ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ

ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಎಲ್ಲಾ ಕಲ್ಮಶಗಳಿಂದ ರಕ್ತನಾಳಗಳು ಮತ್ತು ದುಗ್ಧರಸ ವ್ಯವಸ್ಥೆ(ಲಿಂಫ್ಯಾಟಿಕ್ ಸಿಸ್ಟಮ್)ಯನ್ನು ಶುದ್ಧಗೊಳಿಸುತ್ತದೆ.
ಕ್ಯಾನ್ಸರ್ ತಡೆಗಟ್ಟುತ್ತದೆ : ಅರಿಶಿನ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಬಹುದು. ಅರಿಶಿನದಲ್ಲಿರುವ ‘ಕರ್ಕ್ಯುಮಿನ್ ‘ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ.
ಜೀರ್ಣಕ್ರಿಯೆ ಹೆಚ್ಚಿಸುತ್ತದೆ :ಅರಿಶಿನದ ಹಾಲು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹೊಟ್ಟೆಯ ಹುಣ್ಣು ಮತ್ತು ಅತಿಸಾರವನ್ನು ತಡೆಯುತ್ತದೆ. ಹೊಟ್ಟೆಯುಬ್ಬರ ,ಎದೆಯುರಿ, ಇತರ ಜಠರಗರುಳಿನ ಸೋಂಕುಗಳಿದ್ದರೆ ಪ್ರತಿದಿನ ಅರಿಶಿನವನ್ನು ಒಂದು ಕಪ್ ಹಾಲಿಗೆ ಸೇರಿಸಿ ಕುಡಿಯಿರಿ.
ಸಮಯಕ್ಕೆ ಸರಿಯಾಗಿ ಋತುಚಕ್ರ : ಅರಿಶಿನದ ಹಾಲು ಕುಡಿಯುತ್ತಿದ್ದರೆ ಮುಟ್ಟಿನ ನೋವು ಶಮನಗೊಂಡು, ಋತುಚಕ್ರ ಸಮಯಕ್ಕೆ ಸರಿಯಾಗಿ ಆಗುತ್ತದೆ. ಜೊತೆಗೆ, ಲ್ಯುಕೋರಿಯಾ, ಎಂಡೊಮೆಟ್ರಿಯೊಸಿಸ್, ಫೈಬ್ರಾಯ್ಡ್ಸ್ ಮತ್ತು ಹಾರ್ಮೋನುಗಳಲ್ಲಿ ಅಸಮತೋಲನ ಹೊಂದಿರುವ ಮಹಿಳೆಯರಿಗೂ ಅರಿಶಿನ ಹಾಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.

ಕೆಮ್ಮು ಮತ್ತು ಶೀತಕ್ಕೆ ಪರಿಹಾರ : ಅರಿಶಿನ ಹಾಲು ಆಂಟಿವೈರಲ್ ಮತ್ತು ಆಂಟಿಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿರುವುದರಿಂದ ಕೆಮ್ಮು ಮತ್ತು ಶೀತವನ್ನು ಹೋಗಲಾಡಿಸುತ್ತದೆ. ಗಂಟಲು ನೋಯುತ್ತಿದ್ದರೆ ಅರಿಶಿನ ಹಾಲನ್ನು ಕುಡಿಯಿರಿ.
ಉಸಿರಾಟದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ : ಅರಿಶಿನದ ಹಾಲು ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಅಸ್ತಮಾ, ಬ್ರಾಂಕೈಟಿಸ್ಗೆ ಪರಿಣಾಮಕಾರಿ ಪರಿಹಾರವಾಗಿದೆ. ಸೈನಸ್ ಮತ್ತು ಶ್ವಾಸಕೋಶದ ಸಮಸ್ಯೆಯಿದ್ದರೂ ಪರಿಹಾರ ನೀಡುತ್ತದೆ.

ತೂಕ ಕಡಿಮೆಯಾಗುತ್ತದೆ : ಹೌದು, ಅರಿಶಿನ ಹಾಲು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ! ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.
ಸರಿಯಾಗಿ ನಿದ್ರೆ ಬರಲು : ನಿದ್ರೆ ಸರಿಯಾಗಿ ಬರದಿದ್ದರೆ ಅರಿಶಿನ ಹಾಲು ಕುಡಿಯಿರಿ. ಮಲಗುವ ಮೊದಲು ಅರಿಶಿನ ಹಾಲು ಕುಡಿದರೆ ವಿಶ್ರಾಂತಿ ಸಿಗುತ್ತದೆ. ಮನಸ್ಸು ಶಾಂತಗೊಂಡು ನಿದ್ರೆ ಬರುತ್ತದೆ.

ಕೀಲು ನೋವು ನಿವಾರಣೆ : ಅರಿಶಿನವನ್ನು ಆಯುರ್ವೇದದಲ್ಲಿ ‘ನೈಸರ್ಗಿಕ ಆಸ್ಪಿರಿನ್’ಎಂದು ಕರೆಯುತ್ತಾರೆ. ಇದು ಎಲ್ಲಾ ರೀತಿಯ ನೋವನ್ನು ನಿವಾರಿಸುತ್ತದೆ. ಅರಿಶಿನ ಹಾಲಿನಲ್ಲಿ ಕ್ಯಾಲ್ಸಿಯಂ ಇರುವುದರಿಂದ ಕೀಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮೂಳೆಗಳನ್ನು ಆರೋಗ್ಯವಾಗಿರಿಸುತ್ತದೆ. ಈ ಹಾಲನ್ನು ಪ್ರತಿದಿನ ಸೇವಿಸುವುದರಿಂದ ಭವಿಷ್ಯದಲ್ಲಿ ಆಸ್ಟಿಯೊಪೊರೋಸಿಸ್ ಮತ್ತು ಸಂಧಿವಾತ ಬರುವುದನ್ನು ತಪ್ಪಿಸಬಹುದು.
ಚರ್ಮಕ್ಕೆ ಹೊಳಪು ನೀಡುತ್ತದೆ : ಅರಿಶಿನದ ಹಾಲು ಮೊಡವೆ, ಎಸ್ಜಿಮಾ, ಇತರ ಚರ್ಮದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಚರ್ಮದಲ್ಲಿ ಮೂಡಿರುವ ಸುಕ್ಕುಗಳನ್ನು ತೆಗೆದು, ನೈಸರ್ಗಿಕವಾಗಿ ಹೊಳೆಯಲು ಸಹಾಯ ಮಾಡುತ್ತದೆ.

ಅರಿಶಿನ ಹಾಲಿನ ಅಡ್ಡಪರಿಣಾಮಗಳು :
* ನಿಮಗೆ ಮೂತ್ರಪಿಂಡದ ಸಮಸ್ಯೆಗಳಿದ್ದರೆ ದಯವಿಟ್ಟು ಅರಿಶಿನದ ಹಾಲು ಕುಡಿಯಬೇಡಿ.
*ಹೆಚ್ಚು ಅರಿಶಿನ ಸೇವನೆಯಿಂದ ದೇಹ ಕಬ್ಬಿಣದಂಶವನ್ನು ಹೀರಿಕೊಳ್ಳಲು ಅಡ್ಡಿಯಾಗಬಹುದು. ಕಬ್ಬಿಣದಂಶವಿರುವ ಆಹಾರವನ್ನು ಸೇವಿಸದ ಜನರಲ್ಲಿ ಕಬ್ಬಿಣದ ಕೊರತೆಗೆ ಕಾರಣವಾಗಬಹುದು.
*ನೀವು ಈಗಾಗಲೇ ಮಧುಮೇಹ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ಹಾಲು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತುಂಬಾ ಕಡಿಮೆ ಮಾಡಬಹುದು. ನೀವು ಮಧುಮೇಹ ರೋಗಿಯಾಗಿದ್ದರೆ ಅರಿಶಿನ ಹಾಲನ್ನು ಸೇವಿಸುವ ಮೊದಲು ದಯವಿಟ್ಟು ನಿಮ್ಮ ವೈದ್ಯರನ್ನು ಪರೀಕ್ಷಿಸಿ.
ಅರಿಶಿನ ಹಾಲು ತಯಾರಿಸುವುದು ಹೇಗೆ?
ಬೇಕಾಗುವ ಪದಾರ್ಥಗಳು : 1 ಟೀ ಚಮಚ ಅರಿಶಿನ, ಹಾಲು ½ ಕಪ್, 1ಟೀ ಚಮಚ ದಾಲ್ಚಿನ್ನಿ ಪುಡಿ, 1ಟೀ ಚಮಚ ಶುಂಠಿ ಪುಡಿಕಾಳುಮೆಣಸಿನಪುಡಿ ಚಿಟಿಕೆಯಷ್ಟು, 1ಟೀಸ್ಪೂನ್ ಜೇನುತುಪ್ಪ. ಮಾಡುವ ವಿಧಾನ :ಒಂದು ಪಾತ್ರೆಯಲ್ಲಿ ಮೇಲೆ ಹೇಳಿದ ಎಲ್ಲಾ ಪದಾರ್ಥಗಳನ್ನು ಬೆರೆಸಿ ಕುದಿಸಿರಿ ನಂತರ ಕಡಿಮೆ ಮಾಡಿ ಉರಿಯಲ್ಲಿ 10 ನಿಮಿಷಗಳ ಕಾಲ ಕುದಿಸಿ. ಸೋಸಿ, ಇದಕ್ಕೆ ಚಿಟಿಕೆಯಷ್ಟು ದಾಲ್ಚಿನ್ನಿ ಸೇರಿಸಿ ಕುಡಿಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…
ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…