ಸುದ್ದಿ

ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

1077

ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ ಇತ್ತು. ಫೈಟ್ ಅನ್ನು ಇಷ್ಟ ಪಡುವ ಪ್ರಭಾಕರ್ ಅದ್ಭುತವಾಗಿ ಫೈಟ್ ಮಾಡೋದು ಇನ್ನೊಂದು ವಿಶೇಷ. ತನಗೂ ಸೇರಿದಂತೆ ಹಲವಾರು ಸ್ಟಾರ್ ಗಳಿಗೂ ಫೈಟ್ ಅನ್ನು ಕಂಪೋಸ್ ಮಾಡುತ್ತಿದ್ದರು. ತನ್ನ 14ನೇ ವಯಸ್ಸಿನಲ್ಲಿಯೇ ಬಾಕ್ಸರ್ ಅನ್ನು ಎರಡು ಬಾರಿ ನೆಲಕ್ಕೆ ಕೆಡುವಿಹಿದ ಬಲಿಷ್ಠ ದೇಹಿ ಅವರಾಗಿದ್ದರು.

ಸುಮಾರು ನಾಲ್ಕು ದಶಕಗಳ ಹಿಂದೆ ಪ್ರಭಾಕರ್ ಕನ್ನಡ ಸಿನಿಮಾ ರಂಗದಲ್ಲಿ ಸ್ಟಂಟ್ ಮ್ಯಾನ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಹೀಗೆ ಸ್ಟಂಟ್ ಮಾಸ್ಟರ್ ಆಗಿ ಖ್ಯಾತರಾಗಿದ್ದರು. ತನ್ನ ಫೈಟ್ಸ್ ನೋಡಲಿಕ್ಕಾಗಿಯೇ ಪ್ರೇಕ್ಷಕರು ತನ್ನ ಸಿನಿಮಾ ನೋಡಲು ಬರುತ್ತಾರೆ ಎಂಬ ಹೆಮ್ಮೆ ಪ್ರಭಾಕರ್ ಅವರಿಗೆ ಇತ್ತಂತೆ. ಅವೆಲ್ಲಕ್ಕಿಂತ ಹೆಚ್ಚಾಗಿ ಪ್ರಭಾಕರ್ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಎಲ್ಲಾ ಫೈಟ್ ದೃಶ್ಯಗಳನ್ನು ತಾನೇ ಖುದ್ದಾಗಿ ಮಾಡುತ್ತಿದ್ದರು. ಇದರಿಂದಾಗಿಯೇ ತಾನು ಇಂದು ಸೋತು ಹೋದ ವ್ಯಕ್ತಿಯಾಗಿದ್ದೇನೆ. ನನ್ನೆಲ್ಲಾ ಮುರಿದ ಮೂಳೆಗಳು ಸರ್ಜರಿಯಲ್ಲಿ ನಿಂತಿವೆ ಎಂದು ಸಂದರ್ಶನವೊಂದರಲ್ಲಿ ಪ್ರಭಾಕರ್ ಹೇಳಿದ್ದರು.

ಟೈಗರ್ ಪ್ರಭಾಕರ್ ಖಳನಟ, ನಿರ್ದೇಶಕ, ನಿರ್ಮಾಪಕ, ಹೀರೋ ಎಲ್ಲಕ್ಕಿಂತ ಹೆಚ್ಚಾಗಿ ಅವರೊಬ್ಬ ಹೃದಯವಂತ ವ್ಯಕ್ತಿ. ಕನ್ನಡ, ತೆಲುಗು, ತಮಿಳು ಸೇರಿ 450 ಸಿನಿಮಾಗಳಲ್ಲಿ ನಟಿಸಿದ್ದ ಅವರು ಬಹುತೇಕರಿಂದ ಮೋಸಕ್ಕೊಳಗಾಗಿದ್ದ ವ್ಯಕ್ತಿ ಟೈಗರ್. ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಅನೇಕ ಕಲಾವಿದರಿಗೆ, ಅನಾಥಾಶ್ರಮಗಳಿಗೆ, ಸಂಘ, ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದರು. ಬೈಕ್ ಅಪಘಾತದ ಬಳಿಕ ಪ್ರಭಾಕರ್ ಆರೋಗ್ಯ ಹದಗೆಡ ತೊಡಗಿತ್ತು..ನಿಧಾನಕ್ಕೆ ಸ್ಟಾರ್ ವ್ಯಾಲ್ಯೂ ಕೂಡಾ ಕಡಿಮೆಯಾಗತೊಡಗಿತ್ತು.

ಅಧಿಕೃತವಾಗಿ ಮೂರು ಮದುವೆಯಾಗಿದ್ದ ಟೈಗರ್ ಗೆ ಇಬ್ಬರು ಪುತ್ರಿಯರು ಭಾರತಿ ಮತ್ತು ಗೀತಾ ಹಾಗೂ ಪುತ್ರ ವಿನೋದ್(ಮೊದಲ ಹೆಂಡತಿ ಮಕ್ಕಳು), 2ನೇ ವಿವಾಹವಾಗಿದ್ದು ನಟಿ ಜಯಮಾಲಾ ಜೊತೆ. ಇವರಿಗೆ ಸೌಂದರ್ಯ ಎಂಬ ಮಗಳು ಹುಟ್ಟಿದ್ದಳು. ಮೂರನೆಯ ಮದುವೆ ಅಂಜು ಜೊತೆ..ಈಕೆಗೆ ಅರ್ಜುನ್ ಎಂಬ ಮಗ ಜನಿಸಿದ್ದ. 2 ಮದುವೆಗಳು ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ತಾನೇನಿದ್ದರೂ ನೇರವಾಗಿ ಮಾತನಾಡುವ ಮನುಷ್ಯ ಎಂದೇ ಹೇಳಿಕೊಳ್ಳುತ್ತಿದ್ದ ಪ್ರಭಾಕರ್ ಅದೇ ರೀತಿ ಬದುಕಿದ್ದರು. ತನ್ನ ವೈಯಕ್ತಿಕ ಸೇರಿದಂತೆ ಎಲ್ಲಾ ವಿಚಾರವನ್ನು ಮುಚ್ಚಿಡದೇ ಹೇಳುತ್ತಿದ್ದ ನಟ ಅವರಾಗಿದ್ದರು. ವಿಪರ್ಯಾಸ ಎಂಬಂತೆ ಟೈಗರ್ ಕೊನೆಗಾಲದಲ್ಲಿ ಅವರ ಜೊತೆ ಮಗ ವಿನೋದ್ ಬಿಟ್ಟರೆ ಬೇರೆ ಯಾರೂ ಇರಲಿಲ್ಲವಾಗಿತ್ತು. ತನಗೆ ಎಲ್ಲಾ ಮೋಸ ಮಾಡಿಬಿಟ್ಟರು ಎಂಬುದಾಗಿ ಕೊನೆಯ ದಿನಗಳಲ್ಲಿ ಮಗನ ಜೊತೆ ಟೈಗರ್ ಹೇಳಿಕೊಂಡಿದ್ದರಂತೆ. ಕೊನೆಗೆ 1948ರಲ್ಲಿ ಜನಿಸಿದ್ದ ಟೈಗರ್ ಬಹುಅಂಗಾಂಗ ವೈಫಲ್ಯದಿಂದ ತನ್ನ 52ನೇ ವಯಸ್ಸಿನಲ್ಲಿ (2001ರ ಮಾರ್ಚ್ 25ರಂದು ) ವಿಧಿವಶರಾಗಿದ್ದರು. ಸುಮಾರು ನಾಲ್ಕು ವರ್ಷಗಳ ಬಳಿಕ ಟೈಗರ್ ನಿರ್ದೇಶಿಸಿದ್ದ ಗುಡ್ ಬ್ಯಾಡ್ ಅಂಡ್ ಅಗ್ಲಿ ಸಿನಿಮಾ ತೆರೆಕಂಡಿತ್ತು..ಅದು ಪ್ರಭಾಕರ್ ಅವರ ಬದುಕು ಮತ್ತು ಅಂತ್ಯಕ್ಕೆ ಮುನ್ನುಡಿ ಬರೆದಂತೆ ಇತ್ತು..ಇವೆಲ್ಲದರ ನಡುವೆ ಟೈಗರ್ ಇನ್ನೂ ಚಿತ್ರರಸಿಕರ ಮನದಲ್ಲಿ ಉಳಿದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

    ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • ಸುದ್ದಿ

    ‘ಸೋಷಿಯಲ್ ಮೀಡಿಯಾ’ ಬಳಸುವ ಮುನ್ನಾ ಬಾರಿ ಎಚ್ಚರದಿಂದಿರಿ..!ಯಾಕೆ ಗೊತ್ತಾ?

    ಸೋಷಿಯಲ್‌ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್‌ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್‌ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…

  • ಉಪಯುಕ್ತ ಮಾಹಿತಿ, ತಂತ್ರಜ್ಞಾನ

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ ಪಹಣಿ (ಆರ್.ಟಿ.ಸಿ.) ಪತ್ರದ ಮಾಹಿತಿಯನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಸುದ್ದಿ

    ಅಮ್ಮನಿಗೆ ವರ ಬೇಕಿದೆ, ಷರತ್ತುಗಳು ಅನ್ವಯ. ಫೇಸ್ಬುಕ್ ನಲ್ಲಿ ಮಗನ ಪೋಸ್ಟ್ ವೈರಲ್.

    ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ  ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್‍ಬುಕ್…