ಆರೋಗ್ಯ

ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

61

ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ. ಎಲೆಯ ಅಲಗು ಭಾಗದಲ್ಲಿ ರೆಟಿಕ್ಯುಲೇಟ್ ನಾಳವಿನ್ಯಾಸ ಇದೆ. ಬೆಂಡೆಕಾಯಿ ಎಂಬ ತರಕಾರಿಯನ್ನು ಹಲವು ರೀತಿಯ ಜೀವಸತ್ವಗಳ ಆಗಾರ ಎನ್ನಬಹುದು. ಇದರಿಂದ ತಯಾರಿಸುವ ಅಡುಗೆ ಸಹ ಬಹಳ ರುಚಿಯಾಗಿರುತ್ತದೆ. ಇನ್ನು ಕೆಲವರಿಗೆ ಬೆಂಡೆ ಎಂದರೇನೇ ಅಷ್ಟಕಷ್ಟೆ. ಆದರೆ ಈ ತರಕಾರಿಯಿಂದ ಸಿಗುವ ಪ್ರಯೋಜನಗಳು ಮಾತ್ರ ಅಷ್ಟಿಷ್ಟಲ್ಲ. ಇದರಲ್ಲಿ ಅಡಗಿರುವ ಪೋಷಕಾಂಶಗಳು ಹಲವು  ರೋಗಗಳಿಗೆ ಮನೆಮದ್ದು. ಬೆಂಡೆಯು ಮಾಲ್ವೇಸೀ ಕುಟುಂಬಕ್ಕೆ ಸೇರಿದ ದ್ವಿದಳ ಸಸ್ಯ. ಇದರ ವೈಜ್ಞಾನಿಕ ಹೆಸರು ಹೈಬಿಸ್ಕಸ್ ಎಸ್ಕ್ಯುಲೆಂಟಸ್ ಅಥವಾ ಅಬಲ್‍ಮಾಸ್ಕಸ್ ಎಸ್ಕ್ಯುಲೆಂಟಸ್. ಇದನ್ನು ಹಿಂದಿಯಲ್ಲಿ ಬಿಂಡಿ.

ಬೆಂಡೆಕಾಯಿಯು ತೂಕ ಇಳಿಸಲು ನೆರವಾಗುವುದು

ಬೆಂಡೆಕಾಯಿಯಲ್ಲಿ ಇರುವ ತುಂಬಾ ಕಡಿಮೆ ಕ್ಯಾಲರಿ (30ಕೆಸಿಎಎಲ್/100ಗ್ರಾಂ) ತೂಕ ಇಳಿಸಲು ಒಂದು ಅತ್ಯುತ್ತಮ ಆಹಾರ. ಇದು ತುಂಬಾ ಕಡಿಮೆ ಕ್ಯಾಲರಿ ನೀಡುವುದು. ಅಷ್ಟೇ ಅಲ್ಲದೇ ಬೆಂಡೆಕಾಯಿಯಲ್ಲಿ ಉನ್ನತ ಮಟ್ಟದ ನಾರಿನಾಂಶವಿದ್ದು, ಇದು ಹೊಟ್ಟೆಯು ದೀರ್ಘಕಾಲ ತುಂಬಿರುವಂತೆ ಮಾಡುವುದು.

ಹೃದಯ ಕಾಯಿಲೆಗೆ ಒಳ್ಳೆಯದು

ಬೆಂಡೆಕಾಯಿಯಲ್ಲಿ ಹೀರಿಕೊಳ್ಳುವ ನಾರಿನಾಂಶ ಪೆಕ್ಟಿನ್ ಇದೆ. ಪೆಕ್ಟಿನ್ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವುದು ಮತ್ತು ಅಪಧಮನಿಕಾಠಿಣ್ಯ ತಡೆಯುವುದು. ಜಮೆಯಾಗಿರುವಂತಹ ಕೊಲೆಸ್ಟ್ರಾಲ್ ಮತ್ತು ಹೆಪ್ಪುಗಟ್ಟುವಿಕೆಯನ್ನು ಇದು ತಡೆಯುವುದು.

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಇದಕ್ಕೆ ಪ್ರಮುಖ ಕಾರಣವಾಗಿದೆ. ಯುಜೆನಾಲ್ ಎನ್ನುವಂತಹ ಒಂದು ರೀತಿಯ ನಾರಿನಾಂಶವು ಜೀರ್ಣಕ್ರಿಯೆ ನಿಧಾನಗೊಳಿಸುವುದು ಮತ್ತು ರಕ್ತನಾಳದಲ್ಲಿ ಇರುವಂತಹ ಸಕ್ಕರೆ ಹೀರಿಕೊಳ್ಳುವುದು. ಊಟದ ಬಳಿಕ ಸಕ್ಕರೆ ಮಟ್ಟವು ಏರಿಕೆ ಆಗುವುದನ್ನು ಇದು ತಡೆಯುವುದು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುವುದು. ನಾರಿನಾಂಶವು ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.

ಜೀರ್ಣಕ್ರಿಯೆಗೆ ಸಹಕಾರಿ

ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಇದು ಕರುಳಿನ ಕ್ರಿಯೆಯನ್ನು ನಿಯಂತ್ರಿಉಸುವುದ. ಪೆಕ್ಟಿನ್ ಕರುಳಿನಲ್ಲಿ ಊದಿಕೊಂಡು ಕರುಳಿನಲ್ಲಿರುವಂತಹ ಕಲ್ಮಷವು ಸುಲಭವಾಗಿ ಹೊರಹೋಗುವಂತೆ ಮಾಡುವುದು. ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಬೆಂಡೆಕಾಯಿ ತಿಂದರೆ ಅದರಿಂದ ಲಾಭ ಪಡೆಯಬಹುದು.

ಗರ್ಭಧಾರಣೆಗೆ ನೆರವಾಗುವುದು

ಗರ್ಭ ಧರಿಸಬೇಕು ಎಂದು ಬಯಸುವವರಿಗೆ ಬೆಂಡೆಕಾಯಿಯು ತುಂಬಾ ಒಳ್ಳೆಯ ಆಹಾರವಾಗಿದೆ. ಬೆಂಡೆಕಾಯಿಯಲ್ಲಿ ಇರುವಂತಹ ಫಾಲಿಕ್ ಆಮ್ಲವು ಗರ್ಭ ಧರಿಸಲು ನೆರವಾಗುವುದು ಮಾತ್ರವಲ್ಲದೆ ಇದು ಭ್ರೂಣದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸುವುದು. ಬೆಂಡೆಕಾಯಿಯು ಗರ್ಭಪಾತವಾಗದಂತೆ ತಡೆಯುವುದು. ಭ್ರೂಣದ ನರಕೊಳವೆಗಳು ಬೆಳೆಯಲು ಫಾಲಿಕ್ ಆಮ್ಲವು ನೆರವಾಗುವುದು.

ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ

ಬೆಂಡೆಯಲ್ಲಿರುವ ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳು ಚರ್ಮಕ್ಕೆ ಒಳಗಿನಿಂದ ನೀಡುವ ಪೋಷಣೆಯ ಪರಿಣಾಮವಾಗಿ ಚರ್ಮ ತನ್ನ ಸಹಜ ಸೌಂದರ್ಯ ಮತ್ತು ಕಾಂತಿಯನ್ನು ಹೊಂದುತ್ತದೆ. ಇದಕ್ಕಾಗಿ ಎಳೆಯ ಬೆಂಡೆಯನ್ನು ಆಗಾಗ ಹಸಿಯಾಗಿ ತಿಂದರೆ ಹೆಚ್ಚು ಪರಿಣಾಮಕಾರಿಯಾಗಿದೆ.

ಪ್ರತಿರೋಧಕ ಶಕ್ತಿ ಸುಧಾರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ವಿಟಮಿನ್ ಸಿ ಅಂಶವು ಪ್ರತಿರೋಧಕ ಶಕ್ತಿ ಸುಧಾರಣೆ ಮಾಡುವಲ್ಲಿ ಸಹಕಾರಿ ಆಗಿರುವುದು.

ರಕ್ತಹೀನತೆ ನಿವಾರಣೆ

ಬೆಂಡೆಕಾಯಿಯಲ್ಲಿ ಕಬ್ಬಿನಾಂಶ, ಫಾಲಿಕ್ ಆಮ್ಲ ಮತ್ತು ವಿಟಮಿನ್ ಕೆ ಇದೆ. ಇದು ರಕ್ತಹೀನತೆ ತಡೆಯಲು ಮತ್ತು ನಿವಾರಣೆ ಮಾಡಲು ನೆರವಾಗುವುದು.

ಕರುಳಿನ ಕ್ಯಾನ್ಸರ್ ತಡೆಯಲು ನೆರವಾಗುವುದು

ಬೇರೆಲ್ಲಾ ನಾರಿನಾಂಶವಿರುವಂತಹ ಆಹಾರದಂತೆ ಬೆಂಡೆಕಾಯಿ ಕೂಡ ಕರುಳಿನ ಕ್ಯಾನರ್ ತಡೆಯುವಲ್ಲಿ ನೆರವಾಗುವುದು. ಇದು ಜೀರ್ಣಕ್ರಿಯೆಯನ್ನು ಸರಿಯಾಗಿಟ್ಟು ಅದು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ನೆರವಾಗುವುದು.

ಕಣ್ಣಿನ ದೃಷ್ಟಿ ಸುಧಾರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ಬೆಟಾ ಕ್ಯಾರೋಟಿನ್ ಮತ್ತು ವಿಟಮಿನ್ ಎ ಅಂಶವು ಕಣ್ಣಿನ ದೃಷ್ಟಿ ಸುಧಾರಿಸಲು ತುಂಬಾ ನೆರವಾಗುವುದು.

ತಲೆಹೊಟ್ಟು ಮತ್ತು ಹೇನಿಗೆ ಚಿಕಿತ್ಸೆ

ತಲೆಹೊಟ್ಟು ಮತ್ತು ಹೇನು ನಿವಾರಿಸಲು ಬೆಂಡೆಕಾಯಿ ಬಳಸಲಾಗುತ್ತದೆ. ನೇರವಾಗಿ ಬೆಂಡೆಕಾಯಿ ಕತ್ತರಿಸಿಕೊಳ್ಳಿ ಮತ್ತು ಇದನ್ನು ನೀರಿನಲ್ಲಿ ಬಿಸಿ ಮಾಡಿ. ಈ ನೀರಿಗೆ ಲಿಂಬೆರಸ ಹಾಕಿ ಮತ್ತು ಕೂದಲು ತೊಳೆಯಲು ಈ ನೀರನ್ನು ಬಳಸಿ. ಬೆಂಡೆಕಾಯಿಯಲ್ಲಿ ನಾರಿನಾಂಶವು ಹೆಚ್ಚಿನ ಪ್ರಮಾಣದಲ್ಲಿ ಇರುವ ಕಾರಣದಿಂದಾಗಿ ಆಹಾರ ತಜ್ಞರು ಸಾಧ್ಯವಾದಷ್ಟು ತರಕಾರಿ ಸೇವಿಸಲು ಹೇಳುವರು.

ಕೊಲೆಸ್ಟ್ರಾಲ್ ರೋಗಿಗಳಿಗೆ ಸೂಕ್ತವಾಗಿದೆ

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇರುವ ರೋಗಿಗಳಿಗೆ ವೈದ್ಯರು ಹೆಚ್ಚಿನ ಆಹಾರಗಳನ್ನು ಸೇವಿಸದಂತೆ ಸಲಹೆ ಮಾಡುತ್ತಾರೆ. ಆದರೆ ಈ ರೋಗಿಗಳು ಬೆಂಡೆಕಾಯಿಯನ್ನು ಮಾತ್ರ ಸುರಕ್ಷಿತವಾಗಿ ಸೇವಿಸಬಹುದು. ಏಕೆಂದರೆ ಬೆಂಡೆಯಲ್ಲಿ ಯಾವುದೇ ಕೊಲೆಸ್ಟ್ರಾಲ್ ಆಗಲೀ ಕೊಲೆಸ್ಟ್ರಾಲ್ ಉಂಟುಮಾಡುವ ಕಣಗಳಾಗಲೀ ಇಲ್ಲದೇ ಇರುವುದರಿಂದ ಕೊಲೆಸ್ಟ್ರಾಲ್ ರೋಗಿಗಳ ಪಾಲಿನ ಪಂಚಾಮೃತವಾಗಿದೆ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು  ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರವಿಚಂದ್ರನ್ ಇನ್ನು ಮುಂದೆ ಡಾ.ರವಿಚಂದ್ರನ್ : ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ ನಮ್ಮ ಕನಸುಗಾರ….!

    ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್  ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ  ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್  ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…

  • ಸುದ್ದಿ

    ಹುಟ್ಟುಹಬ್ಬದಂದು ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಪರೀಕ್ಷೆ ಮಾಡಿಸಿ ಆಚರಿಸಿದ ನಟಿ ಪ್ರಣಿತ…!

    ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…

  • ಸಿನಿಮಾ

    ಸ್ಯಾಂಡಲ್ ವುಡ್ ತಾರಾ ಜೋಡಿ ದಿಗಂತ್-ಐಂದ್ರಿತಾ ಮದುವೆಗೆ ಹೋಗುವ ಅತಿಥಿಗಳು ಈ ಷರತ್ತನ್ನು ಪಾಲಿಸಬೇಕು..!

    ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…

  • ಸಿನಿಮಾ

    ಒಳ್ಳೆ ಹುಡುಗ ಪ್ರಥಮ್’ನ ಹುಚ್ಚಾಟ!ಭುವನ್ ತೊಡೆ ಕಚ್ಚಿದ ಪ್ರಥಮ್! ಅಲ್ಲಿ ನಡೆದಿದ್ದಾದರು ಏನು ಗೊತ್ತಾ?

    ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…

  • ಸುದ್ದಿ

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಸರ್ಕಾರದ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ…!

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…