ಆರೋಗ್ಯ

ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

72

ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ. ಎಲೆಯ ಅಲಗು ಭಾಗದಲ್ಲಿ ರೆಟಿಕ್ಯುಲೇಟ್ ನಾಳವಿನ್ಯಾಸ ಇದೆ. ಬೆಂಡೆಕಾಯಿ ಎಂಬ ತರಕಾರಿಯನ್ನು ಹಲವು ರೀತಿಯ ಜೀವಸತ್ವಗಳ ಆಗಾರ ಎನ್ನಬಹುದು. ಇದರಿಂದ ತಯಾರಿಸುವ ಅಡುಗೆ ಸಹ ಬಹಳ ರುಚಿಯಾಗಿರುತ್ತದೆ. ಇನ್ನು ಕೆಲವರಿಗೆ ಬೆಂಡೆ ಎಂದರೇನೇ ಅಷ್ಟಕಷ್ಟೆ. ಆದರೆ ಈ ತರಕಾರಿಯಿಂದ ಸಿಗುವ ಪ್ರಯೋಜನಗಳು ಮಾತ್ರ ಅಷ್ಟಿಷ್ಟಲ್ಲ. ಇದರಲ್ಲಿ ಅಡಗಿರುವ ಪೋಷಕಾಂಶಗಳು ಹಲವು  ರೋಗಗಳಿಗೆ ಮನೆಮದ್ದು. ಬೆಂಡೆಯು ಮಾಲ್ವೇಸೀ ಕುಟುಂಬಕ್ಕೆ ಸೇರಿದ ದ್ವಿದಳ ಸಸ್ಯ. ಇದರ ವೈಜ್ಞಾನಿಕ ಹೆಸರು ಹೈಬಿಸ್ಕಸ್ ಎಸ್ಕ್ಯುಲೆಂಟಸ್ ಅಥವಾ ಅಬಲ್‍ಮಾಸ್ಕಸ್ ಎಸ್ಕ್ಯುಲೆಂಟಸ್. ಇದನ್ನು ಹಿಂದಿಯಲ್ಲಿ ಬಿಂಡಿ.

ಬೆಂಡೆಕಾಯಿಯು ತೂಕ ಇಳಿಸಲು ನೆರವಾಗುವುದು

ಬೆಂಡೆಕಾಯಿಯಲ್ಲಿ ಇರುವ ತುಂಬಾ ಕಡಿಮೆ ಕ್ಯಾಲರಿ (30ಕೆಸಿಎಎಲ್/100ಗ್ರಾಂ) ತೂಕ ಇಳಿಸಲು ಒಂದು ಅತ್ಯುತ್ತಮ ಆಹಾರ. ಇದು ತುಂಬಾ ಕಡಿಮೆ ಕ್ಯಾಲರಿ ನೀಡುವುದು. ಅಷ್ಟೇ ಅಲ್ಲದೇ ಬೆಂಡೆಕಾಯಿಯಲ್ಲಿ ಉನ್ನತ ಮಟ್ಟದ ನಾರಿನಾಂಶವಿದ್ದು, ಇದು ಹೊಟ್ಟೆಯು ದೀರ್ಘಕಾಲ ತುಂಬಿರುವಂತೆ ಮಾಡುವುದು.

ಹೃದಯ ಕಾಯಿಲೆಗೆ ಒಳ್ಳೆಯದು

ಬೆಂಡೆಕಾಯಿಯಲ್ಲಿ ಹೀರಿಕೊಳ್ಳುವ ನಾರಿನಾಂಶ ಪೆಕ್ಟಿನ್ ಇದೆ. ಪೆಕ್ಟಿನ್ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವುದು ಮತ್ತು ಅಪಧಮನಿಕಾಠಿಣ್ಯ ತಡೆಯುವುದು. ಜಮೆಯಾಗಿರುವಂತಹ ಕೊಲೆಸ್ಟ್ರಾಲ್ ಮತ್ತು ಹೆಪ್ಪುಗಟ್ಟುವಿಕೆಯನ್ನು ಇದು ತಡೆಯುವುದು.

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಇದಕ್ಕೆ ಪ್ರಮುಖ ಕಾರಣವಾಗಿದೆ. ಯುಜೆನಾಲ್ ಎನ್ನುವಂತಹ ಒಂದು ರೀತಿಯ ನಾರಿನಾಂಶವು ಜೀರ್ಣಕ್ರಿಯೆ ನಿಧಾನಗೊಳಿಸುವುದು ಮತ್ತು ರಕ್ತನಾಳದಲ್ಲಿ ಇರುವಂತಹ ಸಕ್ಕರೆ ಹೀರಿಕೊಳ್ಳುವುದು. ಊಟದ ಬಳಿಕ ಸಕ್ಕರೆ ಮಟ್ಟವು ಏರಿಕೆ ಆಗುವುದನ್ನು ಇದು ತಡೆಯುವುದು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುವುದು. ನಾರಿನಾಂಶವು ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.

ಜೀರ್ಣಕ್ರಿಯೆಗೆ ಸಹಕಾರಿ

ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಇದು ಕರುಳಿನ ಕ್ರಿಯೆಯನ್ನು ನಿಯಂತ್ರಿಉಸುವುದ. ಪೆಕ್ಟಿನ್ ಕರುಳಿನಲ್ಲಿ ಊದಿಕೊಂಡು ಕರುಳಿನಲ್ಲಿರುವಂತಹ ಕಲ್ಮಷವು ಸುಲಭವಾಗಿ ಹೊರಹೋಗುವಂತೆ ಮಾಡುವುದು. ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಬೆಂಡೆಕಾಯಿ ತಿಂದರೆ ಅದರಿಂದ ಲಾಭ ಪಡೆಯಬಹುದು.

ಗರ್ಭಧಾರಣೆಗೆ ನೆರವಾಗುವುದು

ಗರ್ಭ ಧರಿಸಬೇಕು ಎಂದು ಬಯಸುವವರಿಗೆ ಬೆಂಡೆಕಾಯಿಯು ತುಂಬಾ ಒಳ್ಳೆಯ ಆಹಾರವಾಗಿದೆ. ಬೆಂಡೆಕಾಯಿಯಲ್ಲಿ ಇರುವಂತಹ ಫಾಲಿಕ್ ಆಮ್ಲವು ಗರ್ಭ ಧರಿಸಲು ನೆರವಾಗುವುದು ಮಾತ್ರವಲ್ಲದೆ ಇದು ಭ್ರೂಣದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸುವುದು. ಬೆಂಡೆಕಾಯಿಯು ಗರ್ಭಪಾತವಾಗದಂತೆ ತಡೆಯುವುದು. ಭ್ರೂಣದ ನರಕೊಳವೆಗಳು ಬೆಳೆಯಲು ಫಾಲಿಕ್ ಆಮ್ಲವು ನೆರವಾಗುವುದು.

ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ

ಬೆಂಡೆಯಲ್ಲಿರುವ ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳು ಚರ್ಮಕ್ಕೆ ಒಳಗಿನಿಂದ ನೀಡುವ ಪೋಷಣೆಯ ಪರಿಣಾಮವಾಗಿ ಚರ್ಮ ತನ್ನ ಸಹಜ ಸೌಂದರ್ಯ ಮತ್ತು ಕಾಂತಿಯನ್ನು ಹೊಂದುತ್ತದೆ. ಇದಕ್ಕಾಗಿ ಎಳೆಯ ಬೆಂಡೆಯನ್ನು ಆಗಾಗ ಹಸಿಯಾಗಿ ತಿಂದರೆ ಹೆಚ್ಚು ಪರಿಣಾಮಕಾರಿಯಾಗಿದೆ.

ಪ್ರತಿರೋಧಕ ಶಕ್ತಿ ಸುಧಾರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ವಿಟಮಿನ್ ಸಿ ಅಂಶವು ಪ್ರತಿರೋಧಕ ಶಕ್ತಿ ಸುಧಾರಣೆ ಮಾಡುವಲ್ಲಿ ಸಹಕಾರಿ ಆಗಿರುವುದು.

ರಕ್ತಹೀನತೆ ನಿವಾರಣೆ

ಬೆಂಡೆಕಾಯಿಯಲ್ಲಿ ಕಬ್ಬಿನಾಂಶ, ಫಾಲಿಕ್ ಆಮ್ಲ ಮತ್ತು ವಿಟಮಿನ್ ಕೆ ಇದೆ. ಇದು ರಕ್ತಹೀನತೆ ತಡೆಯಲು ಮತ್ತು ನಿವಾರಣೆ ಮಾಡಲು ನೆರವಾಗುವುದು.

ಕರುಳಿನ ಕ್ಯಾನ್ಸರ್ ತಡೆಯಲು ನೆರವಾಗುವುದು

ಬೇರೆಲ್ಲಾ ನಾರಿನಾಂಶವಿರುವಂತಹ ಆಹಾರದಂತೆ ಬೆಂಡೆಕಾಯಿ ಕೂಡ ಕರುಳಿನ ಕ್ಯಾನರ್ ತಡೆಯುವಲ್ಲಿ ನೆರವಾಗುವುದು. ಇದು ಜೀರ್ಣಕ್ರಿಯೆಯನ್ನು ಸರಿಯಾಗಿಟ್ಟು ಅದು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ನೆರವಾಗುವುದು.

ಕಣ್ಣಿನ ದೃಷ್ಟಿ ಸುಧಾರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ಬೆಟಾ ಕ್ಯಾರೋಟಿನ್ ಮತ್ತು ವಿಟಮಿನ್ ಎ ಅಂಶವು ಕಣ್ಣಿನ ದೃಷ್ಟಿ ಸುಧಾರಿಸಲು ತುಂಬಾ ನೆರವಾಗುವುದು.

ತಲೆಹೊಟ್ಟು ಮತ್ತು ಹೇನಿಗೆ ಚಿಕಿತ್ಸೆ

ತಲೆಹೊಟ್ಟು ಮತ್ತು ಹೇನು ನಿವಾರಿಸಲು ಬೆಂಡೆಕಾಯಿ ಬಳಸಲಾಗುತ್ತದೆ. ನೇರವಾಗಿ ಬೆಂಡೆಕಾಯಿ ಕತ್ತರಿಸಿಕೊಳ್ಳಿ ಮತ್ತು ಇದನ್ನು ನೀರಿನಲ್ಲಿ ಬಿಸಿ ಮಾಡಿ. ಈ ನೀರಿಗೆ ಲಿಂಬೆರಸ ಹಾಕಿ ಮತ್ತು ಕೂದಲು ತೊಳೆಯಲು ಈ ನೀರನ್ನು ಬಳಸಿ. ಬೆಂಡೆಕಾಯಿಯಲ್ಲಿ ನಾರಿನಾಂಶವು ಹೆಚ್ಚಿನ ಪ್ರಮಾಣದಲ್ಲಿ ಇರುವ ಕಾರಣದಿಂದಾಗಿ ಆಹಾರ ತಜ್ಞರು ಸಾಧ್ಯವಾದಷ್ಟು ತರಕಾರಿ ಸೇವಿಸಲು ಹೇಳುವರು.

ಕೊಲೆಸ್ಟ್ರಾಲ್ ರೋಗಿಗಳಿಗೆ ಸೂಕ್ತವಾಗಿದೆ

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇರುವ ರೋಗಿಗಳಿಗೆ ವೈದ್ಯರು ಹೆಚ್ಚಿನ ಆಹಾರಗಳನ್ನು ಸೇವಿಸದಂತೆ ಸಲಹೆ ಮಾಡುತ್ತಾರೆ. ಆದರೆ ಈ ರೋಗಿಗಳು ಬೆಂಡೆಕಾಯಿಯನ್ನು ಮಾತ್ರ ಸುರಕ್ಷಿತವಾಗಿ ಸೇವಿಸಬಹುದು. ಏಕೆಂದರೆ ಬೆಂಡೆಯಲ್ಲಿ ಯಾವುದೇ ಕೊಲೆಸ್ಟ್ರಾಲ್ ಆಗಲೀ ಕೊಲೆಸ್ಟ್ರಾಲ್ ಉಂಟುಮಾಡುವ ಕಣಗಳಾಗಲೀ ಇಲ್ಲದೇ ಇರುವುದರಿಂದ ಕೊಲೆಸ್ಟ್ರಾಲ್ ರೋಗಿಗಳ ಪಾಲಿನ ಪಂಚಾಮೃತವಾಗಿದೆ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು  ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!

  • ಉಪಯುಕ್ತ ಮಾಹಿತಿ

    1 ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸಲು ಬೇಕಾಗುವ ಹಣ ಎಷ್ಟು. ನೋಡಿ ರೈಲು ಹಳಿಯ ಸೀಕ್ರೆಟ್.

    ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…

  • ಸುದ್ದಿ

    ಅಂಬೇಡ್ಕರ್ ಸಂಘಗಳಿಂದ ಚೈತ್ರ ಕೋಟೂರು ವಿರುದ್ಧ ಹೋರಾಟ..!ಯಾಕೆ ಗೊತ್ತಾ?

    ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…

  • ವಿಚಿತ್ರ ಆದರೂ ಸತ್ಯ

    8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….