ಸುದ್ದಿ

ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

175

ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ.

ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು ಕಾಪಾಡುತ್ತದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಹೊಸ ಟಿವಿಎಸ್ ಅಪಾಚಿ ಆರ್ ಆರ್ 310 ಆರ್ ಟಿ ಸ್ಲಿಪ್ಪರ್ ಕ್ಲಚ್ ಒಂದು ಶಕ್ತಿಯುತ ಹಾಗೂ ಅಧಿಕ ಉಪಯುಕ್ತತೆಯ ಸೌಲಭ್ಯವಾಗಿದ್ದು, ಇದು ನಗರ ಪ್ರದೇಶ, ಹೆದ್ದಾರಿಗಳ ಜೊತೆಗೆ ರೇಸಿಂಗ್ ಸ್ಪರ್ಧೆಗಳಿಗೂ ಉತ್ತಮವಾಗಿವೆ.

ಇದು ರೇಸಿಂಗ್ ಟ್ರ್ಯಾಕ್ ಗಳಲ್ಲಿ ವೇಗವಾಗಿ ಸಾಗುವಾಗ ಹಿಂಭಾಗದ ದೃಶ್ಯಗಳನ್ನು ಸ್ಪಷ್ಟವಾಗಿ ತೋರಿಸುವ ಡಿಒಎಚ್ ಸಿ (ಡಬ್ಬಲ್ ಓವರ್ ಹೆಡ್ ಕ್ಯಾಮೆರಾ), ಲಿಕ್ವಿಡ್ ಕೂಲ್ಡ್ ಇಂಜಿನ್ ಹಾಗೂ ಆಯಿಲ್ ಕೂಲಿಂಗ್ ತಂತ್ರಜ್ಞಾನ, 6-ವೇಗದ ಗೇರ್ ಬಾಕ್ಸ್, ಸ್ಪರ್ಧೆಗಳಿಗೆ ಅನುಕೂಲಕರವಾದ ವರ್ಟಿಕಲ್ ಸ್ಪೀಡೋ-ಕಮ್-ಟ್ಯಾಕೋಮೀಟರ್, ಮೈಕೆಲಿನ್ ಸ್ಟ್ರೀಟ್ ಸ್ಪೋರ್ಟ್ಸ್ ಚಕ್ರಗಳನ್ನು ಒಳಗೊಂಡಿದೆ. ಇದು ಕೆಂಪು ಹಾಗೂ ಕಪ್ಪು ಬಣ್ಣಗಳಲ್ಲಿ ಲಭ್ಯವಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ವಿಸ್ಮಯ ಜಗತ್ತು

    ಈ ಮಹಿಳೆ ಭೂತವನ್ನೇ ಕಾಮಕ್ಕೆ ಪ್ರಚೋದಿಸುತ್ತಾಳಂತೆ..!ತಿಳಿಯಲು ಈ ಲೇಖನ ಓದಿ..

    ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

  • ಸುದ್ದಿ

    ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

    ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು…

  • ಸುದ್ದಿ

    ಎಸ್‌ಬಿಐ ಗ್ರಾಹಕರು ಗಮನಿಸಬೇಕಾದ ವಿಷಯ ; ಅಕ್ಟೋಬರ್ 1 ರಿಂದ ಬದಲಾಗಲಿದೆ ಈ 6 ನಿಯಮ,.!ತಪ್ಪದೇ ತಿಳಿದುಕೊಳ್ಳಿ,.!

    ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್‌ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್‌ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್‌ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್‌ನಿಂದ ಅಕ್ಟೋಬರ್ 1 ರಿಂದ…

  • ಆರೋಗ್ಯ

    ವೀಳ್ಯದೆಲೆ ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….