ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ.
ಈ ಹಿಟ್ಟು ಮಾನವ ದೇಹಕ್ಕೆ ವಿಷಕಾರಿಯಾಗಿದ್ದು, ನೀವು ಇದನ್ನು ಪ್ರತಿದಿನ ಬಳಸಿದರೆ ಅದು ನಿಮ್ಮ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಮಲಬದ್ಧತೆ, ಹೊಟ್ಟೆನೋವು ಗೋಧಿ ಗಟ್ಟಿ ಧಾನ್ಯವಾಗಿದ್ದು, ಇದರ ಹಿಟ್ಟಿನಿಂದ ಮಾಡಿದ ಪದಾರ್ಥಗಳನ್ನು ಸೇವಿಸಿದಾಗ, ಅದು ಹೊಟ್ಟೆಯಲ್ಲಿ ನಿಧಾನವಾಗಿ ಜೀರ್ಣಿಸಿಕೊಳ್ಳಲು ಶುರು ಮಾಡುತ್ತದೆ. ಮಲಬದ್ಧತೆ ಇರುವವರಿಗಂತೂ ಇದನ್ನು ಜೀರ್ಣಿಸಿಕೊಳ್ಳವುದು ಇನ್ನು ಕಷ್ಟವಾಗುತ್ತದೆ. ಉಳಿಸಿಕೊಂಡ ಹಸಿ ಹಿಟ್ಟಿನಿಂದ ರೊಟ್ಟಿಗಳನ್ನು ಮಾಡಿಕೊಂಡು ತಿನ್ನುವುದರಿಂದ ಹೊಟ್ಟೆ ನೋವು, ಮಲಬದ್ಧತೆ ಮತ್ತು ಹೊಟ್ಟೆಯ ತೊಂದರೆ ಉಂಟಾಗುತ್ತದೆ.
ರೋಗ ನಿರೋಧಕ ಶಕ್ತಿ ದುರ್ಬಲವಾಗುತ್ತದೆ ವಿಜ್ಞಾನಿಗಳ ಪ್ರಕಾರ, ಉಳಿದ ಹಸಿ ಹಿಟ್ಟಿನಲ್ಲಿ ರೊಟ್ಟಿಗಳನ್ನು ಮಾಡಬಾರದು. ಅವರ ಪ್ರಕಾರ, ಹಿಟ್ಟನ್ನು ಕಲಸಿದ ನಂತರ, ಆದಷ್ಟು ಬೇಗ ಬಳಸಬೇಕು. ಏಕೆಂದರೆ ಒಂದು ಗಂಟೆಯ ನಂತರ ಅದರಲ್ಲಿ ರಾಸಾಯನಿಕ ಬದಲಾವಣೆಗಳು ಪ್ರಾರಂಭವಾಗುತ್ತವೆ. ಇದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ಹಿಟ್ಟಿನಲ್ಲಿ ಚಪಾತಿಗಳು ಅಥವಾ ಪರೋಟಗಳನ್ನು ಹಲವಾರು ದಿನಗಳವರೆಗೆ ನಿರಂತರವಾಗಿ ಸೇವಿಸಿದರೆ, ವ್ಯಕ್ತಿಯು ಅನಾರೋಗ್ಯಕ್ಕೆ ಒಳಗಾಗುವುದು ಸಹಜ. ನೀವು ನಿಯಮಿತವಾಗಿ ಹಳೆಯ ಹಿಟ್ಟನ್ನು ಬಳಸಿದರೆ ಜೀರ್ಣಾಂಗ ವ್ಯವಸ್ಥೆಯಲ್ಲಿ ಅಸಮತೋಲನ ಉಂಟಾಗುತ್ತದೆ. ರೋಗ ನಿರೋಧಕ ಶಕ್ತಿ ಕೂಡ ದುರ್ಬಲವಾಗುತ್ತಾ ಹೋಗುತ್ತದೆ.
ಹಿಟ್ಟನ್ನು ಹೇಗೆ ಬಳಸಬೇಕು? ಕೆಲವರಿಗೆ ಮಾರುಕಟ್ಟೆಗಳು ದೂರವಾಗುವುದರಿಂದ ಹಿಟ್ಟನ್ನು ಸಂಗ್ರಹಿಸುವುದು ಸಹಜ. ಹೀಗೆ ಹಿಟ್ಟನ್ನು ಸಂಗ್ರಹ ಮಾಡುವಾಗ ಜಾಗರೂಕರಾಗಿ ಉಪಯೋಗಿಸಬೇಕು. ಈ ಹಿಟ್ಟನ್ನು ಸುಮಾರು 6 ತಿಂಗಳ ನಂತರ ಬಳಸಬಾರದು. ಸ್ವಚ್ಛವಾಗಿರುವ ಡಬ್ಬಿಯಲ್ಲಿ ಎತ್ತಿಡಬೇಕು. ನೀರಿನ ಕೈಯ್ಯಲ್ಲಿ ಬಳಸದೆ, ಒಣ ಕೈ ಉಪಯೋಗಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.