ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ ಇತ್ತು. ಫೈಟ್ ಅನ್ನು ಇಷ್ಟ ಪಡುವ ಪ್ರಭಾಕರ್ ಅದ್ಭುತವಾಗಿ ಫೈಟ್ ಮಾಡೋದು ಇನ್ನೊಂದು ವಿಶೇಷ. ತನಗೂ ಸೇರಿದಂತೆ ಹಲವಾರು ಸ್ಟಾರ್ ಗಳಿಗೂ ಫೈಟ್ ಅನ್ನು ಕಂಪೋಸ್ ಮಾಡುತ್ತಿದ್ದರು. ತನ್ನ 14ನೇ ವಯಸ್ಸಿನಲ್ಲಿಯೇ ಬಾಕ್ಸರ್ ಅನ್ನು ಎರಡು ಬಾರಿ ನೆಲಕ್ಕೆ ಕೆಡುವಿಹಿದ ಬಲಿಷ್ಠ ದೇಹಿ ಅವರಾಗಿದ್ದರು.

ಸುಮಾರು ನಾಲ್ಕು ದಶಕಗಳ ಹಿಂದೆ ಪ್ರಭಾಕರ್ ಕನ್ನಡ ಸಿನಿಮಾ ರಂಗದಲ್ಲಿ ಸ್ಟಂಟ್ ಮ್ಯಾನ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಹೀಗೆ ಸ್ಟಂಟ್ ಮಾಸ್ಟರ್ ಆಗಿ ಖ್ಯಾತರಾಗಿದ್ದರು. ತನ್ನ ಫೈಟ್ಸ್ ನೋಡಲಿಕ್ಕಾಗಿಯೇ ಪ್ರೇಕ್ಷಕರು ತನ್ನ ಸಿನಿಮಾ ನೋಡಲು ಬರುತ್ತಾರೆ ಎಂಬ ಹೆಮ್ಮೆ ಪ್ರಭಾಕರ್ ಅವರಿಗೆ ಇತ್ತಂತೆ. ಅವೆಲ್ಲಕ್ಕಿಂತ ಹೆಚ್ಚಾಗಿ ಪ್ರಭಾಕರ್ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಎಲ್ಲಾ ಫೈಟ್ ದೃಶ್ಯಗಳನ್ನು ತಾನೇ ಖುದ್ದಾಗಿ ಮಾಡುತ್ತಿದ್ದರು. ಇದರಿಂದಾಗಿಯೇ ತಾನು ಇಂದು ಸೋತು ಹೋದ ವ್ಯಕ್ತಿಯಾಗಿದ್ದೇನೆ. ನನ್ನೆಲ್ಲಾ ಮುರಿದ ಮೂಳೆಗಳು ಸರ್ಜರಿಯಲ್ಲಿ ನಿಂತಿವೆ ಎಂದು ಸಂದರ್ಶನವೊಂದರಲ್ಲಿ ಪ್ರಭಾಕರ್ ಹೇಳಿದ್ದರು.
ಟೈಗರ್ ಪ್ರಭಾಕರ್ ಖಳನಟ, ನಿರ್ದೇಶಕ, ನಿರ್ಮಾಪಕ, ಹೀರೋ ಎಲ್ಲಕ್ಕಿಂತ ಹೆಚ್ಚಾಗಿ ಅವರೊಬ್ಬ ಹೃದಯವಂತ ವ್ಯಕ್ತಿ. ಕನ್ನಡ, ತೆಲುಗು, ತಮಿಳು ಸೇರಿ 450 ಸಿನಿಮಾಗಳಲ್ಲಿ ನಟಿಸಿದ್ದ ಅವರು ಬಹುತೇಕರಿಂದ ಮೋಸಕ್ಕೊಳಗಾಗಿದ್ದ ವ್ಯಕ್ತಿ ಟೈಗರ್. ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಅನೇಕ ಕಲಾವಿದರಿಗೆ, ಅನಾಥಾಶ್ರಮಗಳಿಗೆ, ಸಂಘ, ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದರು. ಬೈಕ್ ಅಪಘಾತದ ಬಳಿಕ ಪ್ರಭಾಕರ್ ಆರೋಗ್ಯ ಹದಗೆಡ ತೊಡಗಿತ್ತು..ನಿಧಾನಕ್ಕೆ ಸ್ಟಾರ್ ವ್ಯಾಲ್ಯೂ ಕೂಡಾ ಕಡಿಮೆಯಾಗತೊಡಗಿತ್ತು.

ಅಧಿಕೃತವಾಗಿ ಮೂರು ಮದುವೆಯಾಗಿದ್ದ ಟೈಗರ್ ಗೆ ಇಬ್ಬರು ಪುತ್ರಿಯರು ಭಾರತಿ ಮತ್ತು ಗೀತಾ ಹಾಗೂ ಪುತ್ರ ವಿನೋದ್(ಮೊದಲ ಹೆಂಡತಿ ಮಕ್ಕಳು), 2ನೇ ವಿವಾಹವಾಗಿದ್ದು ನಟಿ ಜಯಮಾಲಾ ಜೊತೆ. ಇವರಿಗೆ ಸೌಂದರ್ಯ ಎಂಬ ಮಗಳು ಹುಟ್ಟಿದ್ದಳು. ಮೂರನೆಯ ಮದುವೆ ಅಂಜು ಜೊತೆ..ಈಕೆಗೆ ಅರ್ಜುನ್ ಎಂಬ ಮಗ ಜನಿಸಿದ್ದ. 2 ಮದುವೆಗಳು ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ತಾನೇನಿದ್ದರೂ ನೇರವಾಗಿ ಮಾತನಾಡುವ ಮನುಷ್ಯ ಎಂದೇ ಹೇಳಿಕೊಳ್ಳುತ್ತಿದ್ದ ಪ್ರಭಾಕರ್ ಅದೇ ರೀತಿ ಬದುಕಿದ್ದರು. ತನ್ನ ವೈಯಕ್ತಿಕ ಸೇರಿದಂತೆ ಎಲ್ಲಾ ವಿಚಾರವನ್ನು ಮುಚ್ಚಿಡದೇ ಹೇಳುತ್ತಿದ್ದ ನಟ ಅವರಾಗಿದ್ದರು. ವಿಪರ್ಯಾಸ ಎಂಬಂತೆ ಟೈಗರ್ ಕೊನೆಗಾಲದಲ್ಲಿ ಅವರ ಜೊತೆ ಮಗ ವಿನೋದ್ ಬಿಟ್ಟರೆ ಬೇರೆ ಯಾರೂ ಇರಲಿಲ್ಲವಾಗಿತ್ತು. ತನಗೆ ಎಲ್ಲಾ ಮೋಸ ಮಾಡಿಬಿಟ್ಟರು ಎಂಬುದಾಗಿ ಕೊನೆಯ ದಿನಗಳಲ್ಲಿ ಮಗನ ಜೊತೆ ಟೈಗರ್ ಹೇಳಿಕೊಂಡಿದ್ದರಂತೆ. ಕೊನೆಗೆ 1948ರಲ್ಲಿ ಜನಿಸಿದ್ದ ಟೈಗರ್ ಬಹುಅಂಗಾಂಗ ವೈಫಲ್ಯದಿಂದ ತನ್ನ 52ನೇ ವಯಸ್ಸಿನಲ್ಲಿ (2001ರ ಮಾರ್ಚ್ 25ರಂದು ) ವಿಧಿವಶರಾಗಿದ್ದರು. ಸುಮಾರು ನಾಲ್ಕು ವರ್ಷಗಳ ಬಳಿಕ ಟೈಗರ್ ನಿರ್ದೇಶಿಸಿದ್ದ ಗುಡ್ ಬ್ಯಾಡ್ ಅಂಡ್ ಅಗ್ಲಿ ಸಿನಿಮಾ ತೆರೆಕಂಡಿತ್ತು..ಅದು ಪ್ರಭಾಕರ್ ಅವರ ಬದುಕು ಮತ್ತು ಅಂತ್ಯಕ್ಕೆ ಮುನ್ನುಡಿ ಬರೆದಂತೆ ಇತ್ತು..ಇವೆಲ್ಲದರ ನಡುವೆ ಟೈಗರ್ ಇನ್ನೂ ಚಿತ್ರರಸಿಕರ ಮನದಲ್ಲಿ ಉಳಿದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.