವರ ಬದುಕು ಮತ್ತು ಅಂತ್ಯಕ್ಕೆ ಮುನ್ನುಡಿ ಬರೆದಂತೆ ಇತ್ತು..ಇವೆಲ್ಲದರ ನಡುವೆ ಟೈಗರ್ ಇನ್ನೂ ಚಿತ್ರರಸಿಕರ ಮನದಲ್ಲಿ ಉಳಿದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…