News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

57

ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.

ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌ ಲೇನ್‌ ಕೂಡ ಇರಲಿದ್ದು, ಇದರಲ್ಲಿ ಫಾಸ್ಟ್‌ಟ್ಯಾಗ್‌ ಜೊತೆಗೆ ನಗದು ರೂಪದಲ್ಲೂ ಹಣ ಪಡೆಯಲಾಗುತ್ತದೆಮುಂದಿನ ದಿನಗಳಲ್ಲಿ ಈ ಲೇನ್‌ಗಳಲ್ಲಿ ಕೇವಲ ಫಾಸ್ಟ್‌ಟ್ಯಾಗ್‌ಗಳನ್ನು ಮಾತ್ರ ಸಮ್ಮತಿಸಲಾಗುತ್ತದೆ. ಫಾಸ್ಟ್‌ಟ್ಯಾಗ್‌ ಇಲ್ಲದ ವಾಹನಗಳು ಈ ಲೇನ್‌ಗಳ ಮೂಲಕ ಹಾದುಹೋಗುವುದಾದರೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ. ಟೋಲ್ ಬಳಿ ವಾಹನವನ್ನು ನಿಲ್ಲಿಸಿ ಹಣ ನೀಡಿ ರಸೀದಿ ತೆಗೆದುಕೊಳ್ಳುವ ಕಿರಿಕಿರಿಯನ್ನು ಇದು ನಿವಾರಿಸುತ್ತದೆ.

ಸದ್ಯ ಎಲ್ಲ ಟೋಲ್‌ಗಳಲ್ಲೂ ಕೆಲವು ಲೇನ್‌ಗಳನ್ನು ಫಾಸ್ಟ್‌ಟ್ಯಾಗ್‌ ಸಿದ್ಧವಾಗಿಸಿದ್ದು, ಇಂತಹ ಲೇನ್‌ಗಳಲ್ಲಿ ನಗದು ಪಾವತಿ ಮಾಡುವವರೂ ಆಗಮಿಸುವುದರಿಂದಾಗಿ ಫಾಸ್ಟ್‌ಟ್ಯಾಗ್‌ನ ಮೂಲ ಉದ್ದೇಶವೇ ವಿಫ‌ಲವಾಗಿದೆ. ಹೀಗಾಗಿ ಈ ಬಗ್ಗೆ ಅಧ್ಯಯನ ನಡೆಸಲೂ ಸಚಿವಾಲಯ ಮುಂದಾಗಿದೆ. ಹಾಗೆಯೇ ಟೋಲ್‌ ಪ್ಲಾಜಾದ ಕೊನೆಯ ಒಂದು ಲೈನನ್ನು ಫಾಸ್ಟ್‌ಟ್ಯಾಗ್ ರಹಿತ ವಾಹನಗಳಿಗಾಗಿ ಮೀಸಲಿಡಲಾಗಿದೆ. ಟೋಲ್ ಪ್ಲಾಜಾಗಳಲ್ಲಿ ಸುಗಮ ಸಂಚಾರ ಹಾಗೂ ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಕಾರು, ಜೀಪು, ಲಘು ವಾಹನಗಳು, ಮಿನಿ ಬಸ್ ಏಕಮುಖ ಪ್ರಯಾಣ ದರ ಅಷ್ಟೇ ಇರಲಿದೆ. ಆದರೆ ನಿತ್ಯದ ಬಸ್‌ ಪಾಸಿನ ದರ ಮಾತ್ರ ಐದು ರೂ ಹೆಚ್ಚಳವಾಗಿದೆ. ಕಾರು, ಜೀಪುಗಳ ತಿಂಗಳ ಪಾಸಿನ ದರ 50 , ಲಘು ವಾಹನಗಳು, ಮಿನಿಬಸ್ ಪಾಸಿನ ದರ 75 ರೂ, ಬಸ್, ಟ್ರಕ್‌ಗಳ ದರವೂ ಏರಿಕೆಯಾಗಿದೆ. ದ್ವಿಚಕ್ರ ವಾಹನಗಳಿಗೆ ಯಾವುದೇ ಟೋಲ್ ಇಲ್ಲ. ಬೆಂಗಳೂರಿನ ನವಯುಗ ಟೋಲ್ ಪ್ರೈವೇಟ್ ಲಿಮಿಟೆಡ್ ಭಾನುವಾರ ಟೋಲ್ ದರ ಪ್ರಕಟಿಸಿದೆ. 19.5 ಕಿ.ಮೀಗೆ ದರ ಪರಿಷ್ಕರಣೆ ಮಾಡಿದೆ.

ನಿತ್ಯ 45,000 ವಾಹನಗಳು ಸಂಚರಿಸುತ್ತವೆ. ಇತ್ತೀಚೆಗೆ ಎಲೆಕ್ಟ್ರಾನಿಕ್ಸ್‌ಸಿಟಿ, ಅತ್ತಿಬೆಲೆ ಮಾರ್ಗದ ಟೋಲ್ ದರ ಹೆಚ್ಚಳ ಮಾಡಲಾಗಿತ್ತು. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ.ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್‌ ಸಿಟಿ, ಅತ್ತಿಬೆಲೆ ಮಾರ್ಗದಲ್ಲಿ ನಿತ್ಯ ಸಂಚರಿಸುವವರು ಜುಲೈ 1 ರಿಂದ ಟೋಲ್ ದರ ಹೆಚ್ಚಳವಾಗಿದೆ. ಎಲೆಕ್ಟ್ರಾನಿಕ್ಸ್‌ ಸಿಟಿಯಿಂದ ನಗರಕ್ಕೆ ಬರುವವರು ಹೋಗುವ ಮಾರ್ಗದಲ್ಲಿ 5 ರೂ, ಹಿಂದಿರುಗುವಾಗ 5 ರೂ ಒಟ್ಟು 10 ರೂ ಹೆಚ್ಚಿಗೆ ಹಣ ಪಾವತಿಸಬೇಕಿದೆ. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ. ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ. ಐಟಿ ಸಿಬ್ಬಂದಿಗಳು ಬೆಂಗಳೂರು ನಗರದಿಂದ ನಿತ್ಯ ಎಲೆಕ್ಟ್ರಾನಿಕ್ಸ್ ಸಿಟಿ ಕಡೆಗೆ ಹೋಗುತ್ತಾರೆ. 18 ಕಿ.ಮೀ ರಸ್ತೆಯಲ್ಲಿ 55,000 -60 ಸಾವಿರ ವಾಹನಗಳು ಸಂಚರಿಸುತ್ತವೆ. ಹೋಲ್‌ಸೇಲ್ ಇಂಡೆಕ್ಸ್ ಪ್ರೈಸ್ ಪ್ರಕಾರ ಟೋಲ್ ಮೊತ್ತವನ್ನು ಏರಿಕೆ ಮಾಡಲಾಗುತ್ತಿದೆ. ಟೋಲ್ ದರ ಹೆಚ್ಚಾದರೆ ಆ ಮಾರ್ಗದಲ್ಲಿ ಸಂಚರಿಸುವ ಬಸ್‌ ಟಿಕೆಟ್ ದರ ಕೂಡ ಹೆಚ್ಚಾಗಲಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…

  • ಉಪಯುಕ್ತ ಮಾಹಿತಿ

    ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.

  • bank

    ಎಟಿಎಂ ನಲ್ಲಿ ‘ನೋಟು’ ಬರದಿದ್ರೆ ಏನು ಮಾಡಬೇಕು…?

    ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…

  • ಜ್ಯೋತಿಷ್ಯ

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

    ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…

  • ರಾಜಕೀಯ

    ಸಿದ್ದರಾಮಯ್ಯನವರು ಜೆಡಿಎಸ್ ಬಿಟ್ಟು ಬರಲು ಕಾರಣವೇನು…?ರೆಬೆಲ್ ಶಾಸಕ ಬಾಲಕೃಷ್ಣರವರು ಕೊಟ್ಟ ಹೇಳಿಕೆ..!

    ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • Uncategorized

    ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

    ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು. 237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74…