News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

1177

ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ ಇತ್ತು. ಫೈಟ್ ಅನ್ನು ಇಷ್ಟ ಪಡುವ ಪ್ರಭಾಕರ್ ಅದ್ಭುತವಾಗಿ ಫೈಟ್ ಮಾಡೋದು ಇನ್ನೊಂದು ವಿಶೇಷ. ತನಗೂ ಸೇರಿದಂತೆ ಹಲವಾರು ಸ್ಟಾರ್ ಗಳಿಗೂ ಫೈಟ್ ಅನ್ನು ಕಂಪೋಸ್ ಮಾಡುತ್ತಿದ್ದರು. ತನ್ನ 14ನೇ ವಯಸ್ಸಿನಲ್ಲಿಯೇ ಬಾಕ್ಸರ್ ಅನ್ನು ಎರಡು ಬಾರಿ ನೆಲಕ್ಕೆ ಕೆಡುವಿಹಿದ ಬಲಿಷ್ಠ ದೇಹಿ ಅವರಾಗಿದ್ದರು.

ಸುಮಾರು ನಾಲ್ಕು ದಶಕಗಳ ಹಿಂದೆ ಪ್ರಭಾಕರ್ ಕನ್ನಡ ಸಿನಿಮಾ ರಂಗದಲ್ಲಿ ಸ್ಟಂಟ್ ಮ್ಯಾನ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಹೀಗೆ ಸ್ಟಂಟ್ ಮಾಸ್ಟರ್ ಆಗಿ ಖ್ಯಾತರಾಗಿದ್ದರು. ತನ್ನ ಫೈಟ್ಸ್ ನೋಡಲಿಕ್ಕಾಗಿಯೇ ಪ್ರೇಕ್ಷಕರು ತನ್ನ ಸಿನಿಮಾ ನೋಡಲು ಬರುತ್ತಾರೆ ಎಂಬ ಹೆಮ್ಮೆ ಪ್ರಭಾಕರ್ ಅವರಿಗೆ ಇತ್ತಂತೆ. ಅವೆಲ್ಲಕ್ಕಿಂತ ಹೆಚ್ಚಾಗಿ ಪ್ರಭಾಕರ್ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಎಲ್ಲಾ ಫೈಟ್ ದೃಶ್ಯಗಳನ್ನು ತಾನೇ ಖುದ್ದಾಗಿ ಮಾಡುತ್ತಿದ್ದರು. ಇದರಿಂದಾಗಿಯೇ ತಾನು ಇಂದು ಸೋತು ಹೋದ ವ್ಯಕ್ತಿಯಾಗಿದ್ದೇನೆ. ನನ್ನೆಲ್ಲಾ ಮುರಿದ ಮೂಳೆಗಳು ಸರ್ಜರಿಯಲ್ಲಿ ನಿಂತಿವೆ ಎಂದು ಸಂದರ್ಶನವೊಂದರಲ್ಲಿ ಪ್ರಭಾಕರ್ ಹೇಳಿದ್ದರು.

ಟೈಗರ್ ಪ್ರಭಾಕರ್ ಖಳನಟ, ನಿರ್ದೇಶಕ, ನಿರ್ಮಾಪಕ, ಹೀರೋ ಎಲ್ಲಕ್ಕಿಂತ ಹೆಚ್ಚಾಗಿ ಅವರೊಬ್ಬ ಹೃದಯವಂತ ವ್ಯಕ್ತಿ. ಕನ್ನಡ, ತೆಲುಗು, ತಮಿಳು ಸೇರಿ 450 ಸಿನಿಮಾಗಳಲ್ಲಿ ನಟಿಸಿದ್ದ ಅವರು ಬಹುತೇಕರಿಂದ ಮೋಸಕ್ಕೊಳಗಾಗಿದ್ದ ವ್ಯಕ್ತಿ ಟೈಗರ್. ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಅನೇಕ ಕಲಾವಿದರಿಗೆ, ಅನಾಥಾಶ್ರಮಗಳಿಗೆ, ಸಂಘ, ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದರು. ಬೈಕ್ ಅಪಘಾತದ ಬಳಿಕ ಪ್ರಭಾಕರ್ ಆರೋಗ್ಯ ಹದಗೆಡ ತೊಡಗಿತ್ತು..ನಿಧಾನಕ್ಕೆ ಸ್ಟಾರ್ ವ್ಯಾಲ್ಯೂ ಕೂಡಾ ಕಡಿಮೆಯಾಗತೊಡಗಿತ್ತು.

ಅಧಿಕೃತವಾಗಿ ಮೂರು ಮದುವೆಯಾಗಿದ್ದ ಟೈಗರ್ ಗೆ ಇಬ್ಬರು ಪುತ್ರಿಯರು ಭಾರತಿ ಮತ್ತು ಗೀತಾ ಹಾಗೂ ಪುತ್ರ ವಿನೋದ್(ಮೊದಲ ಹೆಂಡತಿ ಮಕ್ಕಳು), 2ನೇ ವಿವಾಹವಾಗಿದ್ದು ನಟಿ ಜಯಮಾಲಾ ಜೊತೆ. ಇವರಿಗೆ ಸೌಂದರ್ಯ ಎಂಬ ಮಗಳು ಹುಟ್ಟಿದ್ದಳು. ಮೂರನೆಯ ಮದುವೆ ಅಂಜು ಜೊತೆ..ಈಕೆಗೆ ಅರ್ಜುನ್ ಎಂಬ ಮಗ ಜನಿಸಿದ್ದ. 2 ಮದುವೆಗಳು ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ತಾನೇನಿದ್ದರೂ ನೇರವಾಗಿ ಮಾತನಾಡುವ ಮನುಷ್ಯ ಎಂದೇ ಹೇಳಿಕೊಳ್ಳುತ್ತಿದ್ದ ಪ್ರಭಾಕರ್ ಅದೇ ರೀತಿ ಬದುಕಿದ್ದರು. ತನ್ನ ವೈಯಕ್ತಿಕ ಸೇರಿದಂತೆ ಎಲ್ಲಾ ವಿಚಾರವನ್ನು ಮುಚ್ಚಿಡದೇ ಹೇಳುತ್ತಿದ್ದ ನಟ ಅವರಾಗಿದ್ದರು. ವಿಪರ್ಯಾಸ ಎಂಬಂತೆ ಟೈಗರ್ ಕೊನೆಗಾಲದಲ್ಲಿ ಅವರ ಜೊತೆ ಮಗ ವಿನೋದ್ ಬಿಟ್ಟರೆ ಬೇರೆ ಯಾರೂ ಇರಲಿಲ್ಲವಾಗಿತ್ತು. ತನಗೆ ಎಲ್ಲಾ ಮೋಸ ಮಾಡಿಬಿಟ್ಟರು ಎಂಬುದಾಗಿ ಕೊನೆಯ ದಿನಗಳಲ್ಲಿ ಮಗನ ಜೊತೆ ಟೈಗರ್ ಹೇಳಿಕೊಂಡಿದ್ದರಂತೆ. ಕೊನೆಗೆ 1948ರಲ್ಲಿ ಜನಿಸಿದ್ದ ಟೈಗರ್ ಬಹುಅಂಗಾಂಗ ವೈಫಲ್ಯದಿಂದ ತನ್ನ 52ನೇ ವಯಸ್ಸಿನಲ್ಲಿ (2001ರ ಮಾರ್ಚ್ 25ರಂದು ) ವಿಧಿವಶರಾಗಿದ್ದರು. ಸುಮಾರು ನಾಲ್ಕು ವರ್ಷಗಳ ಬಳಿಕ ಟೈಗರ್ ನಿರ್ದೇಶಿಸಿದ್ದ ಗುಡ್ ಬ್ಯಾಡ್ ಅಂಡ್ ಅಗ್ಲಿ ಸಿನಿಮಾ ತೆರೆಕಂಡಿತ್ತು..ಅದು ಪ್ರಭಾಕರ್ ಅವರ ಬದುಕು ಮತ್ತು ಅಂತ್ಯಕ್ಕೆ ಮುನ್ನುಡಿ ಬರೆದಂತೆ ಇತ್ತು..ಇವೆಲ್ಲದರ ನಡುವೆ ಟೈಗರ್ ಇನ್ನೂ ಚಿತ್ರರಸಿಕರ ಮನದಲ್ಲಿ ಉಳಿದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    “ಪ್ರಧಾನ ಮಂತ್ರಿ ಅವಾಸ್ ಯೋಜನೆ”ಅಡಿಯಲ್ಲಿ ಸ್ವಂತ ಮನೆ ಪಡೆಯುವುದು ಹೇಗೆ?

    ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

  • ಆರೋಗ್ಯ

    ನಿಂಬೆ ಸಿಪ್ಪೆಯನ್ನ ಬಿಸಾಡ್ತೀದೀರಾ ಇನ್ನು ಮುಂದೆ ಬಿಸಾಡಬೇಡಿ ಇದರಿಂದ ಸಾಕಷ್ಟು ಉಪಯೋಗಗಳಿವೆ.

    ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…

  • ಸುದ್ದಿ

    ಸರ್ಕಾರಿ ನೌಕರರಿಗೊಂದು ಬಂಪರ್ ಆಪರ್ ,5 ದಿನ ಮೊದಲೇ ಸಿಗಲಿದೆ ಸಂಬಳ….!

    ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್  ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…

  • ಮನರಂಜನೆ

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

    ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…