ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು ತನಗಿಂತ ವಯಸ್ಸಿನಲ್ಲಿ ಚಿಕ್ಕವರನ್ನು ವಿವಾಹವಾಗಿದ್ದಾರೆ. ಅವರು ಯಾರ್ ಯಾರು ಎಂದು ತಿಳಿದುಕೊಳ್ಳಲು ಮುಂದೆ ಓದಿ.
ಕನ್ನಡದ ಮೋಸ್ಟ್ ಫೇವರಿಟ್ ಸೆಲೆಬ್ರಿಟಿ ಕಪಲ್ಸ್ ಎಂದರೆ ಸ್ಯಾಂಡಲ್ ವುಡ್ ಕ್ವೀನ್ ರಾಧಿಕಾ ಪಂಡಿತ್ ಮತ್ತು ರಾಕಿಂಗ್ ಸ್ಟಾರ್ ಯಶ್.. ಇವರಿಬ್ಬರೂ ಕನ್ನಡ ಚಿತ್ರರಂಗದಲ್ಲಿ ಸಲ್ಲಿಸಿರುವ ಸೇವೆ ಅಪಾರ. ಸತತ ಆರು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಡಿಸೆಂಬರ್ 9 2016 ರಂದು ಶಾಸ್ತ್ರೋಕ್ತವಾಗಿ ವಿವಾಹವಾಗಿ ಎರಡು ಮಕ್ಕಳಿಗೆ ಜನ್ಮ ನೀಡಿ ಸುಖಕರ ಜೀವನ ನಡೆಸುತ್ತಿದ್ದಾರೆ. ಆದರೆ ಇಲ್ಲಿ ಗಮನಿಸಬೇಕಾದ ವಿಚಾರವೇನೆಂದರೆ ಯಶ್ ಅವರಿಗಿಂತ ರಾಧಿಕಾ ಪಂಡಿತ್ ಎರಡು ವರ್ಷ ದೊಡ್ಡವರು.
ಕನ್ನಡದ ಅಭಿನೇತ್ರಿ ಜಯಂತಿ ಅವರ ಪುತ್ರನ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಅನು ಪ್ರಭಾಕರ್ ಅವರು ಅವರಿಂದ ವಿಚ್ಛೇದನ ಪಡೆದುಕೊಂಡು, ತನಗಿಂತ ಒಂದು ವರ್ಷ ಚಿಕ್ಕವರಾದ ರಘು ಮುಖರ್ಜಿ ಅವರನ್ನು ಎರಡನೇ ವಿವಾಹವಾಗಿದ್ದಾರೆ.
ವಿಶ್ವ ಸುಂದರಿ, ತುಳುನಾಡಿನ ಬೆಡಗಿ ಐಶ್ವರ್ಯಾ ರೈ ಅವರು ಬಾಲಿವುಡ್ ನ ಹೆಸರಾಂತ ನಟ ಅಮಿತಾಬ್ ಬಚ್ಚನ್ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರನ್ನು ಏಪ್ರಿಲ್ 20, 2007 ವಿವಾಹವಾಗುತ್ತಾರೆ. ಆದರೆ ಐಶ್ವರ್ಯ ಗಿಂತ ಅಭಿಷೇಕ್ ಅವರು ಎರಡು ವರ್ಷ ಚಿಕ್ಕವರು ಎಂಬುದು ವಿಶೇಷ.
ಮಂಗಳೂರಿನ ಬೆಡಗಿ ನಟಿ ಶಿಲ್ಪಾ ಶೆಟ್ಟಿ ಅವರು ದಶಕಗಳ ಕಾಲ ಬಾಲಿವುಡ್ ನಲ್ಲಿ ಬೇಡಿಕೆಯ ನಟಿಯಾಗಿದ್ದರು. 22 ನವೆಂಬರ್ 2009 ರಂದು ಉದ್ಯಮಿ ರಾಜಕುಂದ್ರ ಅವರನ್ನು ವಿವಾಹವಾದ ಶಿಲ್ಪಾ ಶೆಟ್ಟಿ, ಅವರಿಗಿಂತ ಎರಡು ವರ್ಷ ಚಿಕ್ಕವರಾಗಿದ್ದಾರೆ.
ಕನ್ನಡದಲ್ಲಿ ರವಿಚಂದ್ರನ್ ಅವರೊಂದಿಗೆ ಜೋರ ಚಿತ್ತ ಚೋರ ಚಿತ್ರದಲ್ಲಿ ಅಭಿನಯಿಸಿದ ನಮ್ರತಾ ಶಿರೋಡ್ಕರ್, ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರನ್ನು ಪ್ರೀತಿಸಿ ವಿವಾಹವಾಗಿದ್ದಾರೆ. ಈ ಜೋಡಿಯನ್ನು ತೆಲುಗಿನಲ್ಲಿ ಮೋಸ್ಟ್ ಫೇವರಿಟ್ ಜೋಡಿ ಎಂದು ಕರೆಯುತ್ತಾರೆ. ಆದರೆ ವಿಶೇಷವೇನೆಂದರೆ ನಮ್ರತಾ ಅವರಿಗಿಂತ ಮಹೇಶ್ ಬಾಬು ಎರಡು ವರ್ಷ ಚಿಕ್ಕವರು.
ಮೂಲತಃ ಮಹಾರಾಷ್ಟ್ರದವರಾದ ನಟಿ ಸ್ನೇಹಾ, ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಚಿತ್ರರಂಗದಲ್ಲಿ ಅಭಿನಯಿಸಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ನಟ ಪ್ರಸನ್ನ ಅವರನ್ನು 2012 ರಲ್ಲಿ ವಿವಾಹವಾದ ಅವರು ಸುಖಕರ ಜೀವನ ನಡಸುತ್ತಿದ್ದು, ಪ್ರಸನ್ನ ಅವರು ಸ್ನೇಹಗಿಂತ ಒಂದು ವರುಷ ಚಿಕ್ಕವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್ ಇರಾಕ್…
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.