ಸುದ್ದಿ

ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

78

ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ರೇಷನ್ ಪೂರೈಕೆ ಮಾಡುತ್ತದೆ ಎಂಬ ಭರವಸೆ ಇದೆ ಎಂದು ಹೇಳಿದರು.

ಖಾದರ್ ಆರೋಪ ಏನು?:
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಮಾಜಿ ಸಚಿವ ಯು.ಟಿ.ಖಾದರ್ ಅವರು, ಸಿದ್ದಗಂಗಾ ಮಠದ ಒಟ್ಟು 7,359 ವಿದ್ಯಾರ್ಥಿಗಳಿಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ 73,590 ಕೆಜಿ ಅಕ್ಕಿ ಹಾಗೂ 36,795 ಕೆಜಿ ಗೋಧಿ ವಿತರಣೆ ಮಾಡುತ್ತಿತ್ತು. ದಾಸೋಹ ಯೋಜನೆ ಅಡಿ ಸಿದ್ದಗಂಗಾ ಮಠದ ವಿದ್ಯಾರ್ಥಿಗಳಿಗೂ ಅಕ್ಕಿ, ಗೋಧಿ ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರವು ಕಳೆದ ಮೂರು ತಿಂಗಳಿಂದ ಮಠಕ್ಕೆ ನೀಡುತ್ತಿದ್ದ ಅಕ್ಕಿಯನ್ನು ತಡೆ ಹಿಡಿದಿದೆ ಎಂದು ಆರೋಪಿಸಿದ್ದರು. ಜೊತೆಗೆ ಪ್ರಮುಖ ದಾಖಲೆ ಬಿಡುಗಡೆ ಮಾಡಿದ್ದರು.

ತುಮಕೂರು ಸಿದ್ದಗಂಗಾ ಮಠದಲ್ಲಿ ಸಾಕಷ್ಟು ಜನರು ವಸತಿ ಪಡೆದು ಶಿಕ್ಷಣ ಪಡೆಯುತ್ತಿದ್ದಾರೆ. ಹೀಗಾಗಿ ಅಂತಹ ಶಿಕ್ಷಣ ಸಂಸ್ಥೆಗಳಿಗೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವಿವಿಧ ಸಂಘಗಳ ಸಹಭಾಗಿತ್ವದಲ್ಲಿ ಅಕ್ಕಿ, ಗೋಧಿ ವಿತರಿಸುತ್ತಿತ್ತು. ಇದರಿಂದ ಸಂಸ್ಥೆಗಳಿಗೆ ಹೆಚ್ಚು ಅನುಕೂಲವಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಏಕಾಏಕಿ ಸಿದ್ದಗಂಗಾ ಮಠ ಹಾಗೂ ವಿವಿಧ ಸಂಸ್ಥೆಗಳಿಗೆ ವಿತರಿಸುತ್ತಿದ್ದ ಅಕ್ಕಿ ಹಾಗೂ ಗೋಧಿಯನ್ನು ನಿಲ್ಲಿಸಿದೆ ಎಂದು ದೂರಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

    ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…

  • ಸಿನಿಮಾ

    ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ, ಶಾಕ್ ಆಗ್ತೀರಾ !!!

    ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್‍ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ಸುದ್ದಿ

    ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

    ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…

  • ಉಪಯುಕ್ತ ಮಾಹಿತಿ

    ಕನ್ಯಾದಾನ ಯೋಜನೆ ಅಡಿಯಲ್ಲಿ ದಿನಾಲೂ 121 ರೂಪಾಯಿ ಇನ್ವೆಸ್ಟ್ಮೆಂಟ್ ಮಾಡಿದ್ರೆ ಸಿಗುತ್ತೆ 27 ಲಕ್ಷ ರೂಪಾಯಿಗಳು..!

    ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…

  • ಹಣ ಕಾಸು

    ತನ್ನ 6ನೇ ವಯಸ್ಸಿಗೆ ಈ ಬಾಲಕ ಕೋಟಿಗಳ ಸಂಪಾದನೆ ಮಾಡಿದ್ದು ಹೇಗೆ..?ಈ ಪೋರನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!

    ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.