ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ ಇತ್ತು. ಫೈಟ್ ಅನ್ನು ಇಷ್ಟ ಪಡುವ ಪ್ರಭಾಕರ್ ಅದ್ಭುತವಾಗಿ ಫೈಟ್ ಮಾಡೋದು ಇನ್ನೊಂದು ವಿಶೇಷ. ತನಗೂ ಸೇರಿದಂತೆ ಹಲವಾರು ಸ್ಟಾರ್ ಗಳಿಗೂ ಫೈಟ್ ಅನ್ನು ಕಂಪೋಸ್ ಮಾಡುತ್ತಿದ್ದರು. ತನ್ನ 14ನೇ ವಯಸ್ಸಿನಲ್ಲಿಯೇ ಬಾಕ್ಸರ್ ಅನ್ನು ಎರಡು ಬಾರಿ ನೆಲಕ್ಕೆ ಕೆಡುವಿಹಿದ ಬಲಿಷ್ಠ ದೇಹಿ ಅವರಾಗಿದ್ದರು.

ಸುಮಾರು ನಾಲ್ಕು ದಶಕಗಳ ಹಿಂದೆ ಪ್ರಭಾಕರ್ ಕನ್ನಡ ಸಿನಿಮಾ ರಂಗದಲ್ಲಿ ಸ್ಟಂಟ್ ಮ್ಯಾನ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಹೀಗೆ ಸ್ಟಂಟ್ ಮಾಸ್ಟರ್ ಆಗಿ ಖ್ಯಾತರಾಗಿದ್ದರು. ತನ್ನ ಫೈಟ್ಸ್ ನೋಡಲಿಕ್ಕಾಗಿಯೇ ಪ್ರೇಕ್ಷಕರು ತನ್ನ ಸಿನಿಮಾ ನೋಡಲು ಬರುತ್ತಾರೆ ಎಂಬ ಹೆಮ್ಮೆ ಪ್ರಭಾಕರ್ ಅವರಿಗೆ ಇತ್ತಂತೆ. ಅವೆಲ್ಲಕ್ಕಿಂತ ಹೆಚ್ಚಾಗಿ ಪ್ರಭಾಕರ್ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಎಲ್ಲಾ ಫೈಟ್ ದೃಶ್ಯಗಳನ್ನು ತಾನೇ ಖುದ್ದಾಗಿ ಮಾಡುತ್ತಿದ್ದರು. ಇದರಿಂದಾಗಿಯೇ ತಾನು ಇಂದು ಸೋತು ಹೋದ ವ್ಯಕ್ತಿಯಾಗಿದ್ದೇನೆ. ನನ್ನೆಲ್ಲಾ ಮುರಿದ ಮೂಳೆಗಳು ಸರ್ಜರಿಯಲ್ಲಿ ನಿಂತಿವೆ ಎಂದು ಸಂದರ್ಶನವೊಂದರಲ್ಲಿ ಪ್ರಭಾಕರ್ ಹೇಳಿದ್ದರು.
ಟೈಗರ್ ಪ್ರಭಾಕರ್ ಖಳನಟ, ನಿರ್ದೇಶಕ, ನಿರ್ಮಾಪಕ, ಹೀರೋ ಎಲ್ಲಕ್ಕಿಂತ ಹೆಚ್ಚಾಗಿ ಅವರೊಬ್ಬ ಹೃದಯವಂತ ವ್ಯಕ್ತಿ. ಕನ್ನಡ, ತೆಲುಗು, ತಮಿಳು ಸೇರಿ 450 ಸಿನಿಮಾಗಳಲ್ಲಿ ನಟಿಸಿದ್ದ ಅವರು ಬಹುತೇಕರಿಂದ ಮೋಸಕ್ಕೊಳಗಾಗಿದ್ದ ವ್ಯಕ್ತಿ ಟೈಗರ್. ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಅನೇಕ ಕಲಾವಿದರಿಗೆ, ಅನಾಥಾಶ್ರಮಗಳಿಗೆ, ಸಂಘ, ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದರು. ಬೈಕ್ ಅಪಘಾತದ ಬಳಿಕ ಪ್ರಭಾಕರ್ ಆರೋಗ್ಯ ಹದಗೆಡ ತೊಡಗಿತ್ತು..ನಿಧಾನಕ್ಕೆ ಸ್ಟಾರ್ ವ್ಯಾಲ್ಯೂ ಕೂಡಾ ಕಡಿಮೆಯಾಗತೊಡಗಿತ್ತು.

ಅಧಿಕೃತವಾಗಿ ಮೂರು ಮದುವೆಯಾಗಿದ್ದ ಟೈಗರ್ ಗೆ ಇಬ್ಬರು ಪುತ್ರಿಯರು ಭಾರತಿ ಮತ್ತು ಗೀತಾ ಹಾಗೂ ಪುತ್ರ ವಿನೋದ್(ಮೊದಲ ಹೆಂಡತಿ ಮಕ್ಕಳು), 2ನೇ ವಿವಾಹವಾಗಿದ್ದು ನಟಿ ಜಯಮಾಲಾ ಜೊತೆ. ಇವರಿಗೆ ಸೌಂದರ್ಯ ಎಂಬ ಮಗಳು ಹುಟ್ಟಿದ್ದಳು. ಮೂರನೆಯ ಮದುವೆ ಅಂಜು ಜೊತೆ..ಈಕೆಗೆ ಅರ್ಜುನ್ ಎಂಬ ಮಗ ಜನಿಸಿದ್ದ. 2 ಮದುವೆಗಳು ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ತಾನೇನಿದ್ದರೂ ನೇರವಾಗಿ ಮಾತನಾಡುವ ಮನುಷ್ಯ ಎಂದೇ ಹೇಳಿಕೊಳ್ಳುತ್ತಿದ್ದ ಪ್ರಭಾಕರ್ ಅದೇ ರೀತಿ ಬದುಕಿದ್ದರು. ತನ್ನ ವೈಯಕ್ತಿಕ ಸೇರಿದಂತೆ ಎಲ್ಲಾ ವಿಚಾರವನ್ನು ಮುಚ್ಚಿಡದೇ ಹೇಳುತ್ತಿದ್ದ ನಟ ಅವರಾಗಿದ್ದರು. ವಿಪರ್ಯಾಸ ಎಂಬಂತೆ ಟೈಗರ್ ಕೊನೆಗಾಲದಲ್ಲಿ ಅವರ ಜೊತೆ ಮಗ ವಿನೋದ್ ಬಿಟ್ಟರೆ ಬೇರೆ ಯಾರೂ ಇರಲಿಲ್ಲವಾಗಿತ್ತು. ತನಗೆ ಎಲ್ಲಾ ಮೋಸ ಮಾಡಿಬಿಟ್ಟರು ಎಂಬುದಾಗಿ ಕೊನೆಯ ದಿನಗಳಲ್ಲಿ ಮಗನ ಜೊತೆ ಟೈಗರ್ ಹೇಳಿಕೊಂಡಿದ್ದರಂತೆ. ಕೊನೆಗೆ 1948ರಲ್ಲಿ ಜನಿಸಿದ್ದ ಟೈಗರ್ ಬಹುಅಂಗಾಂಗ ವೈಫಲ್ಯದಿಂದ ತನ್ನ 52ನೇ ವಯಸ್ಸಿನಲ್ಲಿ (2001ರ ಮಾರ್ಚ್ 25ರಂದು ) ವಿಧಿವಶರಾಗಿದ್ದರು. ಸುಮಾರು ನಾಲ್ಕು ವರ್ಷಗಳ ಬಳಿಕ ಟೈಗರ್ ನಿರ್ದೇಶಿಸಿದ್ದ ಗುಡ್ ಬ್ಯಾಡ್ ಅಂಡ್ ಅಗ್ಲಿ ಸಿನಿಮಾ ತೆರೆಕಂಡಿತ್ತು..ಅದು ಪ್ರಭಾಕರ್ ಅವರ ಬದುಕು ಮತ್ತು ಅಂತ್ಯಕ್ಕೆ ಮುನ್ನುಡಿ ಬರೆದಂತೆ ಇತ್ತು..ಇವೆಲ್ಲದರ ನಡುವೆ ಟೈಗರ್ ಇನ್ನೂ ಚಿತ್ರರಸಿಕರ ಮನದಲ್ಲಿ ಉಳಿದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…
ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…