ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ ಇತ್ತು. ಫೈಟ್ ಅನ್ನು ಇಷ್ಟ ಪಡುವ ಪ್ರಭಾಕರ್ ಅದ್ಭುತವಾಗಿ ಫೈಟ್ ಮಾಡೋದು ಇನ್ನೊಂದು ವಿಶೇಷ. ತನಗೂ ಸೇರಿದಂತೆ ಹಲವಾರು ಸ್ಟಾರ್ ಗಳಿಗೂ ಫೈಟ್ ಅನ್ನು ಕಂಪೋಸ್ ಮಾಡುತ್ತಿದ್ದರು. ತನ್ನ 14ನೇ ವಯಸ್ಸಿನಲ್ಲಿಯೇ ಬಾಕ್ಸರ್ ಅನ್ನು ಎರಡು ಬಾರಿ ನೆಲಕ್ಕೆ ಕೆಡುವಿಹಿದ ಬಲಿಷ್ಠ ದೇಹಿ ಅವರಾಗಿದ್ದರು.

ಸುಮಾರು ನಾಲ್ಕು ದಶಕಗಳ ಹಿಂದೆ ಪ್ರಭಾಕರ್ ಕನ್ನಡ ಸಿನಿಮಾ ರಂಗದಲ್ಲಿ ಸ್ಟಂಟ್ ಮ್ಯಾನ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಹೀಗೆ ಸ್ಟಂಟ್ ಮಾಸ್ಟರ್ ಆಗಿ ಖ್ಯಾತರಾಗಿದ್ದರು. ತನ್ನ ಫೈಟ್ಸ್ ನೋಡಲಿಕ್ಕಾಗಿಯೇ ಪ್ರೇಕ್ಷಕರು ತನ್ನ ಸಿನಿಮಾ ನೋಡಲು ಬರುತ್ತಾರೆ ಎಂಬ ಹೆಮ್ಮೆ ಪ್ರಭಾಕರ್ ಅವರಿಗೆ ಇತ್ತಂತೆ. ಅವೆಲ್ಲಕ್ಕಿಂತ ಹೆಚ್ಚಾಗಿ ಪ್ರಭಾಕರ್ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಎಲ್ಲಾ ಫೈಟ್ ದೃಶ್ಯಗಳನ್ನು ತಾನೇ ಖುದ್ದಾಗಿ ಮಾಡುತ್ತಿದ್ದರು. ಇದರಿಂದಾಗಿಯೇ ತಾನು ಇಂದು ಸೋತು ಹೋದ ವ್ಯಕ್ತಿಯಾಗಿದ್ದೇನೆ. ನನ್ನೆಲ್ಲಾ ಮುರಿದ ಮೂಳೆಗಳು ಸರ್ಜರಿಯಲ್ಲಿ ನಿಂತಿವೆ ಎಂದು ಸಂದರ್ಶನವೊಂದರಲ್ಲಿ ಪ್ರಭಾಕರ್ ಹೇಳಿದ್ದರು.
ಟೈಗರ್ ಪ್ರಭಾಕರ್ ಖಳನಟ, ನಿರ್ದೇಶಕ, ನಿರ್ಮಾಪಕ, ಹೀರೋ ಎಲ್ಲಕ್ಕಿಂತ ಹೆಚ್ಚಾಗಿ ಅವರೊಬ್ಬ ಹೃದಯವಂತ ವ್ಯಕ್ತಿ. ಕನ್ನಡ, ತೆಲುಗು, ತಮಿಳು ಸೇರಿ 450 ಸಿನಿಮಾಗಳಲ್ಲಿ ನಟಿಸಿದ್ದ ಅವರು ಬಹುತೇಕರಿಂದ ಮೋಸಕ್ಕೊಳಗಾಗಿದ್ದ ವ್ಯಕ್ತಿ ಟೈಗರ್. ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಅನೇಕ ಕಲಾವಿದರಿಗೆ, ಅನಾಥಾಶ್ರಮಗಳಿಗೆ, ಸಂಘ, ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದರು. ಬೈಕ್ ಅಪಘಾತದ ಬಳಿಕ ಪ್ರಭಾಕರ್ ಆರೋಗ್ಯ ಹದಗೆಡ ತೊಡಗಿತ್ತು..ನಿಧಾನಕ್ಕೆ ಸ್ಟಾರ್ ವ್ಯಾಲ್ಯೂ ಕೂಡಾ ಕಡಿಮೆಯಾಗತೊಡಗಿತ್ತು.

ಅಧಿಕೃತವಾಗಿ ಮೂರು ಮದುವೆಯಾಗಿದ್ದ ಟೈಗರ್ ಗೆ ಇಬ್ಬರು ಪುತ್ರಿಯರು ಭಾರತಿ ಮತ್ತು ಗೀತಾ ಹಾಗೂ ಪುತ್ರ ವಿನೋದ್(ಮೊದಲ ಹೆಂಡತಿ ಮಕ್ಕಳು), 2ನೇ ವಿವಾಹವಾಗಿದ್ದು ನಟಿ ಜಯಮಾಲಾ ಜೊತೆ. ಇವರಿಗೆ ಸೌಂದರ್ಯ ಎಂಬ ಮಗಳು ಹುಟ್ಟಿದ್ದಳು. ಮೂರನೆಯ ಮದುವೆ ಅಂಜು ಜೊತೆ..ಈಕೆಗೆ ಅರ್ಜುನ್ ಎಂಬ ಮಗ ಜನಿಸಿದ್ದ. 2 ಮದುವೆಗಳು ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ತಾನೇನಿದ್ದರೂ ನೇರವಾಗಿ ಮಾತನಾಡುವ ಮನುಷ್ಯ ಎಂದೇ ಹೇಳಿಕೊಳ್ಳುತ್ತಿದ್ದ ಪ್ರಭಾಕರ್ ಅದೇ ರೀತಿ ಬದುಕಿದ್ದರು. ತನ್ನ ವೈಯಕ್ತಿಕ ಸೇರಿದಂತೆ ಎಲ್ಲಾ ವಿಚಾರವನ್ನು ಮುಚ್ಚಿಡದೇ ಹೇಳುತ್ತಿದ್ದ ನಟ ಅವರಾಗಿದ್ದರು. ವಿಪರ್ಯಾಸ ಎಂಬಂತೆ ಟೈಗರ್ ಕೊನೆಗಾಲದಲ್ಲಿ ಅವರ ಜೊತೆ ಮಗ ವಿನೋದ್ ಬಿಟ್ಟರೆ ಬೇರೆ ಯಾರೂ ಇರಲಿಲ್ಲವಾಗಿತ್ತು. ತನಗೆ ಎಲ್ಲಾ ಮೋಸ ಮಾಡಿಬಿಟ್ಟರು ಎಂಬುದಾಗಿ ಕೊನೆಯ ದಿನಗಳಲ್ಲಿ ಮಗನ ಜೊತೆ ಟೈಗರ್ ಹೇಳಿಕೊಂಡಿದ್ದರಂತೆ. ಕೊನೆಗೆ 1948ರಲ್ಲಿ ಜನಿಸಿದ್ದ ಟೈಗರ್ ಬಹುಅಂಗಾಂಗ ವೈಫಲ್ಯದಿಂದ ತನ್ನ 52ನೇ ವಯಸ್ಸಿನಲ್ಲಿ (2001ರ ಮಾರ್ಚ್ 25ರಂದು ) ವಿಧಿವಶರಾಗಿದ್ದರು. ಸುಮಾರು ನಾಲ್ಕು ವರ್ಷಗಳ ಬಳಿಕ ಟೈಗರ್ ನಿರ್ದೇಶಿಸಿದ್ದ ಗುಡ್ ಬ್ಯಾಡ್ ಅಂಡ್ ಅಗ್ಲಿ ಸಿನಿಮಾ ತೆರೆಕಂಡಿತ್ತು..ಅದು ಪ್ರಭಾಕರ್ ಅವರ ಬದುಕು ಮತ್ತು ಅಂತ್ಯಕ್ಕೆ ಮುನ್ನುಡಿ ಬರೆದಂತೆ ಇತ್ತು..ಇವೆಲ್ಲದರ ನಡುವೆ ಟೈಗರ್ ಇನ್ನೂ ಚಿತ್ರರಸಿಕರ ಮನದಲ್ಲಿ ಉಳಿದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್. ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…