News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಪ್ರೇಮ, ಸ್ಪೂರ್ತಿ

ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

205

ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು ಅವರಿಬ್ಬರಿಗೂ ಅರಿವಾಗುತ್ತದೆ. ಸಚಿನ್ ಜೊತೆ ಮಾತನಾಡದೆ ಇರುವುದಕ್ಕೆ ಭವ್ಯಾಗೆ ಆಗದೆ ಇದ್ದ ಕಾರಣ ಮನೆಯವರಿಗೆ ತಿಳಿಯದಂತೆ ಸಚಿನ್ ನನ್ನ ಭೇಟಿ ಮಾಡಿ ಅವನ ಜೊತೆ ಮಾತನಾಡುತ್ತಿರುತ್ತಾಳೆ ಭವ್ಯಾ. ಇನ್ನು ಇಬ್ಬರ ನಡುವೆ ಪ್ರೀತಿ ಆರಂಭ ಆದಮೇಲೆ ಕೆಲಸಕ್ಕೆ ಸೇರಿಕೊಂಡ ಭವ್ಯಾಗೆ ಕೆಲವು ದಿನಗಳ ನಂತರ ತೀವ್ರವಾದ ಬೆನ್ನು ನೋವು ಕಾಣಿಸಿಕೊಳ್ಳುತ್ತದೆ.

ಬೆನ್ನು ನೋವು ಜಾಸ್ತಿ ಆದಕಾರಣ ಸಚಿನ್ ಜೊತೆ ಆಸ್ಪತ್ರೆಗೆ ಪರಿಶೀಲನೆ ಮಾಡಿದಾಗ ಭವ್ಯಾಗೆ ಕ್ಯಾನ್ಸರ್ ಇರುವುದು ಗೊತ್ತಾಗುತ್ತದೆ, ಇದನ್ನ ಕೇಳಿದ ಭವ್ಯಾ ಮತ್ತು ಸಚಿನ್ ಗೆ ಆಕಾಶವೇ ತಲೆಯ ಮೇಲೆ ಬಿದ್ದಂತೆ ಆಗುತ್ತದೆ. ಇನ್ನು ಈ ಸಮಯದಲ್ಲಿ ಭವ್ಯಾಗೆ ಧೈರ್ಯ ತುಂಬಿದ ಸಚಿನ್ ನಿನಗೆ ನಾನಿದ್ದೇನೆ, ಅದೆಷ್ಟೇ ಕಷ್ಟ ಆಗಲಿ ನಾನು ನಿನ್ನನ್ನ ಕಾಪಾಡಿಕೊಳ್ಳುತ್ತೇನೆ ನೀವು ಸ್ವಲ್ಪಾನು ಹೆದರಬೇಡ ಎಂದು ಭವ್ಯಾಳ ಕಷ್ಟಕ್ಕೆ ಹೆಗಲು ಕೊಟ್ಟ ಸಚಿನ್ ಆಕೆಗೆ ಧೈರ್ಯ ತುಂಬುತ್ತಾನೆ. ಇನ್ನು ಭವ್ಯಾ ಮನೆಗೆ ಗೊತ್ತಾಗದಂತೆ ಆಕೆಯನ್ನ ಪ್ರತಿ ವಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರಿಶೀಲನೆ ಮಾಡಿಸಿ ಆಕೆಗೆ ಪ್ರಾರ್ಥಮಿಕ ಚಿಕೆತ್ಸೆಯನ್ನ ಕೊಡಿಸುತ್ತಾನೆ ಸಚಿನ್, ಕೆಲವು ಸಮಯದ ನಂತರ ಈ ವಿಷಯ ಇಬ್ಬರ ಮನೆಯವರಿಗೆ ಗೊತ್ತಾಗಿ ಮನೆಯವರು ಆಘಾತಕ್ಕೆ ಒಳಗಾಗುತ್ತಾರೆ.

ಇನ್ನು ಸಚಿನ್ ಒಳ್ಳೆಯ ತನವನ್ನ ನೋಡಿದ ಭವ್ಯಾ ಮನೆಯವರು ಸಚಿನ್ ಗೆ ಕೈ ಎತ್ತಿ ನಮಸ್ಕಾರ ಮಾಡುತ್ತಾರೆ, ಭವ್ಯಾ ಮನೆಯವರು ತುಂಬಾ ಬಡವರಾಗಿದ್ದ ಕಾರಣ ಪ್ರತಿ ಕ್ಷಣ ಭವ್ಯಾ ಬಗ್ಗೆ ಚಿಂತೆ ಮಾಡಲು ಆರಂಭ ಮಾಡಿದ ಸಚಿನ್ MA ಮಾಡಬೇಕು ಅನ್ನುವ ತನ್ನ ಆಸೆಯನ್ನ ಬದಿಗಿಟ್ಟು ಭವ್ಯಾ ಚಿಕಿತ್ಸೆಗೆ ಹಣವನ್ನ ಒದಗಿಸಲು ಸಿಕ್ಕ ಸಿಕ್ಕಕಡೆ ಕೆಲಸವನ್ನ ಮಾಡುತ್ತಾನೆ ಮತ್ತು ಸಾಲವನ್ನ ಪಡೆಯುತ್ತಾನೆ. ಇನ್ನು ಸಮಯ ಇದ್ದಾಗ ಕೂಲಿ ಕೆಲಸಕ್ಕೆ ಹೋಗಿ ಕಷ್ಟಪಟ್ಟು ದುಡಿಯುತ್ತಾನೆ, ಇನ್ನು ಆಸ್ಪತ್ರೆಯಲ್ಲಿ ವಾರಗಟ್ಟಲೆ ಭವ್ಯಾ ಜೊತೆ ಇರಬೇಕಾಗಿದ್ದ ಕಾರಣ ಒಂದು ದಿನ ದೇವಸ್ಥಾನದಲ್ಲಿ ಸರಳವಾಗಿ ಭವ್ಯಳನ್ನ ಮದುವೆಯಾಗುತ್ತಾನೆ ಸಚಿನ್. ಇನ್ನು ಮದುವೆಯ ಸಮಯದಲ್ಲಿ ಬಂಧುಗಳು ಮತ್ತು ಸ್ನೇಹಿತರು ಸಚಿನ್ ಗೆ ಒಂದಷ್ಟು ಹಣದ ಸಹಾಯವನ್ನ ಮಾಡುತ್ತಾರೆ.

ಕೊನೆಗೆ ಆಸ್ಪತ್ರೆಗೆ ಬೇಕಾಗುವಷ್ಟು ಹಣವನ್ನ ಶೇಖರಣೆ ಮಾಡುತ್ತಾನೆ ಸಚಿನ್, ಇನ್ನು ಭವ್ಯಾ ಆಪರೇಷನ್ ಗೆ ಒಳಗಾಗುವ ಸಚಿನ್ ಹೇಳಿದ ಕೊನೆಯ ಮಾತು ಏನು ಎಂದು ತಿಳಿದರೆ ನಿಮಗೂ ಕೂಡ ಕಣ್ಣಲ್ಲಿ ನೀರು ಬರುತ್ತದೆ. ಹೌದು ಸಚಿನ್ ಕೊನೆಯದಾಗಿ ಹೇಳಿದ್ದು ಏನು ಅಂದರೆ ನಾಳೆಯ ಬಗ್ಗೆ ನನಗೆ ಅರಿವಿಲ್ಲ ಆದರೆ ನನಗೆ ಭವ್ಯಾ ವಾಪಾಸ್ ಬೇಕು ಅಷ್ಟೇ ಮತ್ತು ಅದಕ್ಕಾಗಿ ನಾನು ಏನು ಮಾಡಲು ಕೂಡ ಸಿದ್ದ ಎಂದು ಹೇಳಿ ಕಣ್ಣೀರು ಹಾಕುತ್ತಾನೆ. ದೇವರ ಆಶೀರ್ವಾದ ಇವರಿಬ್ಬರ ಮೇಲೆ ಇದೆ ಎಂದು ಕಾಣುತ್ತದೆ, ಹೌದು ಭವ್ಯಾ ಮಾರಕ ಖಾಯಿಲೆಯನ್ನ ಗೆದ್ದು ಬಂದಿದ್ದಾಳೆ, ಸ್ನೇಹಿತರೆ ಪ್ರೀತಿ ಅಂದರೆ ಆಕರ್ಷಣೆ ಅಲ್ಲ ಮತ್ತು ಪ್ರೀತಿ ಅಂದರೆ ಧೈರ್ಯ ಎಂದು ಸಾರಿದ ಸಚಿನ್ ನ ಒಳ್ಳೆತನ ಮತ್ತು ಇವರಿಬ್ಬರ ಪ್ರೀತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿರೋ 7 ವರ್ಷದ ಪುಟ್ಟ ಬಾಲಕನೊಬ್ಬನ ಕಥೆ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್‍ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್‍ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.

  • ಸುದ್ದಿ

    ಮಧುಮಗಳಿಲ್ಲದೆ ಮದುವೆ ಮಾಡಿ ಮಗನ ಕನಸನ್ನು ನನಸು ಮಾಡಿದ ಪೋಷಕರು…!

    ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ಭವಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • ಸುದ್ದಿ

    ಹೊಟ್ಟೆಯ ಬೊಜ್ಜು ಕರಗಿಸುವಂತಹ ಸುಲಭ ಉಪಾಯಗಳು,.ಇದನ್ನೊಮ್ಮೆ ಅನುಸರಿಸಿ ನೋಡಿ,.!

    ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್​ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…