News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

53

ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.

ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌ ಲೇನ್‌ ಕೂಡ ಇರಲಿದ್ದು, ಇದರಲ್ಲಿ ಫಾಸ್ಟ್‌ಟ್ಯಾಗ್‌ ಜೊತೆಗೆ ನಗದು ರೂಪದಲ್ಲೂ ಹಣ ಪಡೆಯಲಾಗುತ್ತದೆಮುಂದಿನ ದಿನಗಳಲ್ಲಿ ಈ ಲೇನ್‌ಗಳಲ್ಲಿ ಕೇವಲ ಫಾಸ್ಟ್‌ಟ್ಯಾಗ್‌ಗಳನ್ನು ಮಾತ್ರ ಸಮ್ಮತಿಸಲಾಗುತ್ತದೆ. ಫಾಸ್ಟ್‌ಟ್ಯಾಗ್‌ ಇಲ್ಲದ ವಾಹನಗಳು ಈ ಲೇನ್‌ಗಳ ಮೂಲಕ ಹಾದುಹೋಗುವುದಾದರೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ. ಟೋಲ್ ಬಳಿ ವಾಹನವನ್ನು ನಿಲ್ಲಿಸಿ ಹಣ ನೀಡಿ ರಸೀದಿ ತೆಗೆದುಕೊಳ್ಳುವ ಕಿರಿಕಿರಿಯನ್ನು ಇದು ನಿವಾರಿಸುತ್ತದೆ.

ಸದ್ಯ ಎಲ್ಲ ಟೋಲ್‌ಗಳಲ್ಲೂ ಕೆಲವು ಲೇನ್‌ಗಳನ್ನು ಫಾಸ್ಟ್‌ಟ್ಯಾಗ್‌ ಸಿದ್ಧವಾಗಿಸಿದ್ದು, ಇಂತಹ ಲೇನ್‌ಗಳಲ್ಲಿ ನಗದು ಪಾವತಿ ಮಾಡುವವರೂ ಆಗಮಿಸುವುದರಿಂದಾಗಿ ಫಾಸ್ಟ್‌ಟ್ಯಾಗ್‌ನ ಮೂಲ ಉದ್ದೇಶವೇ ವಿಫ‌ಲವಾಗಿದೆ. ಹೀಗಾಗಿ ಈ ಬಗ್ಗೆ ಅಧ್ಯಯನ ನಡೆಸಲೂ ಸಚಿವಾಲಯ ಮುಂದಾಗಿದೆ. ಹಾಗೆಯೇ ಟೋಲ್‌ ಪ್ಲಾಜಾದ ಕೊನೆಯ ಒಂದು ಲೈನನ್ನು ಫಾಸ್ಟ್‌ಟ್ಯಾಗ್ ರಹಿತ ವಾಹನಗಳಿಗಾಗಿ ಮೀಸಲಿಡಲಾಗಿದೆ. ಟೋಲ್ ಪ್ಲಾಜಾಗಳಲ್ಲಿ ಸುಗಮ ಸಂಚಾರ ಹಾಗೂ ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಕಾರು, ಜೀಪು, ಲಘು ವಾಹನಗಳು, ಮಿನಿ ಬಸ್ ಏಕಮುಖ ಪ್ರಯಾಣ ದರ ಅಷ್ಟೇ ಇರಲಿದೆ. ಆದರೆ ನಿತ್ಯದ ಬಸ್‌ ಪಾಸಿನ ದರ ಮಾತ್ರ ಐದು ರೂ ಹೆಚ್ಚಳವಾಗಿದೆ. ಕಾರು, ಜೀಪುಗಳ ತಿಂಗಳ ಪಾಸಿನ ದರ 50 , ಲಘು ವಾಹನಗಳು, ಮಿನಿಬಸ್ ಪಾಸಿನ ದರ 75 ರೂ, ಬಸ್, ಟ್ರಕ್‌ಗಳ ದರವೂ ಏರಿಕೆಯಾಗಿದೆ. ದ್ವಿಚಕ್ರ ವಾಹನಗಳಿಗೆ ಯಾವುದೇ ಟೋಲ್ ಇಲ್ಲ. ಬೆಂಗಳೂರಿನ ನವಯುಗ ಟೋಲ್ ಪ್ರೈವೇಟ್ ಲಿಮಿಟೆಡ್ ಭಾನುವಾರ ಟೋಲ್ ದರ ಪ್ರಕಟಿಸಿದೆ. 19.5 ಕಿ.ಮೀಗೆ ದರ ಪರಿಷ್ಕರಣೆ ಮಾಡಿದೆ.

ನಿತ್ಯ 45,000 ವಾಹನಗಳು ಸಂಚರಿಸುತ್ತವೆ. ಇತ್ತೀಚೆಗೆ ಎಲೆಕ್ಟ್ರಾನಿಕ್ಸ್‌ಸಿಟಿ, ಅತ್ತಿಬೆಲೆ ಮಾರ್ಗದ ಟೋಲ್ ದರ ಹೆಚ್ಚಳ ಮಾಡಲಾಗಿತ್ತು. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ.ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್‌ ಸಿಟಿ, ಅತ್ತಿಬೆಲೆ ಮಾರ್ಗದಲ್ಲಿ ನಿತ್ಯ ಸಂಚರಿಸುವವರು ಜುಲೈ 1 ರಿಂದ ಟೋಲ್ ದರ ಹೆಚ್ಚಳವಾಗಿದೆ. ಎಲೆಕ್ಟ್ರಾನಿಕ್ಸ್‌ ಸಿಟಿಯಿಂದ ನಗರಕ್ಕೆ ಬರುವವರು ಹೋಗುವ ಮಾರ್ಗದಲ್ಲಿ 5 ರೂ, ಹಿಂದಿರುಗುವಾಗ 5 ರೂ ಒಟ್ಟು 10 ರೂ ಹೆಚ್ಚಿಗೆ ಹಣ ಪಾವತಿಸಬೇಕಿದೆ. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ. ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ. ಐಟಿ ಸಿಬ್ಬಂದಿಗಳು ಬೆಂಗಳೂರು ನಗರದಿಂದ ನಿತ್ಯ ಎಲೆಕ್ಟ್ರಾನಿಕ್ಸ್ ಸಿಟಿ ಕಡೆಗೆ ಹೋಗುತ್ತಾರೆ. 18 ಕಿ.ಮೀ ರಸ್ತೆಯಲ್ಲಿ 55,000 -60 ಸಾವಿರ ವಾಹನಗಳು ಸಂಚರಿಸುತ್ತವೆ. ಹೋಲ್‌ಸೇಲ್ ಇಂಡೆಕ್ಸ್ ಪ್ರೈಸ್ ಪ್ರಕಾರ ಟೋಲ್ ಮೊತ್ತವನ್ನು ಏರಿಕೆ ಮಾಡಲಾಗುತ್ತಿದೆ. ಟೋಲ್ ದರ ಹೆಚ್ಚಾದರೆ ಆ ಮಾರ್ಗದಲ್ಲಿ ಸಂಚರಿಸುವ ಬಸ್‌ ಟಿಕೆಟ್ ದರ ಕೂಡ ಹೆಚ್ಚಾಗಲಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ, ಮನಮಿಡಿಯುವ ಕಥೆ, ಸಾಧನೆ, ಸುದ್ದಿ, ಸ್ಪೂರ್ತಿ

    ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ 11 ವರ್ಷದ ಬಾಲಕಿ.!

    ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.  ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್‌ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…

  • ಉದ್ಯೋಗ

    ಡಿಆರ್‌ಡಿಒ ನೇಮಕಾತಿ 2020-21:

    ಚಂಡೀಗ .ದಲ್ಲಿ ಡಿಆರ್‌ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್‌ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್‌ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್‌ಗಾಗಿ ಡಿಆರ್‌ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್‌ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…

  • ಸುದ್ದಿ

    ಕುಮಾರಸ್ವಾಮಿಯವರು ಆಪರೇಷನ್ ಕಮಲಕ್ಕೆ ಬೆಚ್ಚಿಬಿದ್ರಾ..?ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇಕೆ..?

    ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….

  • ಚುನಾವಣೆ

    ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

    ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…