ಸುದ್ದಿ

ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

50

ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.

ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌ ಲೇನ್‌ ಕೂಡ ಇರಲಿದ್ದು, ಇದರಲ್ಲಿ ಫಾಸ್ಟ್‌ಟ್ಯಾಗ್‌ ಜೊತೆಗೆ ನಗದು ರೂಪದಲ್ಲೂ ಹಣ ಪಡೆಯಲಾಗುತ್ತದೆಮುಂದಿನ ದಿನಗಳಲ್ಲಿ ಈ ಲೇನ್‌ಗಳಲ್ಲಿ ಕೇವಲ ಫಾಸ್ಟ್‌ಟ್ಯಾಗ್‌ಗಳನ್ನು ಮಾತ್ರ ಸಮ್ಮತಿಸಲಾಗುತ್ತದೆ. ಫಾಸ್ಟ್‌ಟ್ಯಾಗ್‌ ಇಲ್ಲದ ವಾಹನಗಳು ಈ ಲೇನ್‌ಗಳ ಮೂಲಕ ಹಾದುಹೋಗುವುದಾದರೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ. ಟೋಲ್ ಬಳಿ ವಾಹನವನ್ನು ನಿಲ್ಲಿಸಿ ಹಣ ನೀಡಿ ರಸೀದಿ ತೆಗೆದುಕೊಳ್ಳುವ ಕಿರಿಕಿರಿಯನ್ನು ಇದು ನಿವಾರಿಸುತ್ತದೆ.

ಸದ್ಯ ಎಲ್ಲ ಟೋಲ್‌ಗಳಲ್ಲೂ ಕೆಲವು ಲೇನ್‌ಗಳನ್ನು ಫಾಸ್ಟ್‌ಟ್ಯಾಗ್‌ ಸಿದ್ಧವಾಗಿಸಿದ್ದು, ಇಂತಹ ಲೇನ್‌ಗಳಲ್ಲಿ ನಗದು ಪಾವತಿ ಮಾಡುವವರೂ ಆಗಮಿಸುವುದರಿಂದಾಗಿ ಫಾಸ್ಟ್‌ಟ್ಯಾಗ್‌ನ ಮೂಲ ಉದ್ದೇಶವೇ ವಿಫ‌ಲವಾಗಿದೆ. ಹೀಗಾಗಿ ಈ ಬಗ್ಗೆ ಅಧ್ಯಯನ ನಡೆಸಲೂ ಸಚಿವಾಲಯ ಮುಂದಾಗಿದೆ. ಹಾಗೆಯೇ ಟೋಲ್‌ ಪ್ಲಾಜಾದ ಕೊನೆಯ ಒಂದು ಲೈನನ್ನು ಫಾಸ್ಟ್‌ಟ್ಯಾಗ್ ರಹಿತ ವಾಹನಗಳಿಗಾಗಿ ಮೀಸಲಿಡಲಾಗಿದೆ. ಟೋಲ್ ಪ್ಲಾಜಾಗಳಲ್ಲಿ ಸುಗಮ ಸಂಚಾರ ಹಾಗೂ ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಕಾರು, ಜೀಪು, ಲಘು ವಾಹನಗಳು, ಮಿನಿ ಬಸ್ ಏಕಮುಖ ಪ್ರಯಾಣ ದರ ಅಷ್ಟೇ ಇರಲಿದೆ. ಆದರೆ ನಿತ್ಯದ ಬಸ್‌ ಪಾಸಿನ ದರ ಮಾತ್ರ ಐದು ರೂ ಹೆಚ್ಚಳವಾಗಿದೆ. ಕಾರು, ಜೀಪುಗಳ ತಿಂಗಳ ಪಾಸಿನ ದರ 50 , ಲಘು ವಾಹನಗಳು, ಮಿನಿಬಸ್ ಪಾಸಿನ ದರ 75 ರೂ, ಬಸ್, ಟ್ರಕ್‌ಗಳ ದರವೂ ಏರಿಕೆಯಾಗಿದೆ. ದ್ವಿಚಕ್ರ ವಾಹನಗಳಿಗೆ ಯಾವುದೇ ಟೋಲ್ ಇಲ್ಲ. ಬೆಂಗಳೂರಿನ ನವಯುಗ ಟೋಲ್ ಪ್ರೈವೇಟ್ ಲಿಮಿಟೆಡ್ ಭಾನುವಾರ ಟೋಲ್ ದರ ಪ್ರಕಟಿಸಿದೆ. 19.5 ಕಿ.ಮೀಗೆ ದರ ಪರಿಷ್ಕರಣೆ ಮಾಡಿದೆ.

ನಿತ್ಯ 45,000 ವಾಹನಗಳು ಸಂಚರಿಸುತ್ತವೆ. ಇತ್ತೀಚೆಗೆ ಎಲೆಕ್ಟ್ರಾನಿಕ್ಸ್‌ಸಿಟಿ, ಅತ್ತಿಬೆಲೆ ಮಾರ್ಗದ ಟೋಲ್ ದರ ಹೆಚ್ಚಳ ಮಾಡಲಾಗಿತ್ತು. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ.ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್‌ ಸಿಟಿ, ಅತ್ತಿಬೆಲೆ ಮಾರ್ಗದಲ್ಲಿ ನಿತ್ಯ ಸಂಚರಿಸುವವರು ಜುಲೈ 1 ರಿಂದ ಟೋಲ್ ದರ ಹೆಚ್ಚಳವಾಗಿದೆ. ಎಲೆಕ್ಟ್ರಾನಿಕ್ಸ್‌ ಸಿಟಿಯಿಂದ ನಗರಕ್ಕೆ ಬರುವವರು ಹೋಗುವ ಮಾರ್ಗದಲ್ಲಿ 5 ರೂ, ಹಿಂದಿರುಗುವಾಗ 5 ರೂ ಒಟ್ಟು 10 ರೂ ಹೆಚ್ಚಿಗೆ ಹಣ ಪಾವತಿಸಬೇಕಿದೆ. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ. ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ. ಐಟಿ ಸಿಬ್ಬಂದಿಗಳು ಬೆಂಗಳೂರು ನಗರದಿಂದ ನಿತ್ಯ ಎಲೆಕ್ಟ್ರಾನಿಕ್ಸ್ ಸಿಟಿ ಕಡೆಗೆ ಹೋಗುತ್ತಾರೆ. 18 ಕಿ.ಮೀ ರಸ್ತೆಯಲ್ಲಿ 55,000 -60 ಸಾವಿರ ವಾಹನಗಳು ಸಂಚರಿಸುತ್ತವೆ. ಹೋಲ್‌ಸೇಲ್ ಇಂಡೆಕ್ಸ್ ಪ್ರೈಸ್ ಪ್ರಕಾರ ಟೋಲ್ ಮೊತ್ತವನ್ನು ಏರಿಕೆ ಮಾಡಲಾಗುತ್ತಿದೆ. ಟೋಲ್ ದರ ಹೆಚ್ಚಾದರೆ ಆ ಮಾರ್ಗದಲ್ಲಿ ಸಂಚರಿಸುವ ಬಸ್‌ ಟಿಕೆಟ್ ದರ ಕೂಡ ಹೆಚ್ಚಾಗಲಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪ್ಲಾಸ್ಟಿಕ್ ಪಾತ್ರೆಯಲ್ಲಿ ತಿಂಡಿ ಹಾಕಿಡುತ್ತೀರಾ? ಹಾಗಾದ್ರೆ ಈ ಲೇಖನ ಓದಿ ..

    ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.

  • ಸುದ್ದಿ

    ಕೋಟ್ಯಧಿಪತಿಯಲ್ಲಿ 10ನೇ ತರಗತಿ ವಿದ್ಯಾರ್ಥಿ; ಗೆದ್ದ ಹಣ ಶಾಲಾ ಕಾಂಪೌಂಡ್​ಗೆ,.!

    ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್​ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….

  • ಮನಮಿಡಿಯುವ ಕಥೆ

    ತಾಯಿ ಮೇಲೆ ಪ್ರೀತಿ ಇದ್ದರೆ, ಈ ಮನಮುಟ್ಟುವ ಕಥೆಯನ್ನು ಒಮ್ಮೆ ಓದಿ.!

    ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…

  • ಸುದ್ದಿ

    ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಹೋಗದೇ ಮನೆಯಲ್ಲಿ ಕೂತಿದ್ದಾರೆ ಮಾಜಿ ಸಿಎಂ!ಕಾರಣ ಏನು ಗೊತ್ತಾ?ಈ ಸುದ್ದಿ ನೋಡಿ

    ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…

  • ಆಧ್ಯಾತ್ಮ, ಜ್ಯೋತಿಷ್ಯ

    ಚಂಡಿಯಾಗ ಎಂದರೇನು,? ಯಾರು ಯಾವಾಗ ಮಾಡಬೇಕು,? ಇದರಿಂದಾಗುವ ಲಾಭಗಳೇನು ಗೊತ್ತಾ..??

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…