ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ

ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಎಲ್ಲಾ ಕಲ್ಮಶಗಳಿಂದ ರಕ್ತನಾಳಗಳು ಮತ್ತು ದುಗ್ಧರಸ ವ್ಯವಸ್ಥೆ(ಲಿಂಫ್ಯಾಟಿಕ್ ಸಿಸ್ಟಮ್)ಯನ್ನು ಶುದ್ಧಗೊಳಿಸುತ್ತದೆ.
ಕ್ಯಾನ್ಸರ್ ತಡೆಗಟ್ಟುತ್ತದೆ : ಅರಿಶಿನ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಬಹುದು. ಅರಿಶಿನದಲ್ಲಿರುವ ‘ಕರ್ಕ್ಯುಮಿನ್ ‘ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ.
ಜೀರ್ಣಕ್ರಿಯೆ ಹೆಚ್ಚಿಸುತ್ತದೆ :ಅರಿಶಿನದ ಹಾಲು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹೊಟ್ಟೆಯ ಹುಣ್ಣು ಮತ್ತು ಅತಿಸಾರವನ್ನು ತಡೆಯುತ್ತದೆ. ಹೊಟ್ಟೆಯುಬ್ಬರ ,ಎದೆಯುರಿ, ಇತರ ಜಠರಗರುಳಿನ ಸೋಂಕುಗಳಿದ್ದರೆ ಪ್ರತಿದಿನ ಅರಿಶಿನವನ್ನು ಒಂದು ಕಪ್ ಹಾಲಿಗೆ ಸೇರಿಸಿ ಕುಡಿಯಿರಿ.
ಸಮಯಕ್ಕೆ ಸರಿಯಾಗಿ ಋತುಚಕ್ರ : ಅರಿಶಿನದ ಹಾಲು ಕುಡಿಯುತ್ತಿದ್ದರೆ ಮುಟ್ಟಿನ ನೋವು ಶಮನಗೊಂಡು, ಋತುಚಕ್ರ ಸಮಯಕ್ಕೆ ಸರಿಯಾಗಿ ಆಗುತ್ತದೆ. ಜೊತೆಗೆ, ಲ್ಯುಕೋರಿಯಾ, ಎಂಡೊಮೆಟ್ರಿಯೊಸಿಸ್, ಫೈಬ್ರಾಯ್ಡ್ಸ್ ಮತ್ತು ಹಾರ್ಮೋನುಗಳಲ್ಲಿ ಅಸಮತೋಲನ ಹೊಂದಿರುವ ಮಹಿಳೆಯರಿಗೂ ಅರಿಶಿನ ಹಾಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.

ಕೆಮ್ಮು ಮತ್ತು ಶೀತಕ್ಕೆ ಪರಿಹಾರ : ಅರಿಶಿನ ಹಾಲು ಆಂಟಿವೈರಲ್ ಮತ್ತು ಆಂಟಿಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿರುವುದರಿಂದ ಕೆಮ್ಮು ಮತ್ತು ಶೀತವನ್ನು ಹೋಗಲಾಡಿಸುತ್ತದೆ. ಗಂಟಲು ನೋಯುತ್ತಿದ್ದರೆ ಅರಿಶಿನ ಹಾಲನ್ನು ಕುಡಿಯಿರಿ.
ಉಸಿರಾಟದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ : ಅರಿಶಿನದ ಹಾಲು ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಅಸ್ತಮಾ, ಬ್ರಾಂಕೈಟಿಸ್ಗೆ ಪರಿಣಾಮಕಾರಿ ಪರಿಹಾರವಾಗಿದೆ. ಸೈನಸ್ ಮತ್ತು ಶ್ವಾಸಕೋಶದ ಸಮಸ್ಯೆಯಿದ್ದರೂ ಪರಿಹಾರ ನೀಡುತ್ತದೆ.

ತೂಕ ಕಡಿಮೆಯಾಗುತ್ತದೆ : ಹೌದು, ಅರಿಶಿನ ಹಾಲು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ! ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.
ಸರಿಯಾಗಿ ನಿದ್ರೆ ಬರಲು : ನಿದ್ರೆ ಸರಿಯಾಗಿ ಬರದಿದ್ದರೆ ಅರಿಶಿನ ಹಾಲು ಕುಡಿಯಿರಿ. ಮಲಗುವ ಮೊದಲು ಅರಿಶಿನ ಹಾಲು ಕುಡಿದರೆ ವಿಶ್ರಾಂತಿ ಸಿಗುತ್ತದೆ. ಮನಸ್ಸು ಶಾಂತಗೊಂಡು ನಿದ್ರೆ ಬರುತ್ತದೆ.

ಕೀಲು ನೋವು ನಿವಾರಣೆ : ಅರಿಶಿನವನ್ನು ಆಯುರ್ವೇದದಲ್ಲಿ ‘ನೈಸರ್ಗಿಕ ಆಸ್ಪಿರಿನ್’ಎಂದು ಕರೆಯುತ್ತಾರೆ. ಇದು ಎಲ್ಲಾ ರೀತಿಯ ನೋವನ್ನು ನಿವಾರಿಸುತ್ತದೆ. ಅರಿಶಿನ ಹಾಲಿನಲ್ಲಿ ಕ್ಯಾಲ್ಸಿಯಂ ಇರುವುದರಿಂದ ಕೀಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮೂಳೆಗಳನ್ನು ಆರೋಗ್ಯವಾಗಿರಿಸುತ್ತದೆ. ಈ ಹಾಲನ್ನು ಪ್ರತಿದಿನ ಸೇವಿಸುವುದರಿಂದ ಭವಿಷ್ಯದಲ್ಲಿ ಆಸ್ಟಿಯೊಪೊರೋಸಿಸ್ ಮತ್ತು ಸಂಧಿವಾತ ಬರುವುದನ್ನು ತಪ್ಪಿಸಬಹುದು.
ಚರ್ಮಕ್ಕೆ ಹೊಳಪು ನೀಡುತ್ತದೆ : ಅರಿಶಿನದ ಹಾಲು ಮೊಡವೆ, ಎಸ್ಜಿಮಾ, ಇತರ ಚರ್ಮದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಚರ್ಮದಲ್ಲಿ ಮೂಡಿರುವ ಸುಕ್ಕುಗಳನ್ನು ತೆಗೆದು, ನೈಸರ್ಗಿಕವಾಗಿ ಹೊಳೆಯಲು ಸಹಾಯ ಮಾಡುತ್ತದೆ.

ಅರಿಶಿನ ಹಾಲಿನ ಅಡ್ಡಪರಿಣಾಮಗಳು :
* ನಿಮಗೆ ಮೂತ್ರಪಿಂಡದ ಸಮಸ್ಯೆಗಳಿದ್ದರೆ ದಯವಿಟ್ಟು ಅರಿಶಿನದ ಹಾಲು ಕುಡಿಯಬೇಡಿ.
*ಹೆಚ್ಚು ಅರಿಶಿನ ಸೇವನೆಯಿಂದ ದೇಹ ಕಬ್ಬಿಣದಂಶವನ್ನು ಹೀರಿಕೊಳ್ಳಲು ಅಡ್ಡಿಯಾಗಬಹುದು. ಕಬ್ಬಿಣದಂಶವಿರುವ ಆಹಾರವನ್ನು ಸೇವಿಸದ ಜನರಲ್ಲಿ ಕಬ್ಬಿಣದ ಕೊರತೆಗೆ ಕಾರಣವಾಗಬಹುದು.
*ನೀವು ಈಗಾಗಲೇ ಮಧುಮೇಹ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ಹಾಲು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತುಂಬಾ ಕಡಿಮೆ ಮಾಡಬಹುದು. ನೀವು ಮಧುಮೇಹ ರೋಗಿಯಾಗಿದ್ದರೆ ಅರಿಶಿನ ಹಾಲನ್ನು ಸೇವಿಸುವ ಮೊದಲು ದಯವಿಟ್ಟು ನಿಮ್ಮ ವೈದ್ಯರನ್ನು ಪರೀಕ್ಷಿಸಿ.
ಅರಿಶಿನ ಹಾಲು ತಯಾರಿಸುವುದು ಹೇಗೆ?
ಬೇಕಾಗುವ ಪದಾರ್ಥಗಳು : 1 ಟೀ ಚಮಚ ಅರಿಶಿನ, ಹಾಲು ½ ಕಪ್, 1ಟೀ ಚಮಚ ದಾಲ್ಚಿನ್ನಿ ಪುಡಿ, 1ಟೀ ಚಮಚ ಶುಂಠಿ ಪುಡಿಕಾಳುಮೆಣಸಿನಪುಡಿ ಚಿಟಿಕೆಯಷ್ಟು, 1ಟೀಸ್ಪೂನ್ ಜೇನುತುಪ್ಪ. ಮಾಡುವ ವಿಧಾನ :ಒಂದು ಪಾತ್ರೆಯಲ್ಲಿ ಮೇಲೆ ಹೇಳಿದ ಎಲ್ಲಾ ಪದಾರ್ಥಗಳನ್ನು ಬೆರೆಸಿ ಕುದಿಸಿರಿ ನಂತರ ಕಡಿಮೆ ಮಾಡಿ ಉರಿಯಲ್ಲಿ 10 ನಿಮಿಷಗಳ ಕಾಲ ಕುದಿಸಿ. ಸೋಸಿ, ಇದಕ್ಕೆ ಚಿಟಿಕೆಯಷ್ಟು ದಾಲ್ಚಿನ್ನಿ ಸೇರಿಸಿ ಕುಡಿಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…