ಸುದ್ದಿ

ದಿನಾ ಒಂದು ಗ್ಲಾಸ್ ಈ ಹಾಲನ್ನು ಕುಡಿದರೆ ಸಾಕು ನಿಮ್ಮೆಲ್ಲಾ ಕಾಯಿಲೆಗಳು ಇನ್ನು ದೂರ,.!

69

ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ

ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಎಲ್ಲಾ ಕಲ್ಮಶಗಳಿಂದ ರಕ್ತನಾಳಗಳು ಮತ್ತು ದುಗ್ಧರಸ ವ್ಯವಸ್ಥೆ(ಲಿಂಫ್ಯಾಟಿಕ್ ಸಿಸ್ಟಮ್)ಯನ್ನು ಶುದ್ಧಗೊಳಿಸುತ್ತದೆ.

ಕ್ಯಾನ್ಸರ್ ತಡೆಗಟ್ಟುತ್ತದೆ : ಅರಿಶಿನ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಬಹುದು. ಅರಿಶಿನದಲ್ಲಿರುವ ‘ಕರ್ಕ್ಯುಮಿನ್ ‘ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆ ಹೆಚ್ಚಿಸುತ್ತದೆ :ಅರಿಶಿನದ ಹಾಲು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹೊಟ್ಟೆಯ ಹುಣ್ಣು ಮತ್ತು ಅತಿಸಾರವನ್ನು ತಡೆಯುತ್ತದೆ. ಹೊಟ್ಟೆಯುಬ್ಬರ ,ಎದೆಯುರಿ, ಇತರ ಜಠರಗರುಳಿನ ಸೋಂಕುಗಳಿದ್ದರೆ ಪ್ರತಿದಿನ ಅರಿಶಿನವನ್ನು ಒಂದು ಕಪ್ ಹಾಲಿಗೆ ಸೇರಿಸಿ ಕುಡಿಯಿರಿ.

ಸಮಯಕ್ಕೆ ಸರಿಯಾಗಿ ಋತುಚಕ್ರ : ಅರಿಶಿನದ ಹಾಲು ಕುಡಿಯುತ್ತಿದ್ದರೆ ಮುಟ್ಟಿನ ನೋವು ಶಮನಗೊಂಡು, ಋತುಚಕ್ರ ಸಮಯಕ್ಕೆ ಸರಿಯಾಗಿ ಆಗುತ್ತದೆ. ಜೊತೆಗೆ, ಲ್ಯುಕೋರಿಯಾ, ಎಂಡೊಮೆಟ್ರಿಯೊಸಿಸ್, ಫೈಬ್ರಾಯ್ಡ್ಸ್ ಮತ್ತು ಹಾರ್ಮೋನುಗಳಲ್ಲಿ ಅಸಮತೋಲನ ಹೊಂದಿರುವ ಮಹಿಳೆಯರಿಗೂ ಅರಿಶಿನ ಹಾಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.

ಕೆಮ್ಮು ಮತ್ತು ಶೀತಕ್ಕೆ ಪರಿಹಾರ : ಅರಿಶಿನ ಹಾಲು ಆಂಟಿವೈರಲ್ ಮತ್ತು ಆಂಟಿಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿರುವುದರಿಂದ ಕೆಮ್ಮು ಮತ್ತು ಶೀತವನ್ನು ಹೋಗಲಾಡಿಸುತ್ತದೆ. ಗಂಟಲು ನೋಯುತ್ತಿದ್ದರೆ ಅರಿಶಿನ ಹಾಲನ್ನು ಕುಡಿಯಿರಿ.

ಉಸಿರಾಟದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ : ಅರಿಶಿನದ ಹಾಲು ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಅಸ್ತಮಾ, ಬ್ರಾಂಕೈಟಿಸ್‌ಗೆ ಪರಿಣಾಮಕಾರಿ ಪರಿಹಾರವಾಗಿದೆ. ಸೈನಸ್ ಮತ್ತು ಶ್ವಾಸಕೋಶದ ಸಮಸ್ಯೆಯಿದ್ದರೂ ಪರಿಹಾರ ನೀಡುತ್ತದೆ.

ತೂಕ ಕಡಿಮೆಯಾಗುತ್ತದೆ : ಹೌದು, ಅರಿಶಿನ ಹಾಲು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ! ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಸರಿಯಾಗಿ ನಿದ್ರೆ ಬರಲು : ನಿದ್ರೆ ಸರಿಯಾಗಿ ಬರದಿದ್ದರೆ ಅರಿಶಿನ ಹಾಲು ಕುಡಿಯಿರಿ. ಮಲಗುವ ಮೊದಲು ಅರಿಶಿನ ಹಾಲು ಕುಡಿದರೆ ವಿಶ್ರಾಂತಿ ಸಿಗುತ್ತದೆ. ಮನಸ್ಸು ಶಾಂತಗೊಂಡು ನಿದ್ರೆ ಬರುತ್ತದೆ.

ಕೀಲು ನೋವು ನಿವಾರಣೆ : ಅರಿಶಿನವನ್ನು ಆಯುರ್ವೇದದಲ್ಲಿ ‘ನೈಸರ್ಗಿಕ ಆಸ್ಪಿರಿನ್’ಎಂದು ಕರೆಯುತ್ತಾರೆ. ಇದು ಎಲ್ಲಾ ರೀತಿಯ ನೋವನ್ನು ನಿವಾರಿಸುತ್ತದೆ. ಅರಿಶಿನ ಹಾಲಿನಲ್ಲಿ ಕ್ಯಾಲ್ಸಿಯಂ ಇರುವುದರಿಂದ ಕೀಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮೂಳೆಗಳನ್ನು ಆರೋಗ್ಯವಾಗಿರಿಸುತ್ತದೆ. ಈ ಹಾಲನ್ನು ಪ್ರತಿದಿನ ಸೇವಿಸುವುದರಿಂದ ಭವಿಷ್ಯದಲ್ಲಿ ಆಸ್ಟಿಯೊಪೊರೋಸಿಸ್ ಮತ್ತು ಸಂಧಿವಾತ ಬರುವುದನ್ನು ತಪ್ಪಿಸಬಹುದು.

ಚರ್ಮಕ್ಕೆ ಹೊಳಪು ನೀಡುತ್ತದೆ : ಅರಿಶಿನದ ಹಾಲು ಮೊಡವೆ, ಎಸ್ಜಿಮಾ, ಇತರ ಚರ್ಮದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಚರ್ಮದಲ್ಲಿ ಮೂಡಿರುವ ಸುಕ್ಕುಗಳನ್ನು ತೆಗೆದು, ನೈಸರ್ಗಿಕವಾಗಿ ಹೊಳೆಯಲು ಸಹಾಯ ಮಾಡುತ್ತದೆ.

ಅರಿಶಿನ ಹಾಲಿನ ಅಡ್ಡಪರಿಣಾಮಗಳು :

* ನಿಮಗೆ ಮೂತ್ರಪಿಂಡದ ಸಮಸ್ಯೆಗಳಿದ್ದರೆ ದಯವಿಟ್ಟು ಅರಿಶಿನದ ಹಾಲು ಕುಡಿಯಬೇಡಿ.

*ಹೆಚ್ಚು ಅರಿಶಿನ ಸೇವನೆಯಿಂದ ದೇಹ ಕಬ್ಬಿಣದಂಶವನ್ನು ಹೀರಿಕೊಳ್ಳಲು ಅಡ್ಡಿಯಾಗಬಹುದು. ಕಬ್ಬಿಣದಂಶವಿರುವ ಆಹಾರವನ್ನು ಸೇವಿಸದ ಜನರಲ್ಲಿ ಕಬ್ಬಿಣದ ಕೊರತೆಗೆ ಕಾರಣವಾಗಬಹುದು.

*ನೀವು ಈಗಾಗಲೇ ಮಧುಮೇಹ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ಹಾಲು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತುಂಬಾ ಕಡಿಮೆ ಮಾಡಬಹುದು. ನೀವು ಮಧುಮೇಹ ರೋಗಿಯಾಗಿದ್ದರೆ ಅರಿಶಿನ ಹಾಲನ್ನು ಸೇವಿಸುವ ಮೊದಲು ದಯವಿಟ್ಟು ನಿಮ್ಮ ವೈದ್ಯರನ್ನು ಪರೀಕ್ಷಿಸಿ.

ಅರಿಶಿನ ಹಾಲು ತಯಾರಿಸುವುದು ಹೇಗೆ?

 ಬೇಕಾಗುವ ಪದಾರ್ಥಗಳು : 1 ಟೀ ಚಮಚ ಅರಿಶಿನ, ಹಾಲು ½ ಕಪ್, 1ಟೀ ಚಮಚ ದಾಲ್ಚಿನ್ನಿ ಪುಡಿ, 1ಟೀ ಚಮಚ ಶುಂಠಿ ಪುಡಿಕಾಳುಮೆಣಸಿನಪುಡಿ ಚಿಟಿಕೆಯಷ್ಟು, 1ಟೀಸ್ಪೂನ್ ಜೇನುತುಪ್ಪ. ಮಾಡುವ ವಿಧಾನ :ಒಂದು ಪಾತ್ರೆಯಲ್ಲಿ ಮೇಲೆ ಹೇಳಿದ ಎಲ್ಲಾ ಪದಾರ್ಥಗಳನ್ನು ಬೆರೆಸಿ ಕುದಿಸಿರಿ ನಂತರ ಕಡಿಮೆ ಮಾಡಿ ಉರಿಯಲ್ಲಿ 10 ನಿಮಿಷಗಳ ಕಾಲ ಕುದಿಸಿ. ಸೋಸಿ, ಇದಕ್ಕೆ ಚಿಟಿಕೆಯಷ್ಟು ದಾಲ್ಚಿನ್ನಿ ಸೇರಿಸಿ ಕುಡಿಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮಿಷ್ಟದ ದೇವರನ್ನು ನೆನಯುತ್ತಾ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಆಧ್ಯಾತ್ಮ, ಜ್ಯೋತಿಷ್ಯ

    ದೀಪಾವಳಿ ಹಬ್ಬದ ಆರಂಭದೊಂದಿಗೆ 28-10-19 ರಿಂದ 4-11-19 ಈ ರಾಶಿಯವರಿಗೆ ರಾಜಯೋಗ ಶುರುವಾಗಲಿದೆ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ  ಇಂದು ಆರೋಗ್ಯ…

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • ಸುದ್ದಿ

    ವಾಹನ ಚಾಲಕರಿಗೆ ಹೊಸ ರೂಲ್ಸ್…..ಏನೆಂದು ತಿಳಿಯಿರಿ?

    ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…

  • ಸುದ್ದಿ

    ವಿದ್ಯುತ್ ದರ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆ…ಕಾರಣ?

    ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….