News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಪ್ರೇಮ, ಸ್ಪೂರ್ತಿ

ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

206

ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು ಅವರಿಬ್ಬರಿಗೂ ಅರಿವಾಗುತ್ತದೆ. ಸಚಿನ್ ಜೊತೆ ಮಾತನಾಡದೆ ಇರುವುದಕ್ಕೆ ಭವ್ಯಾಗೆ ಆಗದೆ ಇದ್ದ ಕಾರಣ ಮನೆಯವರಿಗೆ ತಿಳಿಯದಂತೆ ಸಚಿನ್ ನನ್ನ ಭೇಟಿ ಮಾಡಿ ಅವನ ಜೊತೆ ಮಾತನಾಡುತ್ತಿರುತ್ತಾಳೆ ಭವ್ಯಾ. ಇನ್ನು ಇಬ್ಬರ ನಡುವೆ ಪ್ರೀತಿ ಆರಂಭ ಆದಮೇಲೆ ಕೆಲಸಕ್ಕೆ ಸೇರಿಕೊಂಡ ಭವ್ಯಾಗೆ ಕೆಲವು ದಿನಗಳ ನಂತರ ತೀವ್ರವಾದ ಬೆನ್ನು ನೋವು ಕಾಣಿಸಿಕೊಳ್ಳುತ್ತದೆ.

ಬೆನ್ನು ನೋವು ಜಾಸ್ತಿ ಆದಕಾರಣ ಸಚಿನ್ ಜೊತೆ ಆಸ್ಪತ್ರೆಗೆ ಪರಿಶೀಲನೆ ಮಾಡಿದಾಗ ಭವ್ಯಾಗೆ ಕ್ಯಾನ್ಸರ್ ಇರುವುದು ಗೊತ್ತಾಗುತ್ತದೆ, ಇದನ್ನ ಕೇಳಿದ ಭವ್ಯಾ ಮತ್ತು ಸಚಿನ್ ಗೆ ಆಕಾಶವೇ ತಲೆಯ ಮೇಲೆ ಬಿದ್ದಂತೆ ಆಗುತ್ತದೆ. ಇನ್ನು ಈ ಸಮಯದಲ್ಲಿ ಭವ್ಯಾಗೆ ಧೈರ್ಯ ತುಂಬಿದ ಸಚಿನ್ ನಿನಗೆ ನಾನಿದ್ದೇನೆ, ಅದೆಷ್ಟೇ ಕಷ್ಟ ಆಗಲಿ ನಾನು ನಿನ್ನನ್ನ ಕಾಪಾಡಿಕೊಳ್ಳುತ್ತೇನೆ ನೀವು ಸ್ವಲ್ಪಾನು ಹೆದರಬೇಡ ಎಂದು ಭವ್ಯಾಳ ಕಷ್ಟಕ್ಕೆ ಹೆಗಲು ಕೊಟ್ಟ ಸಚಿನ್ ಆಕೆಗೆ ಧೈರ್ಯ ತುಂಬುತ್ತಾನೆ. ಇನ್ನು ಭವ್ಯಾ ಮನೆಗೆ ಗೊತ್ತಾಗದಂತೆ ಆಕೆಯನ್ನ ಪ್ರತಿ ವಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರಿಶೀಲನೆ ಮಾಡಿಸಿ ಆಕೆಗೆ ಪ್ರಾರ್ಥಮಿಕ ಚಿಕೆತ್ಸೆಯನ್ನ ಕೊಡಿಸುತ್ತಾನೆ ಸಚಿನ್, ಕೆಲವು ಸಮಯದ ನಂತರ ಈ ವಿಷಯ ಇಬ್ಬರ ಮನೆಯವರಿಗೆ ಗೊತ್ತಾಗಿ ಮನೆಯವರು ಆಘಾತಕ್ಕೆ ಒಳಗಾಗುತ್ತಾರೆ.

ಇನ್ನು ಸಚಿನ್ ಒಳ್ಳೆಯ ತನವನ್ನ ನೋಡಿದ ಭವ್ಯಾ ಮನೆಯವರು ಸಚಿನ್ ಗೆ ಕೈ ಎತ್ತಿ ನಮಸ್ಕಾರ ಮಾಡುತ್ತಾರೆ, ಭವ್ಯಾ ಮನೆಯವರು ತುಂಬಾ ಬಡವರಾಗಿದ್ದ ಕಾರಣ ಪ್ರತಿ ಕ್ಷಣ ಭವ್ಯಾ ಬಗ್ಗೆ ಚಿಂತೆ ಮಾಡಲು ಆರಂಭ ಮಾಡಿದ ಸಚಿನ್ MA ಮಾಡಬೇಕು ಅನ್ನುವ ತನ್ನ ಆಸೆಯನ್ನ ಬದಿಗಿಟ್ಟು ಭವ್ಯಾ ಚಿಕಿತ್ಸೆಗೆ ಹಣವನ್ನ ಒದಗಿಸಲು ಸಿಕ್ಕ ಸಿಕ್ಕಕಡೆ ಕೆಲಸವನ್ನ ಮಾಡುತ್ತಾನೆ ಮತ್ತು ಸಾಲವನ್ನ ಪಡೆಯುತ್ತಾನೆ. ಇನ್ನು ಸಮಯ ಇದ್ದಾಗ ಕೂಲಿ ಕೆಲಸಕ್ಕೆ ಹೋಗಿ ಕಷ್ಟಪಟ್ಟು ದುಡಿಯುತ್ತಾನೆ, ಇನ್ನು ಆಸ್ಪತ್ರೆಯಲ್ಲಿ ವಾರಗಟ್ಟಲೆ ಭವ್ಯಾ ಜೊತೆ ಇರಬೇಕಾಗಿದ್ದ ಕಾರಣ ಒಂದು ದಿನ ದೇವಸ್ಥಾನದಲ್ಲಿ ಸರಳವಾಗಿ ಭವ್ಯಳನ್ನ ಮದುವೆಯಾಗುತ್ತಾನೆ ಸಚಿನ್. ಇನ್ನು ಮದುವೆಯ ಸಮಯದಲ್ಲಿ ಬಂಧುಗಳು ಮತ್ತು ಸ್ನೇಹಿತರು ಸಚಿನ್ ಗೆ ಒಂದಷ್ಟು ಹಣದ ಸಹಾಯವನ್ನ ಮಾಡುತ್ತಾರೆ.

ಕೊನೆಗೆ ಆಸ್ಪತ್ರೆಗೆ ಬೇಕಾಗುವಷ್ಟು ಹಣವನ್ನ ಶೇಖರಣೆ ಮಾಡುತ್ತಾನೆ ಸಚಿನ್, ಇನ್ನು ಭವ್ಯಾ ಆಪರೇಷನ್ ಗೆ ಒಳಗಾಗುವ ಸಚಿನ್ ಹೇಳಿದ ಕೊನೆಯ ಮಾತು ಏನು ಎಂದು ತಿಳಿದರೆ ನಿಮಗೂ ಕೂಡ ಕಣ್ಣಲ್ಲಿ ನೀರು ಬರುತ್ತದೆ. ಹೌದು ಸಚಿನ್ ಕೊನೆಯದಾಗಿ ಹೇಳಿದ್ದು ಏನು ಅಂದರೆ ನಾಳೆಯ ಬಗ್ಗೆ ನನಗೆ ಅರಿವಿಲ್ಲ ಆದರೆ ನನಗೆ ಭವ್ಯಾ ವಾಪಾಸ್ ಬೇಕು ಅಷ್ಟೇ ಮತ್ತು ಅದಕ್ಕಾಗಿ ನಾನು ಏನು ಮಾಡಲು ಕೂಡ ಸಿದ್ದ ಎಂದು ಹೇಳಿ ಕಣ್ಣೀರು ಹಾಕುತ್ತಾನೆ. ದೇವರ ಆಶೀರ್ವಾದ ಇವರಿಬ್ಬರ ಮೇಲೆ ಇದೆ ಎಂದು ಕಾಣುತ್ತದೆ, ಹೌದು ಭವ್ಯಾ ಮಾರಕ ಖಾಯಿಲೆಯನ್ನ ಗೆದ್ದು ಬಂದಿದ್ದಾಳೆ, ಸ್ನೇಹಿತರೆ ಪ್ರೀತಿ ಅಂದರೆ ಆಕರ್ಷಣೆ ಅಲ್ಲ ಮತ್ತು ಪ್ರೀತಿ ಅಂದರೆ ಧೈರ್ಯ ಎಂದು ಸಾರಿದ ಸಚಿನ್ ನ ಒಳ್ಳೆತನ ಮತ್ತು ಇವರಿಬ್ಬರ ಪ್ರೀತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಫಲಗಳು ಹೇಗಿವೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • ಸುದ್ದಿ

    ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ ಸುಮಲತಾರವರು, ಸಿದ್ದರಾಮಯ್ಯನವರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ರು.!?

    ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್‍ ನ ಬ್ಲಾಕ್‍ ಮೇಲ್‍ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • ಆಧ್ಯಾತ್ಮ

    ಧ್ಯಾನ ಮಾಡೋದ್ರಿಂದ ಏನೆಲ್ಲಾ ಚಮತ್ಕಾರ ಆಗುತ್ತೆ ಗೊತ್ತಾ!ಹಾಗಾದ್ರೆ ಧ್ಯಾನ ಹೇಗೆ ಮಾಡಬೇಕು,ಹೇಗೆ ಮಾಡಬಾರದು?ತಿಳಿಯಲು ಈ ಲೇಖನಿ ಓದಿ…

    ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…